ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರಿಗೆ ಅಡ್ಡಬಂದ ವ್ಯಕ್ತಿ| ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ರಾಜನಾಥ್’ಗೆ ದಂಬಾಲು| ಸಂಸತ್ತಿಗೆ ತೆರಳುತ್ತಿದ್ದ ರಾಜನಾಥ್ ಸಿಂಗ್ ಕಾರು ತಡೆದ ಮೋದಿ ಅಭಿಮಾನಿ| ಕೂಡಲೇ ವ್ಯಕ್ತಿಯನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ| ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರಿಂದ ತೀವ್ರ ವಿಚಾರಣೆ|

ನವದೆಹಲಿ(ಡಿ.03): ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ಒತ್ತಾಯಿಸಿ ವ್ಯಕ್ತಿಯೋರ್ವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರು ಅಡ್ಡಗಟ್ಟಿದ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಧಿವೇಶನದಲ್ಲಿ ಭಾಗವಹಿಸಲು ರಾಜನಾಥ್ ಸಿಂಗ್ ಸಂಸತ್ತಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಕಾರಿಗೆ ಅಡ್ಡ ಬಂದ ವ್ಯಕ್ತಿ, ತಾನು ಮೋದಿ ಅವರ ಅಭಿಮಾನಿಯಾಗಿದ್ದು ಅವರನ್ನು ಭೇಟಿ ಮಾಡಿಸುವಂತೆ ಮನವಿ ಮಾಡಿದ್ದಾನೆ.

Scroll to load tweet…

ರಾಜನಾಥ್ ಕಾರಿಗೆ ಏಕಾಏಕಿ ವ್ಯಕ್ತಿ ಅಡ್ಡಬಂದ ಕಾರಣ ಗಾಬರಿಗೊಂಡ ಭದ್ರತಾ ಸಿಬ್ಬಂದಿ, ಕೂಡಲೇ ಕಾರಿನಿಂದ ಕೆಳಗಿಳಿದು ಆತನನ್ನು ವಶಕ್ಕೆ ಪಡೆದಿದ್ದಾರೆ.

ರಫೆಲ್‌ಗೆ ಆಯುಧ ಪೂಜೆ: ಪಾಕ್ ಇಡಂಗಿಲ್ಲ ಇನ್ಮೇಲೆ ಕಳ್ಳ ಹೆಜ್ಜೆ!

ರಾಜನಾಥ್ ಸಿಂಗ್ ಕಾರಿಗೆ ಅಡ್ಡಬಂದ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಸೆಂಬರ್ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ