09:39 PM (IST) Jan 16

India News Live 16th January:ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?

ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು? ಪ್ರತಿ ಬಣ್ಣಕ್ಕೆ ವಿಶೇಷ ಮಹತ್ವವಿದೆ. ಇದು ಕ್ಲಾಸ್ ಸೂಚಿಸುತ್ತದೆ. ಅಷ್ಟಕ್ಕೂ ರೈಲಿನ ಬಣ್ಣದ ಹಿಂದಿನ ರಹಸ್ಯ ಇಲ್ಲಿದೆ.

Read Full Story
09:25 PM (IST) Jan 16

India News Live 16th January:ಅಜ್ಜ ಅಜ್ಜಿಯ ಮೊದಲ ಬಾರಿ ವಿಮಾನದಲ್ಲಿ ಕರೆದೊಯ್ದ ಮೊಮ್ಮಗ - ವೀಡಿಯೋ ಭಾರಿ ವೈರಲ್

ಯುವಕನೋರ್ವ ತನ್ನ ಅಜ್ಜ-ಅಜ್ಜಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದಿದ್ದಾನೆ. ಅವರ ಮೊದಲ ವಿಮಾನ ಪ್ರಯಾಣದ ಭಾವುಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅಜ್ಜ-ಅಜ್ಜಿಯ ಕನಸನ್ನು ನನಸು ಮಾಡಿದ ಮೊಮ್ಮಗನ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read Full Story
08:28 PM (IST) Jan 16

India News Live 16th January:ಸಿಂಗಾಪುರದ ಕೋತಿ ಬ್ಯೂಟಿಗೆ ಮನಸೋತ ಯುವತಿ - ಇದು ಕಾಸ್ಟ್ಯುಮ್ ಅಲ್ಲ ದೇವರೇ ಕೊಡಿಸಿದ ಸೊಗಸಾದ ಬಟ್ಟೆ

ಸಿಂಗಾಪುರದಲ್ಲಿ ಕಂಡುಬಂದ ಅಪರೂಪದ ಡೌಕ್ ಲಂಗೂರ್ ಕೋತಿಯೊಂದು ತನ್ನ ವಿಶಿಷ್ಟ ನೋಟದಿಂದ ಎಲ್ಲರ ಗಮನ ಸೆಳೆದಿದೆ. ನೈಸರ್ಗಿಕವಾಗಿಯೇ ಬಟ್ಟೆ ಧರಿಸಿದಂತೆ ಕಾಣುವ ಈ ಕೋತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕೃತಿಯ ಈ ಅದ್ಭುತ ಸೃಷ್ಟಿಗೆ ನೆಟ್ಟಿಗರು ಬೆರಗಾಗಿದ್ದಾರೆ.
Read Full Story
07:44 PM (IST) Jan 16

India News Live 16th January:Immunity boost - ರೋಗನಿರೋಧಕ ಶಕ್ತಿ ಹೆಚ್ಚಿಸಲು ಸುಲಭ ಉಪಾಯ- ಸದ್ಗುರು ಜಗ್ಗಿ ವಾಸುದೇವ ಟಿಪ್ಸ್​ ಕೇಳಿ

ಹವಾಮಾನ ಬದಲಾವಣೆಯಿಂದ ಕುಂದಿದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸದ್ಗುರು ಜಗ್ಗಿ ವಾಸುದೇವ್ ಅವರು ಸರಳ ಮನೆಮದ್ದನ್ನು ತಿಳಿಸಿದ್ದಾರೆ. ನೆಲ್ಲಿಕಾಯಿ, ಜೇನುತುಪ್ಪ ಮತ್ತು ಕಾಳು ಮೆಣಸನ್ನು ಬಳಸಿ ತಯಾರಿಸಬಹುದಾದ ಈ ಆಯುರ್ವೇದ ಪೇಯವು ಕೆಲವೇ ವಾರಗಳಲ್ಲಿ ಪರಿಣಾಮಕಾರಿ ಫಲಿತಾಂಶ ನೀಡುತ್ತದೆ.
Read Full Story
07:37 PM (IST) Jan 16

India News Live 16th January:ನರಕಕ್ಕೆ ಬನ್ನಿ ಅಂತ ಕರೆಯುತ್ತೆ ಈ ವೀಡಿಯೋ - ಅನೇಕರ ತಲೆ ಕೆಡಿಸಿದ 140 ವರ್ಷಗಳ ಅವಧಿಯ ವಿಚಿತ್ರ ಯುಟ್ಯೂಬ್ ವೀಡಿಯೋ

ಯೂಟ್ಯೂಬ್‌ನಲ್ಲಿ 140 ವರ್ಷಗಳ ಅವಧಿ ತೋರಿಸುವ ವೀಡಿಯೋವೊಂದು ವೈರಲ್ ಆಗಿ ಜನರಲ್ಲಿ ಗೊಂದಲ ಸೃಷ್ಟಿಸಿದೆ. ವಿಡಿಯೋದ ವಿವರಣೆ ಅರೇಬಿಕ್ ಭಾಷೆಯಲ್ಲಿದ್ದು ಭಾಷಾಂತರಿಸಿದಾಗ 'ನರಕದಲ್ಲಿ ನನ್ನನ್ನು ಭೇಟಿ ಮಾಡಿ' ಎಂಬ ಅರ್ಥವನ್ನು ನೀಡುತ್ತದೆ. ಈ ಬಗ್ಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.

Read Full Story
07:20 PM (IST) Jan 16

India News Live 16th January:ಮುಂಬೈ ಪಾಲಿಕೆ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಭರ್ಜರಿ ಗೆಲುವು

ಮುಂಬೈ ಪಾಲಿಕೆ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಭರ್ಜರಿ ಗೆಲುವು ಕಂಡಿದ್ದಾರೆ. ಬಿಜೆಪಿ, ಶಿವಸೇನೇ ಸರಿದಂತೆ ಪ್ರಮುಖ ಪಕ್ಷಗಳಿಂದ ಪ್ರಬಲ ಸ್ಪರ್ಧೆ ಎದುರಿಸಿದ ಅಭ್ಯರ್ಥಿ ಅಭೂತಪೂರ್ವ ಗೆಲುವು ಕಂಡಿದ್ದಾರೆ.

Read Full Story
06:54 PM (IST) Jan 16

India News Live 16th January:ಟ್ರಂಪ್​ಗೆ ದಿಢೀರ್​ ಸಿಕ್ಕಿತು ನೊಬೆಲ್​ ಶಾಂತಿ ಪ್ರಶಸ್ತಿ! ಕಸಿದುಕೊಂಡರೂ ಇತಿಹಾಸ ಸೃಷ್ಟಿಸಿದ ಅಮೆರಿಕ ಅಧ್ಯಕ್ಷ

2025ರ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ, ವೆನೆಜುವೆಲಾದ ಮಾರಿಯಾ ಕೊರಿನಾ ಮಚಾಡೊ ಅವರು ತಮ್ಮ ಪ್ರಶಸ್ತಿಯನ್ನು ಅಮೆರಿಕದ ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್‌ಗೆ ಹಸ್ತಾಂತರಿಸಿದ್ದಾರೆ. ಈ ವಿಚಿತ್ರ ಘಟನೆ ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಆದರೆ ನಿಯಮ ಇರೋದೇನು?

Read Full Story
06:10 PM (IST) Jan 16

India News Live 16th January:ಹೊರ ಪ್ರಪಂಚದ ಜೊತೆ ಸಂಪರ್ಕ ಇಲ್ಲದ ಅಮೇಜಾನ್ ಕಾಡಿನ ಕಾಡು ಮನುಷ್ಯರ ಮೊದಲ ವೀಡಿಯೋ ವೈರಲ್

ಹೊರಗಿನ ಪ್ರಪಂಚದ ಜೊತೆಗೆ ಯಾವುದೇ ಸಂಪರ್ಕವೇ ಇಲ್ಲದ ಅಮೇಜಾನ್ ಕಾಡಿನ ಬುಡಕಟ್ಟು ಸಮುದಾಯದ ಜನರನ್ನು ಬಹಳ ಹತ್ತಿರದಿಂದ ವೀಡಿಯೋ ಮಾಡಿರುವಂತ ದೃಶ್ಯಾವಳಿಯನ್ನು ಸಂರಕ್ಷಣಾವಾದಿ ಪಾಲ್ ರೊಸೋಲಿ ಅವರು ಬಿಡುಗಡೆ ಮಾಡಿದ್ದಾರೆ. ಈ ವಿಚಾರವೀಗ ಜಾಗತಿಕ ಮಟ್ಟದಲ್ಲಿ ಜನರ ಗಮನ ಸೆಳೆಯುತ್ತಿದೆ.

Read Full Story
05:28 PM (IST) Jan 16

India News Live 16th January:ವಿರಾಟ್ ಕೊಹ್ಲಿ ಕಾಲೆಳೆದ ಸಂಜಯ್ ಮಂಜ್ರೇಕರ್‌ಗೆ ಚಾಟಿ ಬೀಸಿದ ಹರ್ಭಜನ್ ಸಿಂಗ್!

ಟೆಸ್ಟ್ ನಿವೃತ್ತಿ ನಂತರ ಏಕದಿನ ಕ್ರಿಕೆಟ್ ಆಡುತ್ತಿರುವ ವಿರಾಟ್ ಕೊಹ್ಲಿ ನಿರ್ಧಾರವನ್ನು ಸಂಜಯ್ ಮಂಜ್ರೇಕರ್ ಪ್ರಶ್ನಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಹರ್ಭಜನ್ ಸಿಂಗ್, ಯಾವುದೇ ಫಾರ್ಮ್ಯಾಟ್‌ನಲ್ಲಿ ರನ್ ಗಳಿಸುವುದು ಸುಲಭವಲ್ಲ ಎಂದು ಹೇಳಿದ್ದಾರೆ.

Read Full Story
05:16 PM (IST) Jan 16

India News Live 16th January:ಒಡತಿ ಟೊಮೆಟೊ ಕೊಟ್ಟಿಲ್ಲವೆಂದು ಪೊಲೀಸರನ್ನು ಕರೆಸಿದ ಗಿಳಿ! ಅಚ್ಚರಿಯ ವಿಡಿಯೋ ವೈರಲ್​

ಸೋಷಿಯಲ್ ಮೀಡಿಯಾದಲ್ಲಿ ಗಿಳಿಯೊಂದರ ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಅದು ತನ್ನ ಒಡತಿಯ ಬಳಿ ಟೊಮೆಟೊ ಕೇಳುತ್ತದೆ. ಒಡತಿ ನಿರಾಕರಿಸಿದಾಗ, ಗಿಳಿಯು 'ಪೊಲೀಸ್, ಪೊಲೀಸ್' ಎಂದು ಕೂಗುವ ಮೂಲಕ ತಮಾಷೆಯಾಗಿ ಧಮ್ಕಿ ಹಾಕುತ್ತದೆ.
Read Full Story
04:58 PM (IST) Jan 16

India News Live 16th January:ಅಪಘಾತದಲ್ಲಿ ಬಾಲಕ ಸ್ಥಳದಲ್ಲೇ ಸಾವು, ನೆರವಿನ ಬದಲು ಲಾರಿಯಿಂದ ಚೆಲ್ಲಿದ ಮೀನಿಗಾಗಿ ಮುಗಿಬಿದ್ದ ಜನ

ಅಪಘಾತದಲ್ಲಿ ಬಾಲಕ ಸ್ಥಳದಲ್ಲೇ ಸಾವು, ನೆರವಿನ ಬದಲು ಲಾರಿಯಿಂದ ಚೆಲ್ಲಿದ ಮೀನಿಗಾಗಿ ಮುಗಿಬಿದ್ದ ಜನ ವಿಡಿಯೋ ಭಾರತೀಯರ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ನೆರವಿನ ಬದಲು ಜನರಿಗೆ ರಸ್ತೆಯಲ್ಲಿ ಬಿದ್ದಿದ್ದ ಫ್ರಿ ಮೀನು ಹೆಚ್ಚಾಯಿತು.

Read Full Story
04:13 PM (IST) Jan 16

India News Live 16th January:ಆರ್‌ಸಿಬಿ ಮ್ಯಾಚ್ ಬೆಂಗಳೂರು ಬಿಟ್ ಎಲ್ಲಿಗೂ ಶಿಫ್ಟ್ ಆಗೊಲ್ಲ! ಮಹತ್ವದ ಅಪ್‌ಡೇಟ್ಸ್‌ ಕೊಟ್ಟ ಬೆಂಗಳೂರು ಫ್ರಾಂಚೈಸಿ

ಬೆಂಗಳೂರು: ಮುಂಬರುವ 2026ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳು ನಗರದ ಎಂ ಚಿನ್ನಸ್ವಾಮಿ ಸ್ಟೇಡಿಯಂನಿಂದ ಬೇರೆ ಕಡೆ ಶಿಫ್ಟ್ ಆಗಲಿದೆ ಎನ್ನುವ ಸುದ್ದಿ ಜೋರಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ, ಆರ್‌ಸಿಬಿ ಫ್ರಾಂಚೈಸಿಯು ಇದೀಗ ಅಧಿಕೃತ ಅಪ್‌ಡೇಟ್ಸ್ ನೀಡಿದೆ.

Read Full Story
04:10 PM (IST) Jan 16

India News Live 16th January:ಬಿಎಂಸಿ ಚುನಾವಣೆಯಲ್ಲಿ ಗೆಲುವು - ರಾಜ್‌ಠಾಕ್ರೆ, ಉದ್ಧವ್ ಠಾಕ್ರೆಗೆ ರಸಮಲೈ ಕಳುಹಿಸಿದ ಬಿಜೆಪಿಯ ಬಗ್ಗಾ

ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವೂ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ನಾಯಕ ತೇಜಿಂದರ್ ಬಗ್ಗಾ ಅವರು ವಿರೋಧಿ ಬಣವಾದ ಶಿವಸೇನೆಯ ಉದ್ಧವ್‌ ಠಾಕ್ರೆ, ರಾಜ್ ಠಾಕ್ರೆ ಹಾಗೂ ಆದಿತ್ಯ ಠಾಕ್ರೆ ಅವರಿಗೆ ಸಿಹಿತಿನಿಸಾದ ರಸಮಲೈ ಅನ್ನು ಕಳುಹಿಸಿಕೊಟ್ಟಿದ್ದಾರೆ.

Read Full Story
03:59 PM (IST) Jan 16

India News Live 16th January:ಇನ್ಫೋಸಿಸ್ ಷೇರು ಮೌಲ್ಯ ಹೆಚ್ಚಳ, ಒಂದೇ ದಿನ ನಾರಾಯಣಮೂರ್ತಿ , ಸುಧಾಮೂರ್ತಿ ಗಳಿಸಿದ್ದೆಷ್ಟು?

ಇನ್ಫೋಸಿಸ್ ಷೇರು ಮೌಲ್ಯ ಹೆಚ್ಚಳ, ಶುಕ್ರವಾರ ಶೇಕಡಾ 5ರಷ್ಟು ಏರಿಕೆಯಾಗಿದೆ. ಸಂಸ್ಥಾಪಕರಾದ ನಾರಾಯಣಮೂರ್ತಿ, ಸುಧಾ ಮೂರ್ತಿ ಸೇರಿ ಹೂಡಿಕೆದಾರರು ಒಂದೇ ದಿನ ಗಳಿಸಿದ ಆದಾಯವೆಷ್ಟು? ಶುಕ್ರವಾರದ ಶುಭ ಘಳಿಗೆಯಲ್ಲಿ ಗಳಿಕೆ

Read Full Story
02:43 PM (IST) Jan 16

India News Live 16th January:ಕೇರಳದಿಂದ ಓದಲು ಬಂದು ಇಲ್ಲಿ ಬೇರೆಯದೇ ಕಾರುಬಾರು - ಕಾರಿನ ಬೆಲೆಗಿಂತಲೂ ದುಬಾರಿ ದಂಡ ವಿಧಿಸಿದ ಪೊಲೀಸರು

ಕೇರಳದ ಕಣ್ಣೂರಿನಿಂದ ಬೆಂಗಳೂರಿಗೆ ಎಂಜಿನಿಯರಿಂಗ್ ಮಾಡುವುದಕ್ಕಾಗಿ ಬಂದಿದ್ದ ವಿದ್ಯಾರ್ಥಿಯೋರ್ವನಿಗೆ ಬೆಂಗಳೂರಿನ ಟ್ರಾಫಿಕ್ ಪೊಲೀಸರು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸುಮಾರು 1.11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಹಾಗಿದ್ರೆ ಆತ ಮಾಡಿದ್ದೇನು ಇಲ್ಲಿದೆ ಡಿಟೇಲ್ ಸ್ಟೋರಿ.

Read Full Story
01:28 PM (IST) Jan 16

India News Live 16th January:ಅಲಿಬಾಗ್‌ನಲ್ಲಿ ಮತ್ತೊಂದು ದುಬಾರಿ ಆಸ್ತಿ ಖರೀದಿಸಿದ ವಿರುಷ್ಕಾ - ಸ್ಟಾಂಪ್ ಡ್ಯೂಟಿಯೇ 2.27 ಕೋಟಿ - ಆಸ್ತಿ ಮೊತ್ತವೆಷ್ಟು?

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಮಹಾರಾಷ್ಟ್ರದ ಅಲಿಬಾಗ್‌ನಲ್ಲಿ ಜಂಟಿಯಾಗಿ ಕೋಟ್ಯಾಂತರ ಮೌಲ್ಯದ ಆಸ್ತಿಯನ್ನು ಖರೀದಿಸಿದ್ದಾರೆ. ಸುಮಾರು 21,010 ಚದರ ಮೀಟರ್ ವಿಸ್ತೀರ್ಣದ ಆಸ್ತಿಗಾಗಿ ಅವರು 2.27 ಕೋಟಿ ರೂ. ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ. 

Read Full Story
01:06 PM (IST) Jan 16

India News Live 16th January:Maharashtra Municipal Corporation Results - ಬಿಎಂಸಿಯಲ್ಲಿ ಬಹುಮತದ ಗಡಿ ದಾಟಿದ ಮಹಾಯುತಿ, ಠಾಕ್ರೆ ಸರ್ಕಾರ್‌ ಅಧಿಕಾರ ಅಂತ್ಯ!

ಮಹಾರಾಷ್ಟ್ರದ 29 ಪುರಸಭೆಗಳ ಮತ ಎಣಿಕೆಯಲ್ಲಿ, ಬಿಜೆಪಿ-ಶಿವಸೇನೆ (ಶಿಂಧೆ ಬಣ) ನೇತೃತ್ವದ ಮಹಾಯುತಿ ಮೈತ್ರಿಕೂಟವು ಮುನ್ನಡೆ ಸಾಧಿಸಿದೆ. ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಸೇರಿದಂತೆ ಪ್ರಮುಖ ನಗರಗಳಲ್ಲಿ ಶತಕದ ಗಡಿ ದಾಟಿ ಮುನ್ನಡೆಯುತ್ತಿದ್ದು, ಲಾತೂರ್‌ನಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
Read Full Story
12:31 PM (IST) Jan 16

India News Live 16th January:ಅಳಿಯನಿಗೆ ರಾಜ ಮರ್ಯಾದೆ - 158 ಬಗೆಯ ಭಕ್ಷ್ಯ ಸಿದ್ಧಪಡಿಸಿ ಬಡಿಸಿದ ಆಂಧ್ರದ ಕುಟುಂಬ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿಯ ಕುಟುಂಬವೊಂದು ತಮ್ಮ ಮಗಳು ಮತ್ತು ಹೊಸ ಅಳಿಯನ ಮೊದಲ ಸಂಕ್ರಾಂತಿ ಹಬ್ಬಕ್ಕಾಗಿ 158 ಬಗೆಯ ಭಕ್ಷ್ಯಗಳನ್ನು ಸಿದ್ಧಪಡಿಸಿ ಅದ್ದೂರಿ ಔತಣ ನೀಡಿದೆ. ಗೋದಾವರಿ ಜಿಲ್ಲೆಯಲ್ಲಿ ಅಳಿಯನನ್ನು ರಾಜನಂತೆ ಸತ್ಕರಿಸುವ ಸಂಪ್ರದಾಯದ ಭಾಗವಾಗಿ ಈ ಸಂಭ್ರಮವನ್ನು ಆಚರಿಸಲಾಗಿದೆ.
Read Full Story
12:18 PM (IST) Jan 16

India News Live 16th January:ವಿಚ್ಛೇದನ ಪಡೆದು 10 ವರ್ಷಗಳ ನಂತರ 2ನೇ ಮದುವೆಗೆ ರೆಡಿಯಾದ ಸೀರಿಯಲ್‌ ನಟಿ!

ಟಿವಿ ನಟಿ ರಶ್ಮಿ ದೇಸಾಯಿ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಎರಡನೇ ಮದುವೆಯ ಬಗ್ಗೆ ಮಾತನಾಡಿದ್ದಾರೆ. ತಮ್ಮ ಪೋಷಕರು ತನಗಾಗಿ ಸಂಗಾತಿಯನ್ನು ಹುಡುಕುತ್ತಿದ್ದು, ಸರಿಯಾದ ಸಮಯದಲ್ಲಿ ಸರಿಯಾದ ವ್ಯಕ್ತಿ ಸಿಗುತ್ತಾರೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ. 

Read Full Story
12:11 PM (IST) Jan 16

India News Live 16th January:ಮಾವನ ಆಸ್ತಿಯಲ್ಲಿ ವಿಧವೆ ಸೊಸೆಗೆ ಜೀವನಾಂಶ - ಸುಪ್ರೀಂ ಮಹತ್ವದ ತೀರ್ಪು- ಕೋರ್ಟ್​ ಹೇಳಿದ್ದೇನು?

ಸುಪ್ರೀಂಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಮಾವನ ಮರಣದ ನಂತರ ವಿಧವೆಯಾದ ಸೊಸೆಗೂ ಮಾವನ ಆಸ್ತಿಯಿಂದ ಜೀವನಾಂಶ ಪಡೆಯುವ ಹಕ್ಕಿದೆ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ, ಕೆಳಹಂತದ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿ, ಹಿಂದೂ ದತ್ತು ಮತ್ತು ನಿರ್ವಹಣಾ ಕಾಯ್ದೆಯ ಅಡಿಯಲ್ಲಿನ ಕಾನೂನು ಗೊಂದಲಕ್ಕೆ ತೆರೆ ಎಳೆದಿದೆ.
Read Full Story