ಮಹಾರಾಷ್ಟ್ರದಲ್ಲಿ ದಿನಕ್ಕೆ 8 ರೈತರು ಆತ್ಮ ಹ* ಮಾಡಿಕೊಳ್ಳುತ್ತಿದ್ದರೂ ಸಹ ಅಲ್ಲಿನ ಕೃಷಿ ಸಚಿವ ಮಾಣಿಕ್‌ರಾವ್‌ ಕೊಕಟೆ ಅವರು ವಿಧಾನಸಭೆ ಕಲಾಪದಲ್ಲಿ ಆನ್ಲೈನ್‌ ರಮ್ಮಿ ಆಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ದಿನಕ್ಕೆ 8 ರೈತರು ಆತ್ಮ ಹ* ಮಾಡಿಕೊಳ್ಳುತ್ತಿದ್ದರೂ ಸಹ ಅಲ್ಲಿನ ಕೃಷಿ ಸಚಿವ ಮಾಣಿಕ್‌ರಾವ್‌ ಕೊಕಟೆ ಅವರು ವಿಧಾನಸಭೆ ಕಲಾಪದಲ್ಲಿ ಆನ್ಲೈನ್‌ ರಮ್ಮಿ ಆಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ವಿಡಿಯೋವನ್ನು ಎನ್‌ಸಿಪಿ ಶರದ್‌ ಪವಾರ್ ಬಣದ ರೋಹಿತ್‌ ಪವಾರ್‌ ಹಂಚಿಕೊಂಡಿದ್ದು, ರಾಜ್ಯದಲ್ಲಿ ಪ್ರತಿ ದಿನ 8 ರೈತರು ಸಾಯುತ್ತಿದ್ದರೂ, ನಮ್ಮ ಸಚಿವರಿಗೆ ಕೆಲಸವಿಲ್ಲದೇ ಸದನದಲ್ಲಿ ರಮ್ಮಿ ಆಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ, ‘ಇದು ಅಪರಿಪೂರ್ಣ ವಿಡಿಯೋ. ನಾನು ಯುಟ್ಯೂಬ್‌ನಲ್ಲಿ ಕಲಾಪ ವೀಕ್ಷಿಸಲು ಒತ್ತಿದ್ದೆ, ಆದರೆ ಆಗ ಗೇಮ್‌ ಡೌನ್‌ಲೋಡ್‌ ಆಯಿತು. ನನಗೆ ಸ್ಕಿಪ್‌ ಮಾಡಲು ಬರಲಿಲ್ಲ. ಪೂರ್ತಿ ವಿಡಿಯೋ ನೋಡಿ, ಅದರಲ್ಲಿ ನಾನು ಗೇಮ್‌ ಆಫ್‌ ಮಾಡಿದ್ದೆ’ ಎಂದು ತಳ್ಳಿಹಾಕಿದ್ದಾರೆ.

ಕರ್ನಾಟಕದ ರಾಯಚೂರಿನಲ್ಲಿಯೂ ಸಹ ಡಿಎಫ್‌ಓ ಅಧಿಕಾರಿ ಸಭೆ ವೇಳೆ ರಮ್ಮಿ ಆಡಿದ್ದರು.

ದೂರುಗಳಿಗೆ ಸಚಿವರ ಮೌನ

ಉತ್ತರ ಪ್ರದೇಶದ ವಿದ್ಯುತ್ ಸಚಿವರೊಬ್ಬರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಜನರ ಗಂಭೀರ ಸಮಸ್ಯೆಗಳಿಗೆ ಅವರ ಪ್ರತಿಕ್ರಿಯೆ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋದಲ್ಲಿ, ಸಚಿವರನ್ನು ಜನರು ಹೂಮಾಲೆ, ಘೋಷಣೆಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸುತ್ತಾರೆ. ಆದರೆ, ಕ್ಷಣಾರ್ಧದಲ್ಲಿ ವಾತಾವರಣ ಬದಲಾಗುತ್ತದೆ. ಜನರು ತಮ್ಮ ಕಷ್ಟ-ಕೋಟಲೆಗಳನ್ನು ಎತ್ತಿಹೇಳಲು ಆರಂಭಿಸಿದಾಗ, ಸಭೆ ಗಂಭೀರ ರೂಪ ಪಡೆಯುತ್ತದೆ.

'ಸಚಿವರೇ, 24 ಗಂಟೆ ವಿದ್ಯುತ್ ಭರವಸೆ ನೀಡಿದ್ದೀರಿ, ಆದರೆ 3 ಗಂಟೆಯೂ ಸಿಗುತ್ತಿಲ್ಲ! ಎಂದು ಒಬ್ಬರು ಕೂಗಿದರೆ, 'ವ್ಯಾಪಾರ ಸಮುದಾಯ ಸಂಕಷ್ಟದಲ್ಲಿದೆ, ಏನಾದರೂ ಮಾಡಿ!' ಎಂದು ಮತ್ತೊಬ್ಬರು ದೂರುತ್ತಾರೆ. ಜನರ ಮುಖದಲ್ಲಿ ನಿರಾಸೆ, ಕೋಪ ಸ್ಪಷ್ಟವಾಗಿ ಕಾಣುತ್ತದೆ. ಆದರೆ, ಸಚಿವರು ಮೌನವಾಗಿದ್ದು, ದೂರುಗಳಿಗೆ ಕಿವಿಗೊಡದಂತೆ ಕಾಣುತ್ತಾರೆ.