ಭಾರತ ಪ್ರಜಾಪ್ರಭುತ್ವದ ತಾಯಿ. ಯುವಕರು ಮತ ಚಲಾಯಿಸುವ ಮೂಲಕ ತಮ್ಮ ರಾಜಕೀಯ ಅಭಿಪ್ರಾಯ ವ್ಯಕ್ತಪಡಿಸಿದರೆ ದೇಶದ ಭವಿಷ್ಯ ಉತ್ತಮವಾಗಿರಲಿದೆ. ಯುವಕರು ವಂಶ ರಾಜಕಾರಣದ ಪ್ರಭಾವ ನಿಯಂತ್ರಿಸಬೇಕು ಎಂದು ಮೋದಿ ಪರೋಕ್ಷವಾಗಿ ಕಾಂಗ್ರೆಸ್‌ ವಿರುದ್ಧ ಕುಟುಕಿದರು.

ನಾಸಿಕ್‌ (ಜನವರಿ 13, 2024): ‘ಯುವಕರೇ.. ವಂಶಾಡಳಿತದಿಂದ ದೇಶಕ್ಕೆ ಹಾನಿಯಾಗಿದೆ ಎಂಬುದು ನಿಮಗೆ ಗೊತ್ತಿದೆ. ನೀವು ದೇಶಕ್ಕಾಗಿ ಮತ ಚಲಾಯಿಸಬೇಕು ಮತ್ತು ಈ ಮೂಲಕ ವಂಶ ರಾಜಕಾರಣವನ್ನು ಕೊನೆಗೊಳಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಯುವಕರಿಗೆ ಕರೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನವರಿ 12ರ ಶುಕ್ರವಾರ ಸ್ವಾಮಿ ವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ 27ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿದ ಮೋದಿ ‘ಮಾದಕ ವಸ್ತುಗಳಿಂದ ಯುವಕರು ದೂರವಿರಿ. ಅಲ್ಲದೇ ತಾಯಿ ಮತ್ತು ಸಹೋದರಿಯರ ಹೆಸರಿನಲ್ಲಿ ನಿಂದನೀಯ ಅವಾಚ್ಯ ಶಬ್ದಗಳನ್ನು ಬಳಸುವುದನ್ನು ನಿಲ್ಲಿಸಿ. ಭಾರತ ಪ್ರಜಾಪ್ರಭುತ್ವದ ತಾಯಿ. ಯುವಕರು ಮತ ಚಲಾಯಿಸುವ ಮೂಲಕ ತಮ್ಮ ರಾಜಕೀಯ ಅಭಿಪ್ರಾಯ ವ್ಯಕ್ತಪಡಿಸಿದರೆ ದೇಶದ ಭವಿಷ್ಯ ಉತ್ತಮವಾಗಿರಲಿದೆ. ಯುವಕರು ವಂಶ ರಾಜಕಾರಣದ ಪ್ರಭಾವ ನಿಯಂತ್ರಿಸಬೇಕು’ ಎಂದು ಪರೋಕ್ಷವಾಗಿ ಕಾಂಗ್ರೆಸ್‌ ವಿರುದ್ಧ ಕುಟುಕಿದರು.

ಶ್ರೀರಾಮ ಮಂದಿರ ಹೋರಾಟದಲ್ಲಿ ಪ್ರಧಾನಿ ಮೋದಿಯ ಪಾತ್ರ ಏನು?

ಅಲ್ಲದೇ ‘ಈ ಅಮೃತ ಕಾಲವು ದೇಶದ ಯುವಜನರಿಗೆ ಸುವರ್ಣ ಯುಗವಾಗಿದೆ. ಯುವಶಕ್ತಿಯಿಂದಾಗಿ ದೇಶವು ಪ್ರಪಂಚದ 5ನೇ ಅತಿ ದೊಡ್ಡ ಆರ್ಥಿಕತೆಯಾಗಿದೆ. ಅಲ್ಲದೇ ಭಾರತವು ಇದೀಗ ದೇಶದ ಟಾಪ್‌ ಸ್ಟಾರ್ಟ್ ಅಪ್‌ಗಳಲ್ಲಿ ಒಂದಾಗಿದೆ. ಭಾರತವು ಇದೀಗ ಹೊಸ ಆವಿಷ್ಕಾರಗಳನ್ನು ಮಾಡುತ್ತಿದೆ. ಮತ್ತು ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೆಲ್ಲದರ ಹಿಂದೆ ಅಮೃತ ಕಾಲದ ಸುವರ್ಣ ಯುಗದಲ್ಲಿರುವ ದೇಶದ ಯುವಜನರಿದ್ದಾರೆ. ಇಂದು ಯುವಶಕ್ತಿಯ ದಿನ. ಗುಲಾಮಗಿರಿಯ (ಬ್ರಿಟಿಷ್‌ ಆಳ್ವಿಕೆ) ದಿನಗಳಲ್ಲಿ ಭಾರತವನ್ನು ಹೊಸ ಚೈತನ್ಯವನ್ನು ತುಂಬಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದನವರಿಗೆ ಈ ದಿನವನ್ನು ಅರ್ಪಿಸಲಾಗಿದೆ’ ಎಂದರು.

ನರೇಂದ್ರ ಮೋದಿ, ಪ್ರೈಮ್ ಮಿನಿಸ್ಟರ್ ಆಫ್ ಭಾರತ್ ಎಂದು ಮಾತು ಆರಂಭಿಸಿದ ಮೊರಕ್ಕೊ ಸಚಿವ!