ಹಿಂದೂ- ಮುಸ್ಲಿಂ ಸಾಮರಸ್ಯಕ್ಕೊಂದು ಅಪರೂಪದ ನಿದರ್ಶನ | ಮುಸ್ಲಿಂ ಮದುವೆ ಕಾರ್ಡ್‌ನಲ್ಲಿ ಹಿಂದೂ ದೇವರ ಫೋಟೋ | 

ಲಕ್ನೋ (ಫೆ. 29): ಹಿಂದೂಗಳ ಮದುವೆ ಕರೆಯೋಲೆಯಲ್ಲಿ ದೇವರ ಫೋಟೋಗಳನ್ನು ಹಾಕುವುದು ಸಾಮಾನ್ಯ. ಆದರೆ, ಉತ್ತರ ಪ್ರದೇಶದ ಮೇರಠ್‌ನಲ್ಲಿ ಮುಸ್ಲಿಂ ಮದುವೆಯ ಆಮಂತ್ರಣಪತ್ರಿಕೆಯಲ್ಲಿ ಗಣೇಶ ಮತ್ತು ರಾಧಾಕೃಷ್ಣ ಮತ್ತು ಚಾಂದ್‌ ಮುಬಾರಕ್‌ ಫೋಟೋಗಳನ್ನು ಮುದ್ರಿಸಿರುವುದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಸ್ಲಿಮರ ಮನೆಯಲ್ಲಿ ಸಪ್ತಪದಿ ತುಳಿದ ಹಿಂದೂ ಯುವತಿ

ಹಸ್ತಿನಾಪುರ ಪ್ರದೇಶದ ನಿವಾಸಿ ಮೊಹದ್‌ ಸರಾಫತ್‌ ಎಂಬಾತ ಮಾ.4ರಂದು ನಡೆಯಲಿರುವ ತನ್ನ ಮಗಳ ಮದುವೆಗೆ ಇಂಥದ್ದೊಂದು ವಿಶಿಷ್ಟಮಂಗಳಪತ್ರವನ್ನು ಸಿದ್ಧಪಡಿಸಿದ್ದಾನೆ. ಈ ಮದುವೆಗೆ ಹಿಂದುಗಳಿಗೂ ಆಮಂತ್ರಣ ನೀಡಿದ್ದಾನೆ.

' ನಮ್ಮ ಸುತ್ತಮುತ್ತ ಕೋಮು ಸಾಮರಸ್ಯ ಹದಗೆಟ್ಟಿರುವಾಗ ಹಿಂದೂ - ಮುಸ್ಲಿಂ ಸಾಮರಸ್ಯ ಮೆರೆಯಲು ಇದೊಂದು ಒಳ್ಳೆಯ ಐಡಿಯಾ. ನನ್ನ ಸ್ನೇಹಿತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನನ್ನ ಸಂಬಂಧಿಕರಿಗೆ ಹಿಂದಿ ಓದಲು ಬರುವುದಿಲ್ಲ. ಅವರಿಗಾಗಿ ಉರ್ದುನಲ್ಲಿ ಕಾರ್ಡ್ ಮಾಡಿಸಿದ್ದೇವೆ' ಎಂದು ಹೇಳಿದ್ದಾರೆ. 

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"