ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಾರ್ಖಂಡ್‌ ಸರ್ಕಾರ, ರಾಜ್ಯದಲ್ಲಿ ಕೋವಿಡ್‌ ಸುರಕ್ಷತಾ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಲು ನಿರ್ಧರಿಸಿದೆ.

ರಾಂಚಿ(ಜು.24): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುವುದನ್ನು ಗಂಭೀರವಾಗಿ ಪರಿಗಣಿಸಿರುವ ಜಾರ್ಖಂಡ್‌ ಸರ್ಕಾರ, ರಾಜ್ಯದಲ್ಲಿ ಕೋವಿಡ್‌ ಸುರಕ್ಷತಾ ನಿಯಮಗಳನ್ನು ಇನ್ನಷ್ಟುಕಠಿಣಗೊಳಿಸಲು ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅದರನ್ವಯ ಯಾವುದೇ ವ್ಯಕ್ತಿ ಮಾಸ್ಕ್‌ ಧರಿಸದೇ ಹೊರಗೆ ಬಂದರೆ ಅವರಿಗೆ 1 ಲಕ್ಷ ರು. ದಂಡ ವಿಧಿಸಲಾಗುವುದು. ಇನ್ನು ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದರೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಘೋಷಿಸಿದೆ.

50904 ಕೇಸು, 1199 ಸಾವು: ದೇಶದಲ್ಲಿ ನಿನ್ನೆ ಗರಿಷ್ಠ ಸೋಂಕು, ಸಾವು ದಾಖಲು

ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬುಧವಾರ 439 ಹೊಸ ಸೋಂಕಿತರು ಪತ್ತೆಯಾಗುವುದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,682ಕ್ಕೇರಿದೆ. ಈ ಪೈಕಿ 3048 ಜನರು ಗುಣಮುಖರಾಗಿದ್ದು, 3,570 ಸಕ್ರಿಯ ಪ್ರಕರಣಗಳಿವೆ.