ಸೂರ್ಯನ ಹೊಂಬೆಳಕಿನ ಪ್ರವೇಶಕ್ಕೆ ಗ್ರಾಮಸ್ಥರು ಎದ್ದು ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿದ್ದರು. ಅಷ್ಟರಲ್ಲೇ ಬಾಂಬ್ ಸ್ಫೋಟದಂತ ಶಬ್ದ ಕೇಳಿ ಜನ ಬೆಚ್ಚಿ ಬಿದ್ದಿದ್ದರು. ಕೇವಲ ಶಬ್ದ ಮಾತ್ರವಲ್ಲ. ಬೆಳಗ್ಗೆ 7 ಗಂಟೆ ಸುಮಾರಿಗೆ ಮಧ್ಯಾಹ್ನದ ಉರಿಬಿಸಿಲಿನ ಬೆಳಕು ಹಾಗೂ ಅನುಭವವಾಗಿತ್ತು. ಹಲವು ಮನೆಯೊಳಗೆ ಸೇರಿಕೊಂಡರೆ, ಕೆಲವರು ಶಬ್ದ ಹಾಗೂ ಬೆಳಕು ಬಂದ ಕಡೆ ಧಾವಿಸಿದ್ದರು. ಕಾರಣ ಆಗಸಿಂದ ಉಲ್ಕಾಶಿಲೆಯೊಂದು ಭೂಮಿಗೆ ಅಪ್ಪಳಿಸಿತ್ತು. 

ಸಂಚೋರ್(ಜೂ.20):  ಆಗಸದಿಂದ ರಭಸವಾಗಿ ಬಂದ ಉಲ್ಕಾಶಿಲೆಯೊಂದು ಭೂಮಿಗೆ ಅಪ್ಪಳಿಸಿದೆ. ಬಿದ್ದ ರಭಸಕ್ಕೆ 3 ಅಡಿ ಆಳದ ಗುಂಡಿ ನಿರ್ಮಾಣವಾಗಿದೆ. ಸುಮಾರು 2.8 ಕೆಜಿ ತೂಕದ ಉಲ್ಕಾಶಿಲೆ ರಾಜಸ್ಥಾನದ ಸಿಂಚೋರ್ ಪಟ್ಟಣ ಸಮೀಪ ಬಿದ್ದಿದೆ. ಬಿದ್ಧ ರಭಸದ ಶಬ್ದ ಸುಮಾರು 2 ಕಿಲೋಮೀಟರ್ ದೂರದ ವರೆಗೂ ಕೇಳಿಸಿದೆ. ಅಕ್ಕಪಕ್ಕದ ನಿವಾಸಿಗಳು ಒಂದು ಕ್ಷಣ ಬೆಚ್ಚಿ ಬಿದ್ದಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೂರ್ಯ ಗ್ರಹಣ: ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಪೂಜಾ ಆಚರಣೆಗಳು ಹೀಗಿರಲಿವೆ

ಭಾರತ-ಚೀನಾ ಗಡಿ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಈ ರೀತಿಯ ಶಬ್ದ ಕೇಳಿದ ಸಿಂಚೋರ್ ಪಟ್ಟಣದ ಜನರು ಬೆಚ್ಚಿ ಬಿದ್ದಿದ್ದಾರೆ. ಉಲ್ಕಾಶಿಲೆ ಅಪ್ಪಳಿಸಿದ ಸುದ್ದಿ ಕೇಳಿ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಉಲ್ಕಾಶಿಲೆ ನೋಡಿ ದಂಗಾದಿದ್ದಾರೆ. ಕಾರಣ ಬೆಂಕಿ ಉಂಡೆಯಂತಿದ್ದ ಉಲ್ಕಾ ಶಿಲೆಯಿಂದ ದೂರ ಸರಿದಿದ್ದಾರೆ. 

Scroll to load tweet…

ಸುದ್ದಿ ತಿಳಿದ ಉಪ ಜಿಲ್ಲಾಧಿಕಾರಿ ಭೂಪೇಂದ್ರ ಯಾದವ್ ಸ್ಥಳಕ್ಕೆ ಬೇಟಿ ನೀಡಿದ್ದಾರೆ. ಉಲ್ಕಾಶಿಲೆ ಬಿಸಿ ಇದ್ದ ಡಿಸಿ, ಪೊಲೀಸ್ ಹಾಗೂ ತಜ್ಞರ ತಂಡ ಗಂಟೆಗಳ ಕಾಲ ಕಾದಿದ್ದಾರೆ. ಬಳಿಕ 2.8 ಕೆಜಿ ತೂಕದ ಉಲ್ಕಾಶಿಲೆಯನ್ನು ಸಮೀಪದ ಚಿನ್ನದ ಅಂಗಡಿಯಲ್ಲಿ ಪರೀಶಿಲನೆ ನಡೆಸಲಾಗಿದೆ. ಪ್ಲಾಟಿನಂ, ನಿಕೆಲ್ ಹಾಗೂ ಜರ್ಮಾನಿಯಂ ಹೊಂದಿರುವ ಉಲ್ಕಾ ಶಿಲೆಯನ್ನು ಪ್ಯಾಕ್ ಮಾಡಿ ದೆಹಲಿಗೆ ಕಳುಹಿಸಿದ್ದಾರೆ.