* ಸೋಲಾರ್‌ ಹಗರಣ ಪ್ರಕರಣ* ಲೈಂಗಿಕ ಕಿರುಕುಳ ಕೇಸಲ್ಲಿ ಚಾಂಡಿ, ವೇಣುಗೋಪಾಲ್‌ಗೆ ತನಿಖೆ ಬಿಸಿ* ಚಾಂಡಿ ನೇತೃತ್ವದ ಯುಡಿಎಫ್‌ ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಸೌರಶಕ್ತಿ ಹಗರಣ

ನವದೆಹಲಿ(ಆ.18): ಕೇರಳದ ಬಹುಕೋಟಿ ಸೌರಶಕ್ತಿ (ಸೋಲಾರ್‌) ಹಗರಣದ ಪ್ರಮುಖ ಆರೋಪಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪ ಸಂಬಂಧದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಇದರಿಂದಾಗಿ ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಕೇರಳದ ಮಾಜಿ ಮುಖ್ಯಮಂತ್ರಿ ಊಮ್ಮನ್‌ ಚಾಂಡಿ ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಸೇರಿದಂತೆ ಇನ್ನಿತರ ರಾಜಕೀಯ ನಾಯಕರಿಗೆ ಸಂಕಷ್ಟಎದುರಾಗಿದೆ.

Add Asianetnews Kannada as a Preferred SourcegooglePreferred

ಕೇರಳದಲ್ಲಿ ಊಮ್ಮನ್‌ ಚಾಂಡಿ ನೇತೃತ್ವದ ಯುಡಿಎಫ್‌ ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಸೌರಶಕ್ತಿ ಹಗರಣದ ಪ್ರಮುಖ ರೂವಾರಿ ಮಹಿಳೆಯು 2012ರಲ್ಲಿ ತನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿ ಆಗಿನ ಮುಖ್ಯಮಂತ್ರಿ ಚಾಂಡಿ ಸೇರಿದಂತೆ ಒಟ್ಟು 6 ಮಂದಿ ವಿರುದ್ಧ ಕೇಸ್‌ ದಾಖಲಿಸಿದ್ದರು.

ಈ ಸಂಬಂಧ ಪಿಣರಾಯಿ ವಿಜಯನ್‌ ಸರ್ಕಾರವು ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ತನಿಖೆ ನಡೆಸಿದ್ದ ಈ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೊಂಡಿದೆ.