ಕೇಂದ್ರದ ಕೃಷಿ ಕಾನೂನು ವಿರುದ್ಧ ರೈತರ ಪ್ರತಿಭಟನೆ| ಕೇಂದ್ರಕ್ಕೆ ವಾರ್ನಿಂಗ್ ಕೊಟ್ಟ ರೈತ ಮುಖಂಡ ಟಿಕಾಯತ್| 'ಕೃಷಿ ಮಸೂದೆ ಹಿಂಪಡೆಯದಿದ್ದರೆ ಧಾನ್ಯ ಖಜಾನೆಯಲ್ಲಿಡಬೇಕಾದ ವಸ್ತುವಾಗುತ್ತೆ, ಎಚ್ಚರ'

ನವದೆಹಲಿ(ಫೆ.08): ಕೇಂದ್ರದ ಮೂರು ಕೃಷಿ ಕಾನೂನು ವಿರುದ್ಧ ಭಾನುವಾರ ಹರ್ಯಾಣದ ಭಿವಾನಿ ಜಿಲ್ಲೆಯ ಕಿತ್ಲಾನಾದಲ್ಲಿ ಆಯೋಜಿಸಲಾಗಿದ್ದ ರೈತ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರೈತ ನಾಯಕ ರಾಕೇಶ್ ಟಿಕಾಯತ್ ಕೃಷಿ ಮಸೂದೆ ಹಿಂಪಡೆಯದಿದ್ದರೆ, ಧಾನ್ಯಗಳನ್ನು ಖಜಾನೆಯಲ್ಲಿ ಬಚ್ಚಿಡಬೇಕಾದ ದಿನಗಳು ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಂಯುಕ್ತ ರೈತ ಮೋರ್ಚಾ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ರೈತರ ಬಳಿ ಒಗ್ಗಟ್ಟಿನಿಂದಿರಲು ಟಿಕಾಯತ್ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಮತ್ತಷ್ಟು ಎಚ್ಚರದಿಂದಿರುವಂತೆ ಸೂಚಿಸಿರುವ ಟಿಕಾಯತ್ ಬಿಜೆಪಿಯ ಕೆಲ ನಾಯಕರು ಈಗಾಗಲೇ ಪ್ರತಿಭಟನಾನಿರತ ರೈತರನ್ನು ಸಿಖ್ಖರು ಹಾಗೂ ಸಿಖ್‌ ಅಲ್ಲದವರು ಎಂದು ಬೇರ್ಪಡಿಸುವ ಯತ್ನ ಆರಂಭಿಸಿದ್ದಾರೆ ಎಂದಿದ್ದಾರೆ.

ಕೇಂದ್ರದ ಕಪ್ಪು ಕಾನೂನಿಂದ ರೈತನ ನಾಶ

ಇವರು ತಮ್ಮ ಉದ್ದೇಶದಲ್ಲಿ ಸಫಲರಾಗಿಲ್ಲ, ಬದಲಾಗಿ ಇದರಿಂದಾಗಿ ಹರ್ಯಾಣ ಹಾಗೂ ಪಂಜಾಬ್‌ನ ರೈತರ ನಡುವಿನ ಒಗ್ಗಟ್ಟು ಮತ್ತಷ್ಟು ಗಟ್ಟಿಯಾಗಿದೆ. ಕೆಂದ್ರದ ಮೂರು ಕಪ್ಪು ಕಾನೂನಿನಿಂದ ರೈತರು ನಾಶವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ಆರೋಪಿಸಿದ್ದಾರೆ.