ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ, ಭಾರತೀಯ ಸೇನೆಯು ಮೇ 6-7 ರ ರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ 9 ಭಯೋತ್ಪಾದಕ ಅಡಗುತಾಣಗಳ ಮೇಲೆ 'Operation Sindoor' ಕಾರ್ಯಾಚರಣೆಯಡಿ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ ದಾಳಿಯು ಜೈಶ್-ಎ-ಮೊಹಮ್ಮದ್‌ನ ಬಹಾವಲ್ಪುರ್ ಪ್ರಧಾನ ಕಚೇರಿ ಮತ್ತು ಲಷ್ಕರ್-ಎ-ತೈಬಾದ ಮುರಿಡ್ಕೆ ಕೇಂದ್ರ ಸೇರಿದಂತೆ ಒಂಬತ್ತು ಪ್ರಮುಖ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿದೆ ಎಂದು ಭಾರತೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ನವದೆಹಲಿ, (ಮೇ.7): ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ, ಭಾರತೀಯ ಸೇನೆಯು ಮೇ 6-7 ರ ರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ 9 ಭಯೋತ್ಪಾದಕ ಅಡಗುತಾಣಗಳ ಮೇಲೆ 'Operation Sindoor' ಕಾರ್ಯಾಚರಣೆಯಡಿ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ ದಾಳಿಯು ಜೈಶ್-ಎ-ಮೊಹಮ್ಮದ್‌ನ ಬಹಾವಲ್ಪುರ್ ಪ್ರಧಾನ ಕಚೇರಿ ಮತ್ತು ಲಷ್ಕರ್-ಎ-ತೈಬಾದ ಮುರಿಡ್ಕೆ ಕೇಂದ್ರ ಸೇರಿದಂತೆ ಒಂಬತ್ತು ಪ್ರಮುಖ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿದೆ ಎಂದು ಭಾರತೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಕ್ಷಣಾ ಸಚಿವಾಲಯದ ಹೇಳಿಕೆಯ ಪ್ರಕಾರ, 'ಈ ಕಾರ್ಯಾಚರಣೆಯು ಭಾರತದ ವಿರುದ್ಧ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ನಿರ್ದೇಶಿಸುವ ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿದೆ' ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 26 ಜನರು, ಒಬ್ಬ ನೇಪಾಳಿ ನಾಗರಿಕ ಸೇರಿದಂತೆ, ಸಾವನ್ನಪ್ಪಿದ್ದರು.

ಇದನ್ನೂ ಓದಿ: ಚೆನ್ನೈ ಮೇಲೆ ಕ್ಷಿಪಣಿ ದಾಳಿ ಮಾಡಬಲ್ಲದೇ ಪಾಕಿಸ್ತಾನ? ಯಾಕೆ ಈ ಅನುಮಾನ?...

ಜೈಹಿಂದ್, ಪಾಕ್ ನಾಶಗೊಳಿಸಿ: ಓವೈಸಿ
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, 'ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ನಮ್ಮ ಪಡೆಗಳು ನಡೆಸಿದ ದಾಳಿಯನ್ನು ನಾನು ಸ್ವಾಗತಿಸುತ್ತೇನೆ. ಮತ್ತೆಂದೂ ಪಹಲ್ಗಾಮ್ ಘಟನೆ ಸಂಭವಿಸದಂತೆ ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸಬೇಕು. ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಾಶಪಡಿಸಬೇಕು. ಜೈ ಹಿಂದ್' ಎಂದು ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಸಚಿವ ಕಿರಣ್ ರಿಜಿಜು ಎಕ್ಸ್‌ನಲ್ಲಿ ಈ ಕಾರ್ಯಾಚರಣೆಯನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.

ಪಾಕಿಸ್ತಾನದ ಪ್ರತಿಕ್ರಿಯೆ:
ಪಾಕಿಸ್ತಾನದ ಸಶಸ್ತ್ರ ಪಡೆಗಳ ವಕ್ತಾರರು ದಾಳಿ ನಡೆದ ಬಗ್ಗೆ ಬಿಬಿಸಿಗೆ ದೃಢಪಡಿಸಿದರು, ಭಾರತೀಯ ವಾಯುಪಡೆ ಬಹಾವಲ್ಪುರ್ ಮತ್ತು ಮುರಿಡ್ಕೆಯನ್ನು ಗುರಿಯಾಗಿಸಿದೆ ಎಂದು ತಿಳಿಸಿದ್ದಾರೆ. ರಕ್ಷಣಾ ತಜ್ಞ ಪ್ರಫುಲ್ ಬಕ್ಷಿ ಎಕ್ಸ್‌ನಲ್ಲಿ, 'ಇದು ವಾಯು ಮತ್ತು ಫಿರಂಗಿ ದಾಳಿಗಳ ಸಂಯೋಜಿತ ಕಾರ್ಯಾಚರಣೆ. ಪಾಕಿಸ್ತಾನವು ಪ್ರತೀಕಾರಕ್ಕೆ ಯೋಜನೆ ರೂಪಿಸಬಹುದು' ಎಂದು ಹೇಳಿದ್ದಾರೆ. ಇನ್ನು ಪಂಜಾಬ್ ಕಾಂಗ್ರೆಸ್ ನಾಯಕ ರಾಜ್ ಕುಮಾರ್ ವೆರ್ಕಾ, 'ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಬೇಕು' ಎಂದು ಒತ್ತಾಯಿಸಿದ್ದಾರೆ. 

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‌ನಿಂದ ವಿವಾದಾತ್ಮಕ ಟ್ವಿಟ್‌ ಬೆನ್ನಲೇ ಖರ್ಗೆಯಿಂದ ಪ್ರತಿಕ್ರಿಯೆ...

Scroll to load tweet…