ಮುಖ್ಯಮಂತ್ರಿಯಾದ ಎರಡೇ ದಿನಕ್ಕೆ ಕೊರೋನಾ ಆಸ್ಪತ್ರೆ ದಾಖಲಾದ ಪುದುಚೇರಿ ಸಿಎಂ   

ಪುದುಚೇರಿ(ಮೇ.09): ಕೊರೋನಾ ವೈರಸ್ ದೇಶದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದೀಗ ಪುದುಚೇರಿ ಮುಖ್ಯಮಂತ್ರಿಯಾದ ಎರಡೇ ದಿನದಲ್ಲಿ ಎನ್ ರಂಗಸ್ವಾಮಿಗೆ ಕೊರೋನಾ ದೃಢಪಟ್ಟಿದೆ. ತಕ್ಷಣವೇ ರಂಗಸ್ವಾಮಿಯವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Add Asianetnews Kannada as a Preferred SourcegooglePreferred

ಕಲಬುರಗಿ: ಶಾಸಕ ಮತ್ತಿಮುಡಗೆ 2ನೇ ಬಾರಿ ಕೊರೋನಾ ದೃಢ

ಎರಡು ದಿನದ ಹಿಂದೆ ರಂಗಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಕೊರೋನಾ ಪರೀಕ್ಷೆ ಮಾಡಿಸಿದ್ದ ರಂಗಸ್ವಾಮಿ ವರದಿ ನೆಗೆಟೀವ್ ಆಗಿತ್ತು. ಆದರೆ ಮುಖ್ಯಮಂತ್ರಿ ಆದ ಎರಡೇ ದಿನಕ್ಕೆ ಇದೀಗ ಕೊರೋನಾ ವೈರಸ್ ದೃಢಪಟ್ಟಿದೆ.

71 ವರ್ಷದ ಎನ್ ರಂಗಸ್ವಾಮಿ ಮೇ.07ರಂದು ಪುದುಚೇರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪಕ್ಷದ ರಂಗಸ್ವಾಮಿಗೆ ರಾಜ್ಯಪಾಲ ತಮಿಳಿಸಾಯಿ ಸೌಂದರರಾಜನ್ ಪ್ರತಿಜ್ಞಾವಿಧಿ ಬೋಧಿಸಿದ್ದರು.

ಕೊರೋನಾ ರೋಗಲಕ್ಷಣ ಕಾಣಿಸಿಕೊಂಡ ಕಾರಣ ರಂಗಸ್ವಾಮಿ ಮತ್ತೆ ಕೊರೋನಾ ಪರೀಕ್ಷೆ ಮಾಡಿಸಿದ್ದಾರೆ. ಇದೀಗ ಕೊರೋನಾ ದೃಢಪಟ್ಟಿರುವುದರಿಂದ ಮುಂಜಾಗ್ರತ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ರಂಗಸ್ವಾಮಿ ಕೊರೋನಾ ರೋಗ ಲಕ್ಷಣ ಹೊರತು ಪಡಿಸಿದರೆ ಆರೋಗ್ಯವಾಗಿದ್ದಾರೆ.