Asianet Suvarna News Asianet Suvarna News

ತನ್ನ 10 ಕಾರ್ಮಿಕರನ್ನು ವಿಮಾನದಲ್ಲಿ ಬಿಹಾರಕ್ಕೆ ಕಳುಹಿಸಿಕೊಟ್ಟ ರೈತ!

ತನ್ನ 10 ಕಾರ್ಮಿಕರನ್ನು ವಿಮಾನದಲ್ಲಿ ಬಿಹಾರಕ್ಕೆ ಕಳುಹಿಸಿಕೊಟ್ಟ ರೈತ!| ಮನೆಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದೇ ಕಾರ್ಮಿಕರು ಪರದಾಡುತ್ತಿರುವ ಸಂದರ್ಭದಲ್ಲಿ ರೈತನ ಹೃದಯವಂತಿಕರ| ವಿಮಾನ ಏರುವ ಊಹೆಯನ್ನೂ ಮಾಡದ ಕಾರ್ಮಿಕರ ಕಣ್ಣಂಚಲ್ಲಿ ನೀರು

Never thought of sitting in a plane Migrants take off for Patna after Delhi farmer books tickets for them
Author
Bangalore, First Published May 28, 2020, 3:59 PM IST

ನವದೆಹಲಿ(ಮೇ.28): ಲಾಕ್‌ಡೌನ್‌ನಿಂದಾಗಿ ಬೃಹತ್‌ ಕಂಪನಿಗಳು ನೌಕರರ ವೇತನ ಕಡಿತಗೊಳಿಸುತ್ತಿದ್ದರೆ, ದೆಹಲಿಯ ರೈತನೊಬ್ಬ ತನ್ನಲ್ಲಿ ಕೆಲಸ ಮಾಡುತ್ತಿದ್ದ 10 ಮಂದಿ ಕಾರ್ಮಿಕರನ್ನು ವಿಮಾನದ ಮೂಲಕ ತವರಿಗೆ ಕಳುಹಿಸಿ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಲಾಕ್‌ಡೌನ್ ವೇಳೆ ನೌಕರರಿಗೆ ವೇತನ ಪಾವತಿಸದವರ ವಿರುದ್ಧ ಕ್ರಮ ಇಲ್ಲ; ಸುಪ್ರೀಂ ಕೋರ್ಟ್!

ಎರಡು ತಿಂಗಳಿನಿಂದ ತವರಿಗೆ ಮರಳಲಾಗದೇ ಪರಿತಪಿಸುತ್ತಿದ್ದ ಬಿಹಾರದ ಕಾರ್ಮಿಕರ ಆಸೆ ಇದೀಗ ಈಡೆರಿದೆ. ಏಪ್ರಿಲ್‌ನಲ್ಲೇ ತಮ್ಮ ಊರು ಸೇರಬೇಕೆಂದು ಬಯಸಿದ್ದ ಕಾರ್ಮಿಕರು ಇದೀಗ ಗುರುವಾರ ಬೆಳಗ್ಗೆ 6 ಗಂಟೆಗೆ ವಿಮಾನದ ಮೂಲಕ ಊರು ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಾರ್ಮಿಕ ಲಖೀಂದರ್‌ ರಾಮ್‌, ನಾವು ಕನಸು ಮನಸಿನಲ್ಲೂ ವಿಮಾನ ಪ್ರಯಾಣ ಬೆಳೆಸುತ್ತೇವೆ ಎಂದುಕೊಂಡಿರಲಿಲ್ಲ. ಖುಷಿಯನ್ನು ಹೇಳಿಕೊಳ್ಳಲು ಶಬ್ದಗಳಿಲ್ಲ ಎಂದಿದ್ದಾರೆ.

ತಮ್ಮೂರಿಗೆ ಮರಳಲು ಸರಿಯಾದ ಸಾರಿಗೆ ವ್ಯವಸ್ಥೆ, ಕೈಯ್ಯಲ್ಲಿ ಹಣವಿಲ್ಲದೇ ಕಾರ್ಮಿಕರು ಪರದಾಡುತ್ತಿರುವ ವೇಳೆ ರೈತ ಮಾಡಿದ ಈ ಕಾರ್ಯವನ್ನು ಎಲ್ಲರೂ ಶ್ಲಾಘಿಸಿದ್ದಾರೆ.

Follow Us:
Download App:
  • android
  • ios