CAB ಪ್ರತಿಭಟನೆಗೆ ಕಾಂಗ್ರೆಸ್ ಕಾರಣ ಎಂದ ಪ್ರಧಾನಿ ಮೋದಿ| ಜಾರ್ಖಂಡ್’ನ ಡಮ್ಕಾದಲ್ಲಿ ಚುನಾವಣಾ ಪ್ರಚಾರ ಸಭೆ| ‘ಪ್ರತಿಭಟನೆಗಳನ್ನು ಯಾರು ಮಾಡಿಸುತ್ತಿದ್ದಾರೆ ಎಂಬುದು ದೇಶದ ಜನರಿಗೆ ಗೊತ್ತು’| ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಮುಂದುವರೆದ ಪ್ರತಿಭಟನೆ|

ಡಮ್ಕಾ(ಡಿ.15): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

Add Asianetnews Kannada as a Preferred SourcegooglePreferred

CAB ವಿರೋಧಿ ಹಿಂಸಾತ್ಮಕ ಪ್ರತಿಭಟನೆಗಳನ್ನು ನೋಡಿದರೆ, ಇದನ್ನು ಯಾರು ಮಾಡಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಮೋದಿ ಹೇಳಿದರು.

CAB: ಈಶಾನ್ಯಕ್ಕೆ ರಾ‘ಜೀವ’ ತುಂಬಿದ ಚಂದ್ರಶೇಖರ್!

Scroll to load tweet…

ಜಾರ್ಖಂಡ್’ನ ಡಮ್ಕಾದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಷಡ್ಯಂತ್ರಗಳ ಹೊರತಾಗಿಯೂ ಶಾಂತಿ ಕಾಪಾಡುವಲ್ಲಿ ಅಸ್ಸಾಂ ಜನತೆ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಪೌರತ್ವ ತಿದ್ದುಪಡಿ ಮಸೂದೆ: ಅಸ್ಸಾಂ ಏಕೆ ಕೊತ ಕೊತ ಕುದಿಯುತ್ತಿದೆ?

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದಾಗ ಪಾಕಿಸ್ತಾನ ವಿದೇಶಗಳಲ್ಲಿರುವ ಭಾರತದ ರಾಯಭಾರ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿತು. ಇದೇ ಕೆಲಸವನ್ನು ಕಾಂಗ್ರೆಸ್ ಈಶಾನ್ಯ ರಾಜ್ಯಗಳಲ್ಲಿ ಮಾಡುತ್ತಿದೆ ಎಂದು ಮೋದಿ ಹರಿಹಾಯ್ದರು.

Scroll to load tweet…

ಈ ಮಧ್ಯೆ CAB ವಿರುದ್ಧ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರೆದಿದೆ. ಅಸ್ಸಾಂ, ಮೇಘಾಲಯ ಸೇರಿದಂತೆ ಇತರೆಡೆಯೂ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ.

Scroll to load tweet…

ಇತ್ತ ದೆಹಲಿಯಲ್ಲೂ CAB ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಹಲವು ಬಸ್’ಗಳಿಗೆ ಪ್ರತಿಭಟನಾಕಾರರಿಗೆ ಬೆಂಕಿ ಹಚ್ಚಿದ್ದಾರೆ.

ಮೋದಿ ಸರ್ಕಾರ ದೇಶವನ್ನು ಒಡೆಯುತ್ತಿದೆ: ಸೋನಿಯಾ ವಾಗ್ದಾಳಿ!