ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ| ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಪ.ಬಂಗಾಳ ಸಿಎಂ| ನನ್ನ ಸಾವಿನ ಬಳಿಕವಷ್ಟೇ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಎಂದ ಮಮತಾ| ವಿಶ್ವಸಂಸ್ಥೆ ಜನಾಭಿಪ್ರಾಯ ಸಂಗ್ರಹಕ್ಕೆ ಒತ್ತಾಯಿಸಿದ ಮಮತಾ| 'ನಿಮಗೆ ಬಹುಮತ ಇದೆ ಎಂಬ ಕಾರಣಕ್ಕೆ ಮನಬಂದಂತೆ ವರ್ತಿಸಲು ಸಾಧ್ಯವಿಲ್ಲ'| 

ಕೋಲ್ಕತ್ತಾ(ಡಿ.19): ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ.ಬಂಗಾಳ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರಕ್ಕೆ ತಾಕತ್ತಿದ್ದರೆ ವಿಶ್ವಸಂಸ್ಥೆಯ ನೇತೃತ್ವದಲ್ಲಿ ಜನಾಭಿಪ್ರಾಯ ಸಂಗ್ರಹ ನಡೆಸಲಿ ಎಂದು ಸವಾಲು ಎಸೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಷ್ಟಕ್ಕೂ ಹಿಂದೂ ಶರಣಾರ್ಥಿಗಳಿಗೆ ಎಲ್ಲಿ ಜಾಗ ಕೊಡ್ತಿರಿ?: ಉದ್ಧವ್!

Scroll to load tweet…

ನನ್ನ ಸಾವಿನ ಬಳಿಕವಷ್ಟೇ ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿಗೆ ಅವಕಾಶ ಎಂದು ಹೇಳಿರುವ ಮಮತಾ, ವಿಶ್ವಸಂಸ್ಥೆ ಜನಾಭಿಪ್ರಾಯ ಸಂಗ್ರಹಕ್ಕೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

CAB ಬೆಂಬಲಿಸಿದ್ದ ಡಾ. ಸಿಂಗ್ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ!

ಒಂದು ವೇಳೆ ವಿಶ್ವಸಂಸ್ಥೆಯ ಜನಾಭಿಪ್ರಾಯ ಸಂಗ್ರಹದಲ್ಲಿ ಪೌರತ್ವ ಕಾಯ್ದೆ ವಿರೋಧಿ ಫಲಿತಾಂಶ ಬಂದರೆ ಬಿಜೆಪಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದೂ ಮಮತಾ ಒತ್ತಾಯಿಸಿದ್ದಾರೆ.

Scroll to load tweet…

ನಿಮಗೆ ಬಹುಮತ ಇದೆ ಎಂಬ ಕಾರಣಕ್ಕೆ ಮನಬಂದಂತೆ ವರ್ತಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಮತಾ ಬ್ಯಾನರ್ಜಿ ಹರಿಹಾಯ್ದಿದ್ದಾರೆ.

ಪೌರತ್ವ ಕಿಚ್ಚು: ಅಮಿತ್ ಶಾ ಎಮರ್ಜೆನ್ಸಿ ಭದ್ರತಾ ಸಭೆ!