Asianet Suvarna News Asianet Suvarna News

'ನೀವೆಷ್ಟೇ ಕೆಸರು ಎರಚಿದ್ರೂ ಕಮಲ ಅರಳಲು ಬಿಡುವುದಿಲ್ಲ'

ಎಷ್ಟೇ ಕೆಸರು ಎರಚಿದರೂ ಕಮಲ ಅರಳಲು ಬಿಡುವುದಿಲ್ಲ| ಅಧಿಕಾರದಾಸೆಗೆ ಮಿತ್ರರ ಕಡೆಗಣನೆ| ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ

Maharashtra Politics Shiv Sena Leader Aditya Thackeray Indirectly Slams BjP
Author
Bangalore, First Published Dec 19, 2019, 2:35 PM IST

ಮಹಾರಾಷ್ಟ್ರ[ಡಿ.19]: ಶಿವಸೇನೆ ನಾಯಕ ಹಾಗೂ ಮೊದಲ ಬಾರಿ ಶಾಸಕರಾದ ಆದಿತ್ಯ ಠಾಕ್ರೆ ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. 'ಅದೆಷ್ಟೇ ಕೆಸರೆರಚಿದ್ರೂ ನಾವು ಕಮಲ ಅರಳಲು ಬಿಡುವುದಿಲ್ಲ' ಎಂಬ ಆದಿತ್ಯ ಹೇಳಿಕೆ ಸದ್ಯ ಬಿಜೆಪಿಗರ ಕೆಂಗಣ್ಣಿಗೀಡಾಗಿದೆ. ಅಧಿಕಾರದ ಆಸೆಗಾಗಿ ಹೇಗೆ ತಮ್ಮ ಮಿತ್ರರನ್ನೇ ಕಡೆಗಣಿಸುತ್ತಾರೆಎಂಬುವುದನ್ನು ತಾನು ಕಂಡಿರುವುದಾಗಿ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವರಲೀ ಕ್ಷೇತ್ರದಿಂದ ಮೊದಲ ಶಾಸಕರಾಗಿ ಆಯ್ಕೆಯಾಗಿರುವ ಆದಿತ್ಯ ಠಾಕ್ರೆ ಬಿಜೆಪಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ. 'ಅಧಿಕಾರದ ಆಸೆಗಾಗಿ ತಮ್ಮ ಸ್ನೇಹಿತರನ್ನೇ ಕಡೆಗಣಿಸುವವರನ್ನು ನಾನು ಕಂಡಿದ್ದೇನೆ. ಅವರು ಅದೆಷ್ಟೇ ಕೆಸರು ಎರಚಿದ್ರೂ ನಾವು ಕಮಲ ಅರಳಲು ಬಿಡುವುದಿಲ್ಲ' ಎಂದಿದ್ದಾರೆ. ಆದಿತ್ಯ ಬಿಜೆಪಿ ಹೆಸರೆತ್ತದೆ ಪರೋಕ್ಷವಾಗಿ ಛಾಟಿ ಬೀಸಿದ್ದು, ಪಕ್ಷದ ನಾಯಕರಿಗೆ ನುಂಗಲಾರದ ತುತ್ತಾಗಿದೆ.

 ಈ ನಡುವೆ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಹಾಲಿ ಸಿಎಂ ಉದ್ದವ್ ಠಾಕ್ರೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದರು. ಉದ್ದವ್ ಠಾಕ್ರೆ ಈ ಭೋಜನ ಕೂಟಕ್ಕೆ ರಾಜ್ಯದ ಎಲ್ಲಾ ಶಾಸಕರನ್ನು ಆಹ್ವಾನಿಸಿದ್ದರು. ಬಹುಶಃ ರಾಜ್ಯದ ಮುಖ್ಯಮಂತ್ರಿಯೊಬ್ಬರು ಎಲ್ಲಾ ಪಕ್ಷದ ಶಾಸಕರನ್ನು ಆಹ್ವಾನಿಸಿದ್ದು ಇದೇ ಮೊದಲ ಬಾರಿ ಅನಿಸುತ್ತೆ

Follow Us:
Download App:
  • android
  • ios