ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಪ್ರಕ್ರಿಯೆ ವೇಳೆ ಜನರು ಯಾವುದೇ ದಾಖಲೆಗಳನ್ನು ನೀಡಬೇಕಿಲ್ಲ. ಯಾರನ್ನೂ ‘ಸಂದೇಹಾಸ್ಪದ ವ್ಯಕ್ತಿಗಳು’ ಎಂದು ಗುರುತಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ (ಮಾ. 13): ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಪ್ರಕ್ರಿಯೆ ವೇಳೆ ಜನರು ಯಾವುದೇ ದಾಖಲೆಗಳನ್ನು ನೀಡಬೇಕಿಲ್ಲ. ಯಾರನ್ನೂ ‘ಸಂದೇಹಾಸ್ಪದ ವ್ಯಕ್ತಿಗಳು’ ಎಂದು ಗುರುತಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಕೊರೋನಾ ವೈರಸ್ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ; ಪ್ರಧಾನಿ ಮೋದಿ ಮನವಿ!

ರಾಜ್ಯಸಭೆಯಲ್ಲಿ ದಿಲ್ಲಿ ಹಿಂಸಾಚಾರದ ಚರ್ಚೆಗೆ ಉತ್ತರಿಸಿ ಗುರುವಾರ ಮಾತನಾಡಿದ ಅವರು, ‘ಎನ್‌ಪಿಆರ್‌ ಗಣತಿ ವೇಳೆ ಯಾರೂ ದಾಖಲೆ ನೀಡಬೇಕಿಲ್ಲ. ಗಣತಿದಾರರು ಬಂದಾಗ ತಮಗೆ ಇಷ್ಟವಾದ ಮಾಹಿತಿ ಒದಗಿಸಬಹುದು. ರಾಜ್ಯಸಭೆಯಲ್ಲಿ ಇದನ್ನು ನಾನು ಹೇಳುತ್ತಿದ್ದೇನೆ’ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲ ಗಣತಿಯಲ್ಲಿನ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲೇಬೇಕು ಎಂದೇನಿಲ್ಲ ಎಂದು ಅವರು ಪರೋಕ್ಷವಾಗಿ ನುಡಿದರು.

ನರಕದಿಂದಲೂ ಹೊರಗೆಳೀತೇವೆ:

ದಿಲ್ಲಿ ಗಲಾಟೆಕೋರರು ನರಕದ ಆಳದಲ್ಲಿ ಅವಿತಿದ್ದರೂ ಸರಿ. ಅವರನ್ನು ಹೊರತೆಗೆಯಲಾಗುವುದು. ಗಲಭೆಕೋರರಲ್ಲಿ ಕೆಲವರಿಗೆ ಐಸಿಸ್‌ ಉಗ್ರರ ನಂಟು ಪತ್ತೆಯಾಗಿದೆ ಎಂದು ಶಾ ಹೇಳಿದರು. ದುಷ್ಕರ್ಮಿಗಳ ಪತ್ತೆಗೆ ಡಿಎಲ್‌ ಹಾಗೂ ವೋಟರ್‌ ಐಡಿ ಬಳಸಲಾಗುತ್ತಿದೆ. ಆದರೆ ಆಧಾರ್‌ ಬಳಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.