ಉದ್ಧವ್ ಠಾಕ್ರೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್| ಹೀರಾಮಯ್ ತಿವಾರಿ ಎಂಬಾತನ ತಲೆ ಬೋಳಿಸಿದ ಶಿವಸೇನೆ ಕಾರ್ಯಕರ್ತರು| ಜಾಮಿಯಾ ವಿವಿ ಗಲಾಟೆಯನ್ನು ಜಲಿಯನ್ ವಾಲಾಬಾಗ್ ಘಟನೆಗೆ ಹೋಲಿಸಿದ್ದ ಮಹಾ ಸಿಎಂ| ಉದ್ಧವ್ ಹೇಳಿಕೆ ವಿರೋಧಿಸಿ ಪೋಸ್ಟ್ ಮಾಡಿದ್ದ  ಹೀರಾಮಯ್ ತಿವಾರಿ| ಹಲ್ಲೆ ಮಾಡಿ ಹೀರಾಮಯ್ ತಿವಾರಿ ತಲೆ ಬೋಳಿಸಿದ ಸೇನಾ ಕಾರ್ಯಕರ್ತರು| 

ಮುಂಬೈ(ಡಿ.24): ಪಕ್ಷದ ನಾಯಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ ವ್ಯಕ್ತಿ ವಿರುದ್ಧ ಶಿವಸೇನೆ ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಂಬೈ ನ ವಡಾಲಾ ನಿವಾಸಿ ಹೀರಾಮಯ್ ತಿವಾರಿ ಎಂಬುವರು ಮಹಾರಾಷ್ಟ್ರ ನೂತನ ಸಿಎಂ ಶಿವಸೇನಾ ನಾಯಕ ಉದ್ಧವ್ ಠಾಕ್ರೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಇದರಿಂದ ಕೆರಳಿದ ಶಿವಸೇನೆ ಕಾರ್ಯಕರ್ತರು ತಿವಾರಿ ತಲೆ ಬೋಳಿಸಿದ್ದಲ್ಲದೇ ವಿಡಿಯೋ ಕೂಡ ಮಾಡಿದ್ದಾರೆ ಎನ್ನಲಾಗಿದೆ. 

Scroll to load tweet…

ಈ ಬಗ್ಗೆ ಹೀರಾಮಯ್ ತಿವಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶಿವಸೇನೆಯ ಕಾರ್ಯಕರ್ತರು ನನ್ನನ್ನು ಥಳಿಸಿ, ನನ್ನ ತಲೆ ಬೋಳಿಸಿ ಅವಮಾನ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಉದ್ಧವ್ ಮೇಲಿನ ಬೇಸರ: ಶಿವಸೇನೆ ತ್ಯಜಿಸಿ ಬಿಜೆಪಿ ಸೇರಿದ 400 ಕಾರ್ಯಕರ್ತರು!

ಜಾಮಿಯಾ ವಿವಿ ಬಳಿ ನಡೆದ ಗಲಾಟೆಯನ್ನು ಜಲಿಯನ್ ವಾಲಾಬಾಗ್‌ ಘಟನೆಗೆ ಸಿಎಂ ಉದ್ಧವ್ ಠಾಕ್ರೆ ಹೋಲಿಸಿದ್ದರು. ಇದನ್ನು ವಿರೋಧಿಸಿ ತಿವಾರಿ ಉದ್ಧವ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

Scroll to load tweet…