ಮಹಾ ಸಾರಿಗೆಯಿಂದ ರಾಜ್ಯ ಸಾರಿಗೆ ನಿಗಮಕ್ಕೆ ಧಮ್ಕಿ
ಪದೇ ಪದೇ ಕರ್ನಾಟಕ ಮೇಲೆ ಹರಿಹಾಯುತ್ತಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಸಾರಿಗೆ ನಿಗಮದ ವಿರುದ್ಧವೂ ಕಾಲು ಕೆದರಿ ನಿಂತಿದೆ.
ಬೆಳಗಾವಿ (ಫೆ.22): ಗಡಿ ವಿಚಾರವಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ, ಶಿವಸೇನೆ ಮುಖ್ಯಸ್ಥ ಉದ್ಧವ ಠಾಕ್ರೆ ಸೇರಿ ಇತರ ನಾಯಕರು ಕರ್ನಾಟಕದ ಜತೆಗೆ ಕಾಲು ಕೆದರಿ ಜಗಳಕ್ಕೆ ನಿಂತಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ಸಾರಿಗೆ ನಿಗಮವು ಬಸ್ಗಳ ನಿಲುಗಡೆ ವಿಚಾರವಾಗಿ ನಮ್ಮ ವಾಯುವ್ಯರಸ್ತೆ ಸಾರಿಗೆ ನಿಗಮಕ್ಕೆ ಅಧಿಕೃತವಾಗಿ ಬೆದರಿಕೆ ಪತ್ರವೊಂದನ್ನು ರವಾನಿಸಿದೆ.
ಕರ್ನಾಟಕದ ಸಾರಿಗೆ ನಿಗಮದಲ್ಲಿ ಪರ್ಮಿಟ್ ಇಲ್ಲದ ಬಸ್ಗಳು ಇರಲು ಸಾಧ್ಯವೇ ಇಲ್ಲ. ಅಲ್ಲದೆ, ಒಂದು ರಾಜ್ಯದ ಅಧಿಕಾರಿಗಳು ಮತ್ತೊಂದು ರಾಜ್ಯದ ಅಧಿಕಾರಿಗಳಿಗೆ ಈ ರೀತಿ ಪತ್ರ ಬರೆಯುವುದು ಅಂತಾರಾಜ್ಯ ಒಪ್ಪಂದಗಳ ಸ್ಪಷ್ಟಉಲ್ಲಂಘನೆ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ 5 ಜಿಲ್ಲೇಲಿ ಲಾಕ್ಡೌನ್, ಕರ್ನಾಟಕಕ್ಕೆ ಇದು ಎಚ್ಚರಿಕೆ ಗಂಟೆ! ...
ಮಹಾರಾಷ್ಟ್ರದ ಮೀರಜ್ನ ಶಾಸ್ತ್ರಿ ವೃತ್ತದಲ್ಲಿ ಬಸ್ಗಳ ನಿಲುಗಡೆಯೇ ಇಲ್ಲ. ಆದರೆ, ಕರ್ನಾಟಕದ ಪರ್ಮಿಟ್ ಇಲ್ಲದ ಬಸ್ಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತಿದ್ದು, ಇದರಿಂದ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮಕ್ಕೆ ನಷ್ಟವಾಗುತ್ತಿದೆ. ಇದನ್ನು ತಡೆಯದಿದ್ದರೆ ಫೆ.23ರಂದು ರಸ್ತೆ ತಡೆ ನಡೆಸಬೇಕಾಗುತ್ತದೆ ಎಂದು ಆರೋಪಿಸಿ ಶಿವಸೇನೆ ಸಾಂಗ್ಲಿ ಜಿಲ್ಲಾ ಘಟಕ ಅಲ್ಲಿನ ರಸ್ತೆ ಸಾರಿಗೆ ನಿಗಮಕ್ಕೆ ಪತ್ರ ಬರೆದಿದೆ. ಇದನ್ನು ಆಧರಿಸಿ ಮಹಾರಾಷ್ಟ್ರದ ಸಾರಿಗೆ ನಿಗಮದ ಅಧಿಕಾರಿಗಳು ವಾಯುವ್ಯ ಸಾರಿಗೆಯ ಚಿಕ್ಕೋಡಿ ವಿಭಾಗದ ಅಧಿಕಾರಿಗಳಿಗೆ ಫೆ.18ರಂದು ಎಚ್ಚರಿಕೆಯ ಪತ್ರ ಬರೆದಿದ್ದಾರೆ.
ಪರ್ಮಿಟ್ ಇಲ್ಲದ ಬಸ್ಗಳನ್ನು ಮಹಾರಾಷ್ಟ್ರಕ್ಕೆ ಕಳಿಸಬಾರದು. ಒಂದು ವೇಳೆ ಕಳಿಸಿದಲ್ಲಿ ಶಿವಸೇನೆಯಿಂದಾಗುವ ಪರಿಣಾಮಗಳಿಗೆ ನೀವೇ ಹೊಣೆ ಎಂದು ಬೆದರಿಕೆ ಧಾಟಿಯಲ್ಲಿ ಪತ್ರದಲ್ಲಿ ಹೇಳಿಕೊಂಡಿದ್ದಾರೆ.
ಕರ್ನಾಟಕದ ಸಾರಿಗೆ ನಿಗಮದಲ್ಲಿ ಪರ್ಮಿಟ್ ಇಲ್ಲದ ಬಸ್ಗಳು ಇರಲು ಸಾಧ್ಯವೇ ಇಲ್ಲ. ಅಲ್ಲದೆ, ಒಂದು ರಾಜ್ಯದ ಅಧಿಕಾರಿಗಳು ಮತ್ತೊಂದು ರಾಜ್ಯದ ಅಧಿಕಾರಿಗಳಿಗೆ ಈ ರೀತಿ ಪತ್ರ ಬರೆಯುವುದು ಅಂತಾರಾಜ್ಯ ಒಪ್ಪಂದಗಳ ಸ್ಪಷ್ಟಉಲ್ಲಂಘನೆ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜತೆಗೆ, ಸಾರಿಗೆ ಸಚಿವರೂ ಆದ ಉಪ ಮುಖ್ಯಮಂತ್ರಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಾರಾಷ್ಟ್ರಕ್ಕೆ ಲಿಖಿತವಾಗಿಯೇ ಪ್ರತಿಭಟನೆ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.