ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ, ಜನವರಿ 2026ರಿಂದ ರೆನಾಲ್ಟ್ ತನ್ನ ಎಲ್ಲಾ ಕಾರುಗಳ ಬೆಲೆ ಏರಿಕೆ ಮಾಡುತ್ತಿದೆ. ಕಾರು ಖರೀದಿಗೆ ಪ್ಲಾನ್ ಮಾಡಿದ್ದರೆ 31ರ ಒಳಗೆ ಬುಕ್ ಮಾಡಿ
- Home
- News
- India News
- India News Live: ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ
India News Live: ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ

ನವದೆಹಲಿ (ಡಿ.26): ದೀಪು ಚಂದ್ರದಾಸ್ ಎಂಬ ಹಿಂದು ವ್ಯಕ್ತಿಯನ್ನು ಹ*ತ್ಯೆಗೈದು, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ಭೀಕರ ಘಟನೆ ಮಾಸುವ ಮುನ್ನವೇ ಬಾಂಗ್ಲಾದೇಶ ದಲ್ಲಿ ಮತ್ತೊಬ್ಬ ಹಿಂದು ಯುವಕನನ್ನು ಗುಂಪೊಂ ದು ಹತ್ಯೆಗೈದಿದೆ. ಮೃತ ವ್ಯಕ್ತಿಯನ್ನು ಅಮೃತ್ ಮಂಡಲ್ ಗುರುತಿಸಲಾಗಿದೆ. ಕಳೆದ 5 ದಿನಗಳಲ್ಲಿ ಮೂರು ಕಡೆ 7 ಹಿಂದುಗಳ ಮನೆಗೆ ಬೆಂಕಿ ಹಾಕಲಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 26th December:ಹೊಸ ವರ್ಷ ಸಂಭ್ರಮದಲ್ಲಿ ಕಾರು ಖರೀದಿಸುವವರಿಗೆ ಶಾಕ್, ಜನವರಿಯಿಂದ ರೆನಾಲ್ಟ್ ಬೆಲೆ ಏರಿಕೆ
India News Live 26th December:ಗೋ ಟು ಹೆಲ್, ಗೆಳತಿಯೊಂದಿಗೆ ಡಿನ್ನರ್ ಡೇಟ್ ವೇಳೆ ಫ್ಯಾನ್ಸ್ ಬೈಗುಳ, ಹಾರ್ದಿಕ್ ಪಾಂಡ್ಯ ಮಾಡಿದ್ದೇನು?
ಗೆಳತಿ ಮಹೆಕಾ ಶರ್ಮಾ ಜೊತೆ ಡಿನ್ನರ್ ಡೇಟ್ ತೆರಳಿದ್ದ ಹಾರ್ದಿಕ್ ಪಾಂಡ್ಯಗೆ ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಇದರ ನಡುವೆ ಅಭಿಯಾನಿಯೊಬ್ಬ ಗೋ ಟು ಹೆಲ್ ಎಂದು ಅವಾಚ್ಯವಾಗಿ ಬೈದಿದ್ದಾನೆ. ಈ ವೇಳೆ ಗೆಳತಿಯನ್ನು ಕಾರಿನ ಒಳಬಿಟ್ಟು ಹಾರ್ದಿಕ್ ಪಾಂಡ್ಯ ಮಾಡಿದ್ದೇನು?
India News Live 26th December:ಎದ್ದೇಳಿ ಹಿಂದೂಗಳೇ ಮೌನ ನಿಮ್ಮನ್ನು ರಕ್ಷಿಸುವುದಿಲ್ಲ, ಬಾಂಗ್ಲಾದೇಶ ಘಟನೆ ಖಂಡಿಸಿ ನಟಿ ಕಾಜಲ್ ಎಚ್ಚರಿಕೆ
ಎದ್ದೇಳಿ ಹಿಂದೂಗಳೇ, ಇದು ನಟಿ ಕಾಜಲ್ ಅಗರ್ವಾಲ್ ಸನಾತನಿಗಳಿಗೆ ನೀಡಿದ ಕರೆ.ನೀವು ಮೌನವಾಗಿದ್ದರೆ ಅದರಿಂದ ರಕ್ಷಣೆ ಸಿಗುವುದಿಲ್ಲ. ಬಾಂಗ್ಲಾದೇಶ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ನಟಿ ಮಹತ್ವದ ಎಚ್ಚರಿಕೆ ನೀಡಿದ್ದಾರೆ.
India News Live 26th December:ಆಪರೇಷನ್ ಸಿಂದೂರ್ ವೇಳೆ ಯೋಧರಿಗೆ ನೆರವಾದ ಬಾಲಕನಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ 2026
ಆಪರೇಷನ್ ಸಿಂದೂರ್ ವೇಳೆ ಭಾರತ-ಪಾಕ್ ಗಡಿಯಲ್ಲಿ ಯೋಧರಿಗೆ ನೆರವಾದ 10 ವರ್ಷದ ಬಾಲಕ ಶ್ರವಣ್ ಸಿಂಗ್ಗೆ 2026ನೇ ಸಾಲಿನ ಪ್ರಧಾನಮಂತ್ರಿ ಬಾಲ ಪುರಸ್ಕಾರ ಲಭಿಸಿದೆ. ಅವರ ಅಸಾಧಾರಣ ಧೈರ್ಯ ಮತ್ತು ದೇಶಪ್ರೇಮವನ್ನು ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.
India News Live 26th December:ಸಿರಿಯಾ - ಶುಕ್ರವಾರದ ನಮಾಜ್ ವೇಳೆ ಮಸೀದಿಯಲ್ಲಿ ಸ್ಫೋಟ, 8 ಸಾವು, 18 ಮಂದಿಗೆ ಗಾಯ, ಎಲ್ಲೆಡೆ ಆಂಬ್ಯುಲೆನ್ಸ್ ಸೈರನ್ಗಳದ್ದೇ ಸದ್ದು!
Syria Mosque Bombing During Friday Prayers ಸಿರಿಯಾದ ಹೋಮ್ಸ್ ನಗರದಲ್ಲಿ ಶುಕ್ರವಾರದ ನಮಾಜ್ ವೇಳೆ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿ 18 ಮಂದಿ ಗಾಯಗೊಂಡಿದ್ದಾರೆ. ಮಸೀದಿಯೊಳಗೆ ಇರಿಸಲಾಗಿದ್ದ ಸ್ಫೋಟಕದಿಂದ ಈ ದುರ್ಘಟನೆ ನಡೆದಿದೆ.
India News Live 26th December:ಭಾರತದಲ್ಲಿ ಮೊಳಗಿದ ಬಾಯ್ಕಾಟ್ ಥಾಯ್ಲೆಂಡ್ ಕೂಗು, ವಿಷ್ಣಮೂರ್ತಿ ಧ್ವಂಸಕ್ಕೆ ಆಕ್ರೋಶ
ಭಾರತದಲ್ಲಿ ಮೊಳಗಿದ ಬಾಯ್ಕಾಟ್ ಥಾಯ್ಲೆಂಡ್ ಕೂಗು, ವಿಷ್ಣಮೂರ್ತಿ ಧ್ವಂಸಕ್ಕೆ ಆಕ್ರೋಶ, ಕಾಂಬೋಡಿಯಾ ಹಾಗೂ ಥಾಯ್ಲೆಂಡ್ ನಡುವಿನ ಗಡಿ ಸಮಸ್ಯೆ ತೀವ್ರಗೊಂಡಿದೆ. ಇದೇ ವೇಳೆ ಭಾರತದಲ್ಲಿ ಥಾಯ್ಲೆಂಡ್ ಪ್ರವಾಸ ಬಹಿಷ್ಕರಿಸಲು ಅಭಿಯಾನ ಶುರುವಾಗಿದೆ.
India News Live 26th December:ಚಳಿಗಾಲದಲ್ಲಿ ಹೆಂಡ್ತಿ ಕೈ ಕಾಲು ಕೋಲ್ಡ್ ಆಗಿದ್ರೆ ಗಂಡನದ್ದು ಬೆಚ್ಚಗಿರತ್ತೆ ಕಾರಣ ಮಾತ್ರ ಬಲು ಕುತೂಹಲ
ಚಳಿಗಾಲದಲ್ಲಿ ಮಹಿಳೆಯರ ಪಾದಗಳು ಪುರುಷರಿಗಿಂತ ಹೆಚ್ಚಾಗಿ ತಣ್ಣಗಾಗಲು ವೈಜ್ಞಾನಿಕ ಕಾರಣಗಳಿವೆ. ಈಸ್ಟ್ರೊಜೆನ್ ಹಾರ್ಮೋನ್, ಕಡಿಮೆ ಸ್ನಾಯು ದ್ರವ್ಯರಾಶಿ ಮತ್ತು ದೇಹದ ಪ್ರಮುಖ ಅಂಗಗಳಿಗೆ ರಕ್ತವನ್ನು ಕೇಂದ್ರೀಕರಿಸುವ ಶಾರೀರಿಕ ಪ್ರವೃತ್ತಿಯೇ ಇದಕ್ಕೆ ಪ್ರಮುಖ ಕಾರಣವಾಗಿದೆ.
India News Live 26th December:ಕ್ಯಾನ್ಸರ್ ಪೀಡಿತರ ಆರೈಕೆಗಾಗಿ ಜೀವಮಾನದ ಉಳಿಕೆಯನ್ನೆಲ್ಲಾ ಎಮ್ಸ್ಗೆ ನೀಡಿದ ಹಿರಿಯ ಸ್ತ್ರೀರೋಗ ತಜ್ಞೆ
ಶತಾಯುಷಿ ಸ್ತ್ರೀ ರೋಗ ತಜ್ಞೆ ಡಾ. ಲಕ್ಷ್ಮಿಬಾಯಿ ಅವರು ತಮ್ಮ ಜೀವಮಾನದ ಉಳಿತಾಯವಾದ ಸುಮಾರು 3.4 ಕೋಟಿ ರೂಪಾಯಿಗಳನ್ನು ಭುವನೇಶ್ವರದ ಏಮ್ಸ್ಗೆ ದಾನ ಮಾಡಿದ್ದಾರೆ. ಅವರ ಈ ಮಹಾನ್ ಕಾರ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
India News Live 26th December:ಇಶಾನ್ ಕಿಶನ್ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಿಂದ ಹೊರಬಿದ್ದಿದ್ದೇಕೆ?
ಬೆಂಗಳೂರು: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಎರಡನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಫಾರ್ಮ್ನಲ್ಲಿರುವ ಇಶಾನ್ ಕಿಶನ್ ವಿಜಯ್ ಹಜಾರೆ ಟೂರ್ನಿಯ ಎರಡನೇ ಪಂದ್ಯಕ್ಕೆ ಅಲಭ್ಯರಾಗಿದ್ದು ಏಕೆ ಎನ್ನುವುದನ್ನು ನೋಡೋಣ ಬನ್ನಿ.
India News Live 26th December:ಪತಿ-ಪತ್ನಿಯ ಅಕ್ರಮ ಸಾಬೀತು ಮಾಡಲಾಗದೇ ಕಷ್ಟಪಡುವವರ ನೆರವಿಗೆ ಹೈಕೋರ್ಟ್ - ಮಹತ್ವದ ತೀರ್ಪು ಪ್ರಕಟ
ಪತ್ನಿಯ ಅಕ್ರಮ ಸಂಬಂಧವನ್ನು ಸಾಬೀತುಪಡಿಸಲು ಪತಿ ನೀಡಿದ ಮೊಬೈಲ್ ಫೋಟೋಗಳನ್ನು ಸಾಕ್ಷ್ಯವಾಗಿ ಪರಿಗಣಿಸಿ ಮಧ್ಯಪ್ರದೇಶ ಹೈಕೋರ್ಟ್ ವಿಚ್ಛೇದನವನ್ನು ಎತ್ತಿಹಿಡಿದಿದೆ. ಭಾರತೀಯ ಸಾಕ್ಷ್ಯ ಕಾಯ್ದೆಯ ಸೆಕ್ಷನ್ 65B ವಿಚ್ಛೇದನ ಪ್ರಕರಣಗಳಿಗೆ ಕಟ್ಟುನಿಟ್ಟಾಗಿ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
India News Live 26th December:ವಿಧಾನಸಭೆ, ಲೋಕಸಭೆ ಮೀರಿಸಿದ ಪಾಲಿಕೆ ಎಲೆಕ್ಷನ್ , ಗೆದ್ರೆ ಥಾಯ್ಲೆಂಡ್ ಟ್ರಿಪ್, ಕಾರು ಸೇರಿ ಭರ್ಜರಿ ಭರವಸೆ
ವಿಧಾನಸಭೆ, ಲೋಕಸಭೆ ಮೀರಿಸಿದ ಪಾಲಿಕೆ ಎಲೆಕ್ಷನ್ , ಗೆದ್ರೆ ಥಾಯ್ಲೆಂಡ್ ಟ್ರಿಪ್, ಕಾರು ಸೇರಿ ಭರ್ಜರಿ ಭರವಸೆ ನೀಡಲಾಗಿದೆ. 1,100 ಚದರ ಅಡಿ ನಿವೇಷನ, ಚಿನ್ನದ ಸೇರಿ ಸೇರಿದಂತೆ ಹಲವು ಆಫರ್ ನೀಡಲಾಗಿದೆ. ಇದು ಭಾರತದ ಚುನಾವಣೆ ವ್ಯವಸ್ಥೆಯನ್ನು ಪ್ರಶ್ನಿಸಿದೆ.
India News Live 26th December:20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಧಾನ, ಇಬ್ಬರು ಮಕ್ಕಳಿಗೆ ಮರಣೋತ್ತರ ಪ್ರಶಸ್ತಿ ಕೊಟ್ಟಿದ್ಯಾಕೆ?
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 20 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದರು. ಇದರಲ್ಲಿ, ಬೇರೆಯವರ ಪ್ರಾಣ ಉಳಿಸಲು ಹೋಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಬಿಹಾರದ ಕಮಲೇಶ್ ಕುಮಾರ್ ಮತ್ತು ತಮಿಳುನಾಡಿನ ವ್ಯೋಮ ಪ್ರಿಯಾ ಅವರಿಗೆ ಮರಣೋತ್ತರವಾಗಿ ಈ ಗೌರವ ಸಂದಿದೆ.
India News Live 26th December:2025ರಲ್ಲಿ ಬ್ರೇಕ್ ಆದ ಕ್ರಿಕೆಟ್ ಜಗತ್ತಿನ ಅಪರೂಪದ ಟಾಪ್-5 ದಾಖಲೆಗಳಿವು!
ಬೆಂಗಳೂರು: ಕ್ರಿಕೆಟ್ನಲ್ಲಿ ಪ್ರತಿದಿನ ಒಂದಲ್ಲಾ ಒಂದು ದಾಖಲೆಗಳು ನಿರ್ಮಾಣವಾಗುತ್ತವೇ ಹಾಗೆಯೇ ಅಪರೂಪದ ದಾಖಲೆಗಳು ಬ್ರೇಕ್ ಆಗುತ್ತವೆ. ಬನ್ನಿ ನಾವಿಂದು 2025ರಲ್ಲಿ ದಾಖಲಾದ ಅಪರೂಪದಲ್ಲೇ ಅಪರೂಪದ ಟಾಪ್-5 ದಾಖಲೆಗಳು ಯಾವುವು ಎನ್ನುವುದನ್ನು ನೋಡೋಣ.
India News Live 26th December:ಸ್ವಂತ ಉದ್ಯೋಗಿಗೆ ಸಾಲ ಕೊಡದ ದೇಶದ ಪ್ರತಿಷ್ಠಿತ ಬ್ಯಾಂಕ್ - ಚಿಕಿತ್ಸೆ ನೀಡಲಾಗದೇ ಕ್ಯಾನ್ಸರ್ ಪೀಡಿತ ತಾಯಿ ಸಾವು
ವಾರಣಾಸಿಯ ಎಸ್ಬಿಐ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ, ಅನಾರೋಗ್ಯಪೀಡಿತ ತಾಯಿಯ ಚಿಕಿತ್ಸೆಗಾಗಿ ಬ್ಯಾಂಕ್ ಸಾಲ ನಿರಾಕರಿಸಿದ್ದಲ್ಲದೇ ಅವರ ಸಂಬಳವನ್ನು ತಡೆ ಹಿಡಿದಿದೆ. ಇದರಿಂದಾಗಿ ಚಿಕಿತ್ಸೆ ಸಿಗದೆ ಅವರ ತಾಯಿ ಮೃತಪಟ್ಟಿದ್ದು, ಈ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
India News Live 26th December:ಎಲ್ಲಾ ದಾನ ಮಾಡಿ ಡಿ.25ಕ್ಕೆ ಜಗತ್ತು ಅಂತ್ಯ, ಪುಂಗಿ ಬಿಟ್ಟು ₹80 ಲಕ್ಷ ಕಾರು ಖರೀದಿಸಿದ ಘಾನಾ ಪ್ರವಾದಿ
ಎಲ್ಲಾ ದಾನ ಮಾಡಿ ಡಿ.25ಕ್ಕೆ ಜಗತ್ತು ಅಂತ್ಯ, ಪುಂಗಿ ಬಿಟ್ಟು ₹80 ಲಕ್ಷ ಕಾರು ಖರೀದಿಸಿದ ಘಾನಾ ಪ್ರವಾದಿ, ತಾನು ಹೇಳಿದ್ದು ಸುಳ್ಳಾದ ಬೆನ್ನಲ್ಲೇ ಮತ್ತೊಂದು ಎಚ್ಚರಿಕೆ ನೀಡಿದ್ದಾನೆ. ಪ್ರವಾಹ ರದ್ದಾಗಿಲ್ಲ, ವಿಳಂಬವಾಗಿದೆ.ನನಗೆ ಇನ್ನೊಂದು ಸಂದೇಶ ಬಂದಿದೆ ಎಂದಿದ್ದಾನೆ.
India News Live 26th December:4.7 ಮಹಿಳಾಸ್ನೇಹಿ ರೇಟಿಂಗ್ ಹೊಂದಿದ್ದ ಕಂಪನಿ ಸಿಇಒನಿಂದಲೇ ಉದ್ಯೋಗಿಯ ಗ್ಯಾಂಗ್ರೇ*ಪ್ - ಕೇಸ್ನಲ್ಲಿ ಮಹಿಳೆಯೂ ಭಾಗಿ
ಚಲಿಸುವ ಕಾರಿನಲ್ಲೇ ಡ್ರಾಪ್ ನೆಪದಲ್ಲಿ ಮಹಿಳಾ ಮ್ಯಾನೇಜರ್ ಮೇಲೆ ಕಂಪನಿ ಸಿಇಒ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಈಗ ಸಾಕಷ್ಟು ಸಂಚಲನ ಸೃಷ್ಟಿಸಿದ್ದು, ಪೊಲೀಸರ ತನಿಖೆಯಿಂದ ಹಲವು ವಿಚಾರಗಳು ಬೆಳಕಿಗೆ ಬಂದಿವೆ.
India News Live 26th December:ಲ್ಯಾಪ್ಟಾಪ್ ಬ್ಯಾಟರಿ ಸ್ಫೋಟಗೊಂಡು 20 ವರ್ಷದ ಯುವಕ ಸಾವು, ಸಹೋದರನಿಗೆ ಗಾಯ
ಲ್ಯಾಪ್ಟಾಪ್ ಬ್ಯಾಟರಿ ಸ್ಫೋಟಗೊಂಡು 20 ವರ್ಷದ ಯುವಕ ಸಾವು, ಸಹೋದರನಿಗೆ ಗಾಯ, ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ. ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟರೆ ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
India News Live 26th December:ಇಸ್ಲಾಮಿಕ್ ಮೂಲಭೂತವಾದಿಗಳ ನೆಚ್ಚಿನ ಬಾಂಗ್ಲಾ ಸುಂದರಿ ಬೀದಿಪಾಲು - ಹಿಂದೂಗಳೇ ಕಾಪಾಡಿ ಅಂತಿರೋದ್ಯಾಕೆ?
ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಭಾರತದ ವಿರುದ್ಧ ವಿಷ ಕಾರುತ್ತಿದ್ದ ಹಿಂದೂ ಯುವತಿ ಪ್ರಾಪ್ತಿ ತಪೋಶಿ ಈಗ ಬೀದಿಗೆ ಬಂದಿದ್ದಾಳೆ. ಹಿಂದೂಗಳೇ ಕಾಪಾಡಿ ಎಂದು ಗೋಗರೆಯುವ ಸ್ಥಿತಿ ಅವಳಿಗೆ ಆಗಿದೆ. ಅಷ್ಟಕ್ಕೂ ಆಗಿದ್ದೇನು? ಯಾರೀ ಯುವತಿ?
India News Live 26th December:ಸೆರೆಬ್ರಲ್ ಪಾಲ್ಸಿ ನರದ ಸಮಸ್ಯೆ ಇದ್ದರೂ ಎಲ್ಲವನ್ನು ಮೆಟ್ಟಿನಿಂತು ಮೊದಲ ಪ್ರಯತ್ನದಲ್ಲೇ UPSC ಪಾಸಾದ ಮನ್ವೇಂದ್ರ!
ಸೆರೆಬ್ರಲ್ ಪಾಲ್ಸಿ ಎಂಬ ನರವೈಜ್ಞಾನಿಕ ಕಾಯಿಲೆಯಿಂದ ಬಳಲುತ್ತಿದ್ದರೂ, 24 ವರ್ಷದ ಐಐಟಿ ಪದವೀಧರ ಮನ್ವೇಂದ್ರ ಸಿಂಗ್ ತಮ್ಮ ಮೊದಲ ಪ್ರಯತ್ನದಲ್ಲೇ UPSC ಇಂಜಿನಿಯರಿಂಗ್ ಸೇವಾ ಪರೀಕ್ಷೆಯಲ್ಲಿ 112ನೇ ರ್ಯಾಂಕ್ ಪಡೆದಿದ್ದಾರೆ. ಬಾಲ್ಯದಿಂದಲೂ ದೈಹಿಕ ಸವಾಲುಗಳು ಅವರ ಅಚಲ ಇಚ್ಛಾಶಕ್ತಿ ಸಾಧನೆಗೆ ಕಾರಣವಾಯಿತು.
India News Live 26th December:IPL 2026 ಟೂರ್ನಿಗೂ ಮೊದಲೇ ಅರೆಸ್ಟ್ ಆಗ್ತಾರಾ ಆರ್ಸಿಬಿ ವೇಗಿ ಯಶ್ ದಯಾಳ್?
ಬೆಂಗಳೂರು: 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಆರ್ಸಿಬಿ ಪಾಳಯದಲ್ಲಿ ತಳಮಳ ಶುರುವಾಗಿದೆ. ಆರ್ಸಿಬಿ ವೇಗಿ ಯಶ್ ದಯಾಳ್ ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಆಗುವ ಭೀತಿಗೆ ಸಿಲುಕಿದ್ದಾರೆ.