Asianet Suvarna News Asianet Suvarna News

ಮಹಾರಾಷ್ಟ್ರ ಸರ್ಕಾರದಿಂದ ಮಹತ್ವದ ಆದೇಶ

ಮಹಾರಾಷ್ಟ್ರ ಸರ್ಕಾರ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ. ಏನದು ಆದೇಶ ..? 

Maharashtra Govt Order To Reopen Temples snr
Author
Bengaluru, First Published Nov 15, 2020, 8:04 AM IST

ಮುಂಬೈ (ನ.15): ಕೊರೋನಾ ವೈರಸ್‌ ಹಾವಳಿ ಹಿನ್ನೆಲೆಯಲ್ಲಿ ಕಳೆದ 8 ತಿಂಗಳಿನಿಂದ ಮುಚ್ಚಿರುವ ದೇಗುಲ ಸೇರಿದಂತೆ ಮಹಾರಾಷ್ಟ್ರದ ಧಾರ್ಮಿಕ ಕೇಂದ್ರಗಳನ್ನು ಸೋಮವಾರದಿಂದ ಮತ್ತೆ ತೆರೆಯಲಾಗುತ್ತದೆ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ತಿಳಿಸಿದ್ದಾರೆ. 

ದೀಪಾವಳಿ ಶುಭಾಶಯ ಕೋರುವ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು ಅದರಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಕೊರೋನಾ ವೈರಸ್‌ ಎಂಬ ರಾಕ್ಷಸ ಇನ್ನೂ ನಮ್ಮ ನಡುವೆಯೇ ಇದೆ ಎಂಬುದನ್ನು ಮರೆಯಲಾಗದು. 

ಸಿಟಿ ರವಿಗೆ 3 ರಾಜ್ಯಗಳ ಉಸ್ತುವಾರಿ; ಇಕ್ಕಟ್ಟಿಗೆ ಸಿಲುಕಿಸಿದೆ ಹೊಸ ಜವಾಬ್ದಾರಿ

ಈ ರಾಕ್ಷಸನ ಅಬ್ಬರ ಕಡಿಮೆಯಾಗುತ್ತಿದ್ದರೂ, ನಾವು ಶಿಸ್ತು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ. ಅನ್‌ಲಾಕ್‌ ಪ್ರಕ್ರಿಯೆ ಆರಂಭವಾದರೂ ಧಾರ್ಮಿಕ ಕೇಂದ್ರಗಳಿಗೆ ಅನುಮತಿ ನೀಡದ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು.

Follow Us:
Download App:
  • android
  • ios