Asianet Suvarna News Asianet Suvarna News

ರೈಲ್ವೆ ನೌಕರಿಗಾಗಿ ಭೂಮಿ ಲಂಚ ಪಡೆದ ಹಗರಣ: ಲಾಲು ಕುಟುಂಬಕ್ಕೆ ಮತ್ತೆ ಶಾಕ್

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ನಡೆದಿತ್ತು ಎನ್ನಲಾದ 'ರೈಲ್ವೆ ಉದ್ಯೋ ಗಕ್ಕಾಗಿ ಭೂಮಿ ಹಗರಣ'ದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ಮೊದಲ ಆರೋಪಪಟ್ಟಿ ದಾಖಲಿಸಿದೆ. 

Land for Railway job scam case another shock to Lalu Prasad yadav family akb
Author
First Published Jan 10, 2024, 9:14 AM IST

ನವದೆಹಲಿ: ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ನಡೆದಿತ್ತು ಎನ್ನಲಾದ 'ರೈಲ್ವೆ ಉದ್ಯೋ ಗಕ್ಕಾಗಿ ಭೂಮಿ ಹಗರಣ'ದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ಮೊದಲ ಆರೋಪಪಟ್ಟಿ ದಾಖಲಿಸಿದೆ. ಇದರಲ್ಲಿ ಲಾಲು ಪತ್ನಿ, ಬಿಹಾರದ ಮಾಜಿ ಸಿಎಂ ರಾಬ್ಡಿ ದೇವಿ ಮತ್ತು ಅವರ ಪುತ್ರಿ ಮಿಸಾ ಭಾರತಿ ಸೇರಿ ಹಲವರನ್ನು ಹೆಸರಿಸಿದೆ.

ಲಾಲು ಮತ್ತೊಬ್ಬ ಪುತ್ರಿ ಹೇಮಾ ಯಾದವ್ (40), ಯಾದವ್ ಕುಟುಂಬದ ಆಪ್ತ ಸಹವರ್ತಿ ಅಮಿತ್ ಕತ್ಯಾಲ್ (49), ಮಾಜಿ ರೈಲ್ವೆ ಉದ್ಯೋಗಿ ಹೃದಯಾನಂದ್ ಚೌಧರಿ, 2 ಕಂಪನಿಗಳಾದ ಎಕೆ ಇನ್ಫೋಸಿಸ್ಟಮ್ಸ್ ಪ್ರೈ. ಲಿಮಿಟೆಡ್ ಮತ್ತು ಎಬಿ ಎಕ್ಸ್‌ಪೋರ್ಟ್ ಪ್ರೈ. ಲಿಮಿಟೆಡ್‌ಗಳನ್ನೂ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾಗಿದೆ.

ಉದ್ಯೋಗಕ್ಕಾಗಿ ಭೂಮಿ ಪ್ರಕರಣ, ಬಹುಕೋಟಿ ಹಗರಣದಲ್ಲಿ ಪತ್ನಿ, ಮಗ ಸೇರಿ ಲಾಲೂ ಪ್ರಸಾದ್‌ ಗೆ ಬಿಗ್ ರಿಲೀಫ್

ಇದನ್ನು ಪರಿಗಣಿಸಿದ ಅಕ್ರಮ ಹಣ ವರ್ಗಾ ವಣೆ ತಡೆ ಕಾಯ್ದೆ ನ್ಯಾಯಾಲಯ, ಜ.16ರಂದು ಮುಂದಿನ ವಿಚಾರಣೆ ನಿಗದಿಪಡಿಸಿದೆ. ಈಗಾಗಲೇ ಈ ಹಗರಣದಲ್ಲಿ ಲಾಲು, ಅವರ ಪುತ್ರ ಹಾಗೂ ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಅವರ ವಿಚಾರಣೆ ನಡೆದಿದೆ.

ಏನಿದು ಹಗರಣ?
ಲಾಲು ಯುಪಿಎ-1 ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಅವಧಿಗೆ ಸಂಬಂಧಿಸಿದ ಹಗರಣವಾಗಿದೆ. 2004ರಿಂದ 2009ರವರೆಗೆ, ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಗ್ರೂಪ್ 'ಡಿ' ಹುದ್ದೆಗಳಿಗೆ ಹಲವರನ್ನು ನೇಮಿಸಲಾಗಿತ್ತು. ಇವರು ನೌಕರಿ ಪಡೆಯಲು ಲಂಚ ರೂಪದಲ್ಲಿ ತಮ್ಮ ಜಮೀನನ್ನು ಲಾಲು ಕುಟುಂಬ ಸದಸ್ಯರಿಗೆ ವರ್ಗಾಯಿಸಿದ್ದಾರೆ ಎಂಬ ಆರೋಪವಿದೆ.

'ಇಸ್ರೋ ವಿಜ್ಞಾನಿಗಳು ಮೋದಿಯನ್ನು ಸೂರ್ಯನತ್ತ ಕಳಿಸಬೇಕು' ಇಂಡಿ ಒಕ್ಕೂಟದ ಸಭೆ ಬಳಿಕ ಲಾಲೂ ಪ್ರಸಾದ್‌ ಹೇಳಿಕೆ!

Latest Videos
Follow Us:
Download App:
  • android
  • ios