ಖ್ಯಾತ ಗಣಿತಜ್ಞ ವಸಿಷ್ಠ ನಾರಾಯಣ್ ಸಿಂಗ್ ವಿಧಿವಶ| ಅಲ್ಬರ್ಟ್ ಐನ್‌ಸ್ಟೀನ್ ಸಾಪೇಕ್ಷತಾ ಸಿದ್ಧಾಂತವನ್ನು ಪ್ರಶ್ನಿಸಿದ್ದ ವಸಿಷ್ಠ ನಾರಾಯಣ್ ಸಿಂಗ್| ವಸಿಷ್ಠ ಸಾವಿಗೆ ಸಂತಾಪ ಸೂಚಿಸಿರುವ ಬಿಹಾರ ಸಿಎಂ ನಿತೀಶ್ ಕುಮಾರ್| ಶವ ಕೊಂಡೊಯ್ಯಲು ಆಂಬುಲೆನ್ಸ್‌ಗೆ ಎರು ಗಂಟೆ ಕಾದ ಕುಟುಂಬ| 

ಪಾಟ್ನಾ(ನ.14): ವಿಶ್ವ ಕಂಡ ಅಪರೂಪದ ಭೌತ ವಿಜ್ಞಾನಿ ಅಲ್ಬರ್ಟ್ ಐನ್‌ಸ್ಟೀನ್ ಅವರ ಸಾಪೇಕ್ಷತಾ ಸಿದ್ಧಾಂತವನ್ನು ಪ್ರಶ್ನಿಸಿದ್ದ ಖ್ಯಾತ ಗಣಿತಜ್ಞ ವಸಿಷ್ಠ ನಾರಾಯಣ್ ಸಿಂಗ್ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಏಪ್ರಿಲ್ 2, 1942 ರಂದು ಜನಿಸಿದ್ದ 74 ವರ್ಷದವಸಿಷ್ಠ ನಾರಾಯಣ್ ಸಿಂಗ್, ಕಳೆದ 40 ವರ್ಷಗಳಿಂದ ಸ್ಕಿಜೋಫ್ರೇನಿಯಾದಿಂದ ಬಳಲುತ್ತಿದ್ದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ವಸಿಷ್ಠ ನಾರಾಯಣ್ ಸಿಂಗ್ ಸಾವಿಗೆ ಸಂತಾಪ ಸೂಚಿಸಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ವಸಿಷ್ಠ ಅವರ ನಿಧನದಿಂದ ದೇಶದ ವಿಜ್ಞಾನ ಕ್ಷೇತ್ರ ಬಡವವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ. ವಸಿಷ್ಠ ಅವರನ್ನು ಪೂರ್ಣ ರಾಜ್ಯ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು ಎಂದು ನಿತೀಶ್ ಘೋಷಿಸಿದ್ದಾರೆ. 

ವಸಿಷ್ಠ ನಾರಾಯಣ್ ಸಿಂಗ್ ಅವಿಭಜಿತ ಬಿಹಾರದ ನೇತರ್ಹಾಟ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದರು. ಪಾಟ್ನಾ ವಿಜ್ಞಾನ ಕಾಲೇಜಿನಲ್ಲಿ ಅಧ್ಯಯನ ಮಾಡಿದ್ದ ವಸಿಷ್ಠ, ಮುಂದೆ 1965 ರಲ್ಲಿ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಹೆಚ್ವಿನ ವ್ಯಾಸ್ಯಾಂಗ ಮಾಡಿದರು. 

ಮುಂದೆ 1969 ರಲ್ಲಿ ಸೈಕಲ್ ವೆಕ್ಟರ್ ಬಾಹ್ಯಾಕಾಶ ಸಿದ್ಧಾಂತದ ಕುರಿತು ವಸಿಷ್ಠ ನಾರಾಯಣ್ ಸಿಂಗ್ ಪಿಎಚ್‌ಡಿ ಪ್ರಬಂಧ ಮಂಡಿಸಿದ್ದರು. ಕಾನ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(IIT)ಮತ್ತು ಕೋಲ್ಕತ್ತಾದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ನಲ್ಲಿ ಶಿಕ್ಷಕರಾಗಿಯೂ ವಸಿಷ್ಠ ಸೇವೆ ಸಲ್ಲಿಸಿದ್ದಾರೆ.

ಶವ ಕೊಂಡೊಯ್ಯಲು ಆಂಬುಲೆನ್ಸ್‌ಗೆ ಎರಡು ಗಂಟೆ ಕಾದ ಕುಟುಂಬ:

ಇನ್ನು ವಸಿಷ್ಠ ನಾರಾಯಣ್ ಸಿಂಗ್ ಅವರ ಪಾರ್ಥೀವ ಶರಿರವನ್ನು ಮನೆಗೆ ಕೊಂಡೊಯ್ಯಲು ಆಂಬುಲೆನ್ಸ್ ತಡವಗಿ ಬಂದ ಕಾರಣ ವಿಳಂಬವಾಗಿದೆ ಎಂಬ ಆರೋಪ ಕೇಳಿ ಬಂದಿದೆ. 

Scroll to load tweet…

ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನಿರ್ಲಕ್ಷ್ಯದ ಪರಿಣಾಮವಾಗಿ ವಸಿಷ್ಠ ಅವರ ಪ್ರಾರ್ಥಿವ ಶರೀರ ಕೊಮಡೊಯ್ಯಲು ವಿಳಂಬವಾಗಿದ್ದಲ್ಲದೇ, ಸುಮಾರು ಎರಡು ಗಂಟೆಗಳ ಕಾಲ ಮೃತದೇಹವನ್ನು ಆಸ್ಪತ್ರೆಯಿಂದ ಹೊರಗಿಡಲಾಗಿತ್ತು ಎಂದು ಹೇಳಲಾಗಿದೆ.