ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಮೂಲದ ಲೆ.ಜ ಬಗ್ಗವಳ್ಳಿ ಸೋಮಶೇಖರ ರಾಜು (ಬಿ.ಎಸ್‌. ರಾಜು) ಅವರನ್ನು ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕ (ಡಿಜಿಎಂಒ) ಎಂದು ನೇಮಿಸಲಾಗಿದೆ. 

ನವದೆಹಲಿ (ಫೆ.21): ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಮೂಲದ ಲೆ.ಜ ಬಗ್ಗವಳ್ಳಿ ಸೋಮಶೇಖರ ರಾಜು (ಬಿ.ಎಸ್‌. ರಾಜು) ಅವರನ್ನು ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕ (ಡಿಜಿಎಂಒ) ಎಂದು ನೇಮಿಸಲಾಗಿದೆ. ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಅಧಿಕಾರ ಸ್ವೀಕಾರ ಸಾಧ್ಯತೆ ಇದೆ.

Add Asianetnews Kannada as a Preferred SourcegooglePreferred

ಡಿಜಿಎಂಒ ಹುದ್ದೆ ಮಹತ್ವದ್ದಾಗಿದ್ದು ದೇಶದ ಗಡಿಯಲ್ಲಿನ ಸೇನಾ ಕಾರಾರ‍ಯಚರಣೆಗಳ ಉಸ್ತುವಾರಿ ನೋಡಿಕೊಳ್ಳುತ್ತದೆ.

ಬೆದರಿದ ಚೀನಾದಿಂದ ಕುತಂತ್ರ; ಗಲ್ವಾನ್ ಘರ್ಷಣೆ ವಿಡಿಯೋ ಬಿಡುಗಡೆ ಮಾಡಿ ಪೇಚಿಗೆ ಸಿಲುಕಿದ PLA! ..

ರಾಜು ಈಗ ಕಾಶ್ಮೀರದಲ್ಲಿ ಉಗ್ರ ಕೃತ್ಯಗಳನ್ನು ನಿಗ್ರಹಿಸುವ ‘ಚಿನಾರ್‌ ಕೋರ್‌ ಪಡೆ’ ಮುಖ್ಯಸ್ಥರಾಗಿ ಕಾರ‍್ಯನಿರ್ವಹಿಸುತ್ತಿದ್ದಾರೆ. ಚಿನಾರ್‌ ಕೋರ್‌ನಲ್ಲಿ ರಾಜು ಅವರು, ‘ಹತ್ಯೆ ಬೇಡ, ಶರಣಾಗತಿಗೆ ಆದ್ಯತೆ’ ನೀತಿ ಅನುಸರಿಸಿದ್ದು, ಈ ಅವಧಿಯಲ್ಲಿ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಇಳಿದಿವೆ. ಶರಣಾಗತಿ ಹೆಚ್ಚಿವೆ. ಇತ್ತೀಚೆಗೆ ರಾಜು ಅವರಿಗೆ ಉತ್ತಮ ಯುದ್ಧ ಸೇವಾ ಪದಕ ದೊರೆತಿತ್ತು.

ಈಗ ರಾಜು ಅವರ ಸ್ಥಾನಕ್ಕೆ ಲೆ.ಜ ಡಿ.ಪಿ. ಪಾಂಡೆ ಅವರನ್ನು ನೇಮಿಸಲಾಗಿದೆ.