ನಿಜವಾದ ಹೀರೋಗಳು ಮುಂದಕ್ಕೆ ಬರುವುದಿಲ್ಲ/  ಪಾರ್ಶ್ವವಾಯು ಕಾಡುತ್ತಿದ್ದರೂ ಇವರ ಸಾಧನೆಗೆ ಯಾವುದು ಅಡ್ಡಿಯಾಗಿಲ್ಲ/ ನಿಸ್ವಾರ್ಥದ ನಿಸರ್ಗ ಸೇವೆ/  ಕೇಂದ್ರ ಸರ್ಕಾರವೂ ಮನ್ನಣೆ ನೀಡಿದೆ

ಕೇರಳ(ಜ. 04) ನಿಜವಾದ ಹೀರೋಗಳು ವೇದಿಕೆಗೆ ಬರುವುದೇ ಇಲ್ಲ... ಅವರು ತಮ್ಮ ಕೆಲಸವನ್ನು ತಾವೇ ಮಾಡಿಕೊಂಡು ಸಮಾಜಕ್ಕೆ ಕೊಡುಗೆ ನೀಡುತ್ತಲೇ ಇರುತ್ತಾರೆ. ಸಮಯ ಸಂದರ್ಭ ಒಂದೊಂದು ಸಾರಿ ಅವರನ್ನು ಎದುರಿಗೆ ತರುವಂತೆ ಮಾಡುತ್ತದೆ.

Add Asianetnews Kannada as a Preferred SourcegooglePreferred

ಎನ್‌ಎಸ್ ರಾಜಪ್ಪನ್.. ಯಾವ ಪ್ರತಿಫಲಾಪೇಕ್ಷೆ ಇಲ್ಲದೇ ಪರಿಸರ ಸೇವೆ ಮಾಡುವ ಕೆಲಸ ಮಾಡಿಕೊಂಡೆ ಇದ್ದಾರೆ. ಪಾರ್ಶ್ವವಾಯು ಕಾಡುತ್ತಿದ್ದರೂ ಇವರ ಸಾಧನೆಗೆ ಯಾವುದು ಅಡ್ಡಿಯಾಗಿಲ್ಲ.

ಮಳೆಯೇ ಕಾಣದ ಮರುಭೂಮಿಯಲ್ಲಿ ಮರಗಳು ಬೆಳೆದಿದ್ದು ಹೇಗೆ?

ಮೊಣಕಾಲುಗಳು ಶಕ್ತಿ ಕಳೆದುಕೊಂಡಿದ್ದರೂ ಇವರ ಅಂತರಂಗದ ಶಕ್ತಿಗೆ ಕುಂದಿಲ್ಲ. ತಮ್ಮದೇ ಚಿಕ್ಕ ಬೋಟಿನಲ್ಲಿ ಜಗಮೆಚ್ಚುವ ಕೆಲಸ ಮಾಡಿದ್ದಾರೆ. ವೆಂಬನಾಡ್ ಸರೋವರದಲ್ಲಿ ಆಧುನಿಕತೆ ಹೆಸರಿನಲ್ಲಿ ಎಸೆದ ಪ್ಲಾಸ್ಟಿಕ್ ಬಾಟಲಿಗಳನ್ನು ಒಂದೊಂದಾಗಿ ಹೆಕ್ಕಿ ತೆಗೆದಿದ್ದಾರೆ. ಹಲವಾರು ವರ್ಷಗಳಿಂದ ಇದೇ ಕೆಲಸ ಮಾಡಿಕೊಂಡಿದ್ದು ಒಂದು ಸಲಾಂ ಹೇಳಲೇಬೇಕು.

ನಿಸ್ವಾರ್ಥದ ನಿಸರ್ಗ ಸೇವೆಯನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಸೋಶಿಯಲ್ ಮೀಡಿಯಾದಲ್ಲಿಯೂ ಮೆಚ್ಚುಗಳ ಮಹಾಪೂರವೇ ಹರಿದುಬಂದಿದೆ. ಇಂಥವರಿಂದಲೇ ಅಸಲಿ ಪ್ರೇರಣೆ ಪಡೆದುಕೊಳ್ಳಬೇಕು.

Scroll to load tweet…