ನಿರ್ಭಯಾ ಅಪರಾಧಿಗಳಿಗೆ ಸಿಕ್ತು ತಾತ್ಕಾಲಿಕ ಜೀವದಾನ| ನಿರ್ಭಯಾ ಅಪರಾಧಿಗಳಿಗೆ ಜ.22ರಂದು ಗಲ್ಲು ಜಾರಿ ಇಲ್ಲ| ದೆಹಲಿ ಹೈಕೋರ್ಟ್ಗೆ ದೆಹಲಿ ಸರ್ಕಾರದಿಂದ ಮಾಹಿತಿ
ನವದೆಹಲಿ[ಜ.15]: ನಿರ್ಭಯಾ ಅತ್ಯಾಚಾರ ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಆರ್ಜಿ ವಿಚಾರಣೆ ರದ್ದುಗೊಳಿಸಿದ ಬೆನ್ನಲ್ಲೇ, ನಾಲ್ವರೂ ಜನವರಿ 22ರಂದೇ ಗಲ್ಲಿಗೇರುವುದು ಖಚಿತವಾಗಿತ್ತು. ಆದರೀಗ ಸರ್ಕಾರದ ಪರ ವಕೀಲರು ದೋಷಿಗಳನ್ನು ಅಂದು ಗಲ್ಲಿಗೇರಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಗೆ ತಿಳಿಸಿದ್ದಾರೆ.
"
Advocate Rahul Mehra appearing for Tihar Jail authorities says, 'It can only take place 14 days after the mercy plea is rejected as we are bound by the rule which says that a notice of 14 days must be provided to the convicts after the rejection of mercy plea' https://t.co/FeTsGjJkoO
— ANI (@ANI) January 15, 2020
ಹೌದು ಡೆತ್ ವಾರಂಟ್ ವಿರುದ್ಧ ದೋಷಿ ಮುಕೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ನಲ್ಲಿ ವಾದ ಮಂಡಿಸಿದ ದೋಷಿ ಪರ ವಕೀಲ 'ತನ್ನ ಕಕ್ಷಿದಾರ ಮುಕೇಶ್ ಕ್ಯುರೇಟಿವ್ ಅರ್ಜಿ ವಜಾಗೊಂಡ ಬೆನ್ನಲ್ಲೇ, ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ಒಂದು ವೇಳೆ ಈ ಕ್ಷಮಾದಾನ ಅರ್ಜಿ ತಿರಸ್ಕರಿಸಿದರೂ ದೋಷಿಗಳಿಗೆ 14 ದಿನಗಳ ಸಮಯಾವಕಾಶ ಇರುತ್ತದೆ' ಎಂದು ವಾದಿಸಿದ್ದಾರೆ. ಈ ವೇಳೆ ಸರ್ಕಾರಿ ವಕೀಲರು ಕೂಡಾ ಇದು ಸರಿ, ನಿಯಮಗಳನ್ವಯ ದೋಷಿಗಳಿಗೆ ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡರೂ 14 ದಿನಗಳ ಸಮಯಾವಕಾಶ ಇರುತ್ತದೆ. ಹೀಗಾಗಿ ಏನೇ ಆದರೂ ಜನವರಿ 22 ರಂದು ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ನಿರ್ಭಯಾ ರೇಪಿಸ್ಟ್ ನೇಣಿಗೇರಿಸುವ ಮೇರಠ್ನ ಪವನ್ ಸಂಭಾವನೆ?
ನಿರ್ಭಯಾ ಅತ್ಯಾಚಾರಿಗಳು ’ದೋಷಿಗಳಿಗೂ ತಮ್ಮ ಪರ ವಾದಿಸುವ ಹಕ್ಕು ಇದೆ’ ಎಂಬುವುದನ್ನೇ ಬಳಸಿಕೊಂಡು ಕಾನೂನನ್ನು ದುರುಪಯೋಗಪಡಿಸಕೊಳ್ಳುತ್ತಿದ್ದಾರೆ. ಈ ಮೂಲಕ ತಮಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಮುಂದೂಡುವ ಎಲ್ಲಾ ಯತ್ನಗಳನ್ನು ನಡೆಸುತ್ತಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 15, 2020, 6:17 PM IST