11:01 PM (IST) Jul 07

India News Live 7th JulyPM Modi Gifts - ವಿಶ್ವ ನಾಯಕರಿಗೆ ಪ್ರಧಾನಿ ಮೋದಿ ನೀಡಿರುವ ವಿಶೇಷ ಉಡುಗೊರೆಗಳು

PM Narendra Modi Gifts: ವಿದೇಶ ಪ್ರವಾಸದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಿಗೆ ನೀಡಿರುವ ವಿಶೇಷ ಕಾಣಿಕೆಗಳು ಯಾವವು ಎಂದು ನೋಡೋಣ ಬನ್ನಿ.

Read Full Story
07:47 PM (IST) Jul 07

India News Live 7th Julyಬಾಯ್‌ ಫ್ರೆಂಡ್‌ ಜೊತೆ ಕಾಣಿಸಿಕೊಂಡ ಶ್ರದ್ಧಾ ಕಪೂರ್‌, ನಟಿ ರವೀನಾ ಟಂಡನ್‌ ಆಕ್ರೋಶ

ವಿಮಾನ ಸಿಬ್ಬಂದಿಯಿಂದ ಶ್ರದ್ಧಾ ಕಪೂರ್ ಅವರ ವೈಯಕ್ತಿಕ ವಿಡಿಯೋ ರಹಸ್ಯವಾಗಿ ಚಿತ್ರೀಕರಿಸಿದ ಘಟನೆಗೆ ರವೀನಾ ಟಂಡನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ವೈಯಕ್ತಿಕ ಗೌಪ್ಯತೆಯನ್ನು ಗೌರವಿಸುವಂತೆ ಅವರು ಮನವಿ ಮಾಡಿದ್ದಾರೆ.

Read Full Story
06:38 PM (IST) Jul 07

India News Live 7th Julyಅತ್ತೆ ಮೇಲೆ ಸೊಸೆಯ ಹಲ್ಲೆ - ಪೊಲೀಸ್ ಪುತ್ರಿ ಎಂದು ಕೇಸ್ ಹಾಕಲು ನಿರಾಕರಣೆ - ವೀಡಿಯೋ ವೈರಲ್ ನಂತರ ಕೇಸ್

ಗಾಜಿಯಾಬಾದ್‌ನಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪುತ್ರಿಯಾಗಿರುವ ಸೊಸೆಯೊಬ್ಬಳು ಅತ್ತೆಯ ಮೇಲೆ ಹಲ್ಲೆ ನಡೆಸಿ ಎಳೆದಾಡಿದ ಘಟನೆ ವರದಿಯಾಗಿದೆ. 

Read Full Story
05:30 PM (IST) Jul 07

India News Live 7th Julyರೈಲು ಕೋಚ್‌ನಲ್ಲಿ ಸಾಮೂಹಿಕ ಅತ್ಯಾಚಾ*ರ ಮಾಡಿ, ಹಳಿಯಲ್ಲಿ ಬೀಸಾಡಿ ಹೋದ ಕಾಮುಕರು!

ಗಂಡನ ಜೊತೆ ಜಗಳವಾಡಿ ಮನೆ ಬಿಟ್ಟು ಬಂದ ಮಹಿಳೆಯ ಮೇಲೆ ರೈಲ್ವೆ ನಿಲ್ದಾಣದಲ್ಲಿ ಮೂವರು ವ್ಯಕ್ತಿಗಳು ಅತ್ಯಾಚಾ*ರ ಎಸಗಿ, ರೈಲು ಹಳಿ ಮೇಲೆ ಬಿಟ್ಟು ಹೋಗಿದ್ದಾರೆ. ರೈಲು ಡಿಕ್ಕಿ ಹೊಡೆದು ಮಹಿಳೆಯ ಕಾಲು ತುಂಡಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Read Full Story
04:44 PM (IST) Jul 07

India News Live 7th July6 ವರ್ಷದ ಬಾಲಕಿಯೊಂದಿಗೆ 45 ವರ್ಷದ ವ್ಯಕ್ತಿಯ ಮದುವೆ; 9 ವರ್ಷವಾಗಲಿ ಬಿಡಿ ಎಂದ ತಾಲಿಬಾನ್ ಪಡೆ!

6 ವರ್ಷದ ಬಾಲಕಿಯನ್ನು 45 ವರ್ಷದ ವ್ಯಕ್ತಿಯೊಬ್ಬ ಮದುವೆಯಾಗಲು ಮುಂದಾದ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ತಾಲಿಬಾನ್ ಪಡೆ ಈ ವಿವಾಹವನ್ನು ತಡೆದು, ಬಾಲಕಿಗೆ 9 ವರ್ಷ ತುಂಬುವವರೆಗೂ ಕಾಯುವಂತೆ ಸೂಚಿಸಿದೆ. ಬಡತನದಿಂದಾಗಿ ಕುಟುಂಬವು ಬಾಲಕಿ ಮಾರಾಟ ಮಾಡಿದ್ದು, ಈ ವ್ಯಕ್ತಿಗೆ ಇಬ್ಬರು ಪತ್ನಿಯರಿದ್ದಾರೆ.

Read Full Story
03:28 PM (IST) Jul 07

India News Live 7th Julyನನ್ನ ಆಸ್ತಿ 41 ಕೋಟಿ ಅನ್ನೋದೆಲ್ಲಾ ಸುಳ್ಳು ಎಂದ ರೆಬಲ್‌ ಕಿಡ್‌ ಅಪೂರ್ವ ಮುಖೀಜಾ

ಇನ್ಫ್ಲುಯೆನ್ಸರ್ ಅಪೂರ್ವ ಮುಖೀಜಾ 2.5 ಲಕ್ಷ ದೈನಂದಿನ ಆದಾಯ ಮತ್ತು 41 ಕೋಟಿ ರೂ. ಒಟ್ಟು ಆಸ್ತಿಯ ವದಂತಿಗಳನ್ನು ತಳ್ಳಿಹಾಕಿದ್ದಾರೆ. ಹಳೆಯ ಸಂದರ್ಶನವೊಂದರಲ್ಲಿ ತಮ್ಮ ನಿಜವಾದ ಆದಾಯದ ಬಗ್ಗೆ ಮಾತನಾಡಿದ್ದಾರೆ.
Read Full Story
01:05 PM (IST) Jul 07

India News Live 7th JulyKerala Tourism ರಾಯಭಾರಿಯಾಗಿದ್ದ ಪಾಕ್ ಸ್ಪೈ ಜ್ಯೋತಿ ಮಲ್ಹೋತ್ರಾ? - RTIನಿಂದ ಮಾಹಿತಿ ಬಹಿರಂಗ

ಪಾಕಿಸ್ತಾನ ಪರ ಗೂಢಚರ್ಯೆ ಆರೋಪದಲ್ಲಿ ಬಂಧಿತಳಾಗಿರುವ ಟ್ರಾವೆಲ್ ವ್ಲಾಗರ್ ಜ್ಯೋತಿ ಮಲ್ಹೋತ್ರಾಗೆ ಕೇರಳ ಪ್ರವಾಸೋದ್ಯಮ ಇಲಾಖೆ ಆತಿಥ್ಯ ನೀಡಿದ್ದ ವಿಚಾರ ಈಗ ಬಹಿರಂಗವಾಗಿದೆ.

Read Full Story
11:09 AM (IST) Jul 07

India News Live 7th Julyದಂತಕಥೆಯ ಮುನ್ನುಡಿ ಕಾಂತಾರ... ಪರಶುರಾಮನ ಅವತಾರದಲ್ಲಿ ರಿಷಬ್ ಶೆಟ್ಟಿ ಆರ್ಭಟ

ಕಾಂತಾರ ಚಿತ್ರತಂಡ ಕೂಡಾ ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದು, ಸಿನಿಮಾದ ಹೊಸ ಪೋಸ್ಟರನ್ನು ರಿಲೀಸ್ ಮಾಡಿದೆ. ಜೊತೆಗೆ ಚಿತ್ರದ ಬಗ್ಗೆ ದೊಡ್ಡ ಅಪ್​​ಡೇಟ್ ಅನ್ನು ನೀಡಿದೆ.

Read Full Story
10:23 AM (IST) Jul 07

India News Live 7th Julyಬಾಹ್ಯಾಕಾಶದಿಂದ ಭೂಮಿಯ ಚಿತ್ರ ತೆಗೆದ ಗಗನಯಾತ್ರಿ ಶುಭಾಂಶು ಶುಕ್ಲಾ!

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭೂಮಿಯ ಚಿತ್ರಗಳನ್ನು ಸೆರೆಹಿಡಿದಿದ್ದಾರೆ. ಈ ಚಿತ್ರಗಳನ್ನು ಆಕ್ಸಿಯಮ್ ಸ್ಪೇಸ್ ಬಿಡುಗಡೆ ಮಾಡಿದೆ. ಶುಕ್ಲಾ ಮತ್ತು ಇತರ ಗಗನಯಾತ್ರಿಗಳು 14 ದಿನಗಳ ಕಾರ್ಯಾಚರಣೆಯಲ್ಲಿದ್ದಾರೆ.
Read Full Story
07:45 AM (IST) Jul 07

India News Live 7th Julyದಿನಕ್ಕೆ 10 ತಾಸು ಕೆಲಸ ಅವಧಿಗೆ ತೆಲಂಗಾಣ ಸರ್ಕಾರದ ಸಮ್ಮತಿ

ವಾಣಿಜ್ಯ ಸಂಸ್ಥೆಗಳಲ್ಲಿ ಉದ್ಯೋಗಿಗಳ ಕೆಲಸದ ಅವಧಿಯನ್ನು 10 ಗಂಟೆಗೆ ನಿಗದಿ ಪಡಿಸುವ ಕಾನೂನಿಗೆ ತೆಲಂಗಾಣ ಸರ್ಕಾರ ಅನುಮೋದನೆ ನೀಡಿದೆ.

Read Full Story
07:45 AM (IST) Jul 07

India News Live 7th Julyಟ್ರಂಪ್‌ಗೆ ಸಡ್ಡು : ಅಮೆರಿಕದಲ್ಲಿ ಮಸ್ಕ್‌ ಹೊಸ ಪಕ್ಷ ಘೋಷಣೆ

ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಂದ ದೂರವಾಗಿದ್ದ ವಿಶ್ವದ ನಂ.1 ಶ್ರೀಮಂತ ಎಲಾನ್‌ ಮಸ್ಕ್ ‘ದ ಅಮೆರಿಕನ್‌ ಪಾರ್ಟಿ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದಾರೆ.

Read Full Story
07:44 AM (IST) Jul 07

India News Live 7th Julyಭಾರತ - ಪಾಕ್‌ ಸಂಘರ್ಷದ ಬಳಿಕ ರಫೇಲ್‌ ಬಗ್ಗೆ ಚೀನಾ ಸುಳ್ಳು ಸುದ್ದಿ!

ಭಾರತ-ಪಾಕ್‌ ಸಂಘರ್ಷದ ಬಳಿಕ ರಫೇಲ್‌ ಯುದ್ಧ ವಿಮಾನಗಳ ಕುರಿತು ತಪ್ಪು ಅಭಿಪ್ರಾಯ ಹರಡುವ ಕೆಲಸಕ್ಕೆ ಚೀನಾ ಕೈಹಾಕಿದೆ. ಇದಕ್ಕಾಗಿ ತನ್ನ ರಾಯಭಾರ ಕಚೇರಿಗಳನ್ನೇ ಬಳಸಿಕೊಳ್ಳುತ್ತಿದೆ.

Read Full Story
07:44 AM (IST) Jul 07

India News Live 7th Julyಧರ್ಮಗ್ರಂಥಕ್ಕೆ ಅಪಚಾರ ಮಾಡಿದರೆ ಪಂಜಾಬ್‌ನಲ್ಲಿ ಗಲ್ಲು ಶಿಕ್ಷೆ?

ಸಿಖ್ಖರ ಪವಿತ್ರ ಗ್ರಂಥ ಗುರುಗ್ರಂಥ ಸಾಹಿಬ್‌ಗೆ ಅಪಚಾರವೆಸಗುವ ಘಟನೆಗಳು ಪದೇ ಪದೇ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಪಂಜಾಬ್ ಸರ್ಕಾರವು ಧರ್ಮಗ್ರಂಥಗಳಿಗೆ ಹಾನಿ ಮಾಡುವ ಅಪರಾಧಿಗಳಿಗೆ ಜೀವಾವಧಿ ಅಥವಾ ಗಲ್ಲುಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ.

Read Full Story
07:44 AM (IST) Jul 07

India News Live 7th Julyಭಾರತವಿಲ್ಲದ ಜಾಗತಿಕ ಸಂಘಟನೆಗಳು ಜಗತ್ತು ನೆಟ್ವರ್ಕ್‌ ಇಲ್ಲದ ಫೋನ್‌! : ಪ್ರಧಾನಿ ಮೋದಿ

ವಿಶ್ವಸಂಸ್ಥೆ ನೀತಿ ನಿರ್ಧಾರ ಕೈಗೊಳ್ಳುವ ಜಾಗತಿಕ ಸಂಸ್ಥೆಗಳಲ್ಲಿ ಗ್ಲೋಬಲ್‌ ಸೌತ್‌ ಎಂದು ಕರೆಯಲಾಗುವ ದೇಶಗಳಿಗೆ ಸ್ಥಾನ ಕಲ್ಪಿಸುವ ಕುರಿತು ಬಲವಾದ ವಾದ ಮಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನಾವಿಲ್ಲದ ಜಾಗತಿಕ ಸಂಘಟನೆಗಳು ನೆಟ್ವರ್ಕ್‌ ಇಲ್ಲದ ಸಿಮ್‌ ಇರುವ ಮೊಬೈಲ್‌ನಂತೆ ಎಂದು ವ್ಯಂಗ್ಯ

Read Full Story
07:43 AM (IST) Jul 07

India News Live 7th Julyನಿವೃತ್ತ ಸಿಜೆಐ ಚಂದ್ರಚೂಡ್‌ ಮನೆ ಖಾಲಿ ಮಾಡಿಸಿ : ಕೇಂದ್ರಕ್ಕೆ ಪತ್ರ

ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿ ಬಳಿಕವೂ 8 ತಿಂಗಳಿಂದ ತಮಗೆ ಈ ಹಿಂದೆ ನೀಡಿದ್ದ ಅಧಿಕೃತ ಸರ್ಕಾರಿ ವಾಸದಲ್ಲಿ ವಾಸವಿದ್ದು ಅವರನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‌ನ ಆಡಳಿತ ವಿಭಾಗ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

Read Full Story
07:43 AM (IST) Jul 07

India News Live 7th Julyಹೈದ್ರಾಬಾದ್‌ ಮೊಹರಂ ಮೆರವಣಿಗೆ ಆಚರಣೆಗೆ ತುಮಕೂರಿನ ಆನೆ ಲಕ್ಷ್ಮೀ

ನಿಜಾಮರ ಕಾಲದಿಂದ ಹೈದರಾಬಾದ್‌ನಲ್ಲಿ ನಡೆದು ಬಂದಿರುವ ಪ್ರಸಿದ್ಧ ಮೊಹರಂ ಮೆರವಣಿಗೆಯ ಆಲಂ ಹೊರಲು ಈ ಬಾರಿ ತುಮಕೂರಿನ ಕರಿಬಸವೇಶ್ವರ ಮಠದ ಲಕ್ಷ್ಮೀ ಹೆಸರಿನ ಆನೆಯನ್ನು ಬಳಸಲಾಗಿದೆ.

Read Full Story
07:43 AM (IST) Jul 07

India News Live 7th Julyಎಫ್‌-35 ದುರಸ್ತಿಗೆ ಬ್ರಿಟನ್‌ನ 24 ತಜ್ಞರು ಕೇರಳಕ್ಕೆ ಆಗಮನ

ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜೂ.14ರಂದು ತುರ್ತು ಲ್ಯಾಂಡ್‌ ಆಗಿರುವ ಬ್ರಿಟನ್‌ ನೌಕಾಪಡೆಗೆ ಸೇರಿದ ಅತ್ಯಾಧುನಿಕ ಎಫ್‌-35ಬಿ ಯುದ್ಧವಿಮಾನದ ಪರಿಶೀಲನೆಗೆ ಇದೀಗ ಬ್ರಿಟನ್‌ ಇದೀಗ ವಿಶೇಷ ತಜ್ಞರನ್ನು ಕಳುಹಿಸಿಕೊಟ್ಟಿದೆ.

Read Full Story
07:42 AM (IST) Jul 07

India News Live 7th Julyಬಾಹ್ಯಾಕಾಶದಲ್ಲಿ ಶುಭಾಂಶುರ ಬೆಂಗಳೂರಿನ ನೀರು ಕರಡಿ ಪ್ರಯೋಗ ಯಶಸ್ವಿ

ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ನೀರುಕರಡಿ (ವಾಯೇಜರ್‌ ಟಾರ್ಡಿಗ್ರೇಡ್) ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು.

Read Full Story
07:42 AM (IST) Jul 07

India News Live 7th Julyಬೆಂಗಳೂರಿಗೆ ಹೈಪರ್‌ಲೂಪ್‌, ಪಾಡ್‌ ಟ್ಯಾಕ್ಸಿ ಶೀಘ್ರ: ಗಡ್ಕರಿ

ಬೆಂಗಳೂರು, ದೆಹಲಿಯಲ್ಲಿ ಹೈಪರ್‌ಲೂಪ್‌, ಮೆಟ್ರಿನೋ ಪಾಡ್‌ ಟ್ಯಾಕ್ಸಿ, ಮತ್ತು ಪಿಲ್ಲರ್‌ ಆಧಾರಿತ ಸಮೂಹ ಸಾರಿಗೆ ವ್ಯವಸ್ಥೆ ಹಾಗೂ 135 ಸೀಟುಗಳ ವಿದ್ಯುತ್‌ಚಾಲಿತ ತ್ವರಿತ ಸಮೂಹ ಸಾರಿಗೆ ಬಸ್‌ ಪರಿಚಯಿಸಲು ಉದ್ದೇಶಿಸಿರುವುದಾಗಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

Read Full Story