ಕೃಷಿ ಚಟುವಟಿಕೆಗಳ ಜೀವನಾಡಿಯಾಗಿರುವ ನೈಋುತ್ಯ ಮುಂಗಾರು ಮಾರುತ ಎರಡು ದಿನ ತಡ  ಎರಡು ದಿನ ತಡವಾಗಿ ಗುರುವಾರ ಕೇರಳವನ್ನು ಪ್ರವೇಶಿದ ಮುಂಗಾರು ಮಾರುತಗಳು ದೇಶದಲ್ಲಿ ನಾಲ್ಕು ತಿಂಗಳ ಮಳೆಗಾಲ ಅಧಿಕೃತವಾಗಿ ಆರಂಭ

 ನವದೆಹಲಿ (ಜೂ.04): ದೇಶದ ಕೃಷಿ ಚಟುವಟಿಕೆಗಳ ಜೀವನಾಡಿಯಾಗಿರುವ ನೈಋುತ್ಯ ಮುಂಗಾರು ಮಾರುತಗಳು ಎರಡು ದಿನ ತಡವಾಗಿ ಗುರುವಾರ ಕೇರಳವನ್ನು ಪ್ರವೇಶಿಸಿವೆ. 

Add Asianetnews Kannada as a Preferred SourcegooglePreferred

ಅದರೊಂದಿಗೆ ದೇಶದಲ್ಲಿ ನಾಲ್ಕು ತಿಂಗಳ ಮಳೆಗಾಲ ಅಧಿಕೃತವಾಗಿ ಆರಂಭಗೊಂಡಂತಾಗಿದೆ. ಮುಂಗಾರು ಮಾರುತಗಳು ಇನ್ನೆರಡು ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕರ್ನಾಟಕ, ಆಂಧ್ರಪ್ರದೇಶವನ್ನು ಪ್ರವೇಶಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಮುಂಗಾರು ಈ ಸಲ 1 ವಾರ ವಿಳಂಬ?

ಸಾಮಾನ್ಯವಾಗಿ ನೈಋುತ್ಯ ಮುಂಗಾರು ಜೂ.1ಕ್ಕೆ ಕೇರಳ ಪ್ರವೇಶಿಸುತ್ತದೆ. ಆದರೆ ಕಳೆದ ಆರು ವರ್ಷಗಳಲ್ಲಿ ಮೂರು ಬಾರಿ ತಡವಾಗಿದೆ. ಈ ವರ್ಷವೂ ಎರಡು ದಿನ ತಡವಾಗಿ ಜೂ.3ಕ್ಕೆ ಪ್ರವೇಶಿಸಿದೆ. ಈ ವರ್ಷ ದಕ್ಷಿಣ ಭಾರತದಲ್ಲಿ ವಾಡಿಕೆಯಂತೆ ಸಾಮಾನ್ಯ ಮಳೆಯಾಗಲಿದೆ, ಆದರೆ ಒಟ್ಟಾರೆ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೃಷಿ ಕ್ಷೇತ್ರವನ್ನು ದೊಡ್ಡ ಪ್ರಮಾಣದಲ್ಲಿ ಅವಲಂಬಿಸಿರುವ ದೇಶದ ಆರ್ಥಿಕತೆಗೆ ಉತ್ತಮ ಮುಂಗಾರು ಬಹಳ ಮುಖ್ಯವಾಗಿದೆ.

ಈ ವರ್ಷವೂ ಸಾಮಾನ್ಯ ಮುಂಗಾರು: ಸ್ಕೈಮೆಟ್‌! ..

ಮುಂಗಾರು ಆಗಮನ ಮಾಪನಕ್ಕೆ ಇರುವ 14 ಮಳೆ ಮಾಪನಾ ಕೇಂದ್ರಗಳ ವ್ಯಾಪ್ತಿಯ ಶೇ.60ಕ್ಕಿಂತ ಹೆಚ್ಚಿನ ಪ್ರದೇಶಗಳಲ್ಲಿ ಕಳೆದ 2 ದಿನಗಳ ಅವಧಿಯಲ್ಲಿ 2.5 ಮಿ.ಮೀಗಿಂತ ಹೆಚ್ಚು ಮಳೆಯಾಗಿದೆ. ಜೊತೆಗೆ ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಇದು ಮುಂಗಾರು ಆಗಮನ ಸ್ಪಷ್ಟಸುಳಿವು ಎಂದು ಹವಾಮಾನ ಇಲಾಖೆ ಹೇಳಿದೆ.