I Love Muhammad row: 'ಐ ಲವ್‌ ಮೊಹಮ್ಮದ್‌' ಅಭಿಯಾನವನ್ನು ಕಾಂಗ್ರೆಸ್‌ ಪಕ್ಷವು ಸಮರ್ಥಿಸಿಕೊಂಡಿದೆ. ಕಾಂಗ್ರೆಸ್ ನಾಯಕ ಪವನ್‌ ಖೆರಾ ಅವರು, ಜನರು ತಮ್ಮ ಪ್ರವಾದಿಯ ಮೇಲೆ ಪ್ರೀತಿ ತೋರಿಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದು, ಈ ವಿಚಾರದಲ್ಲಿ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ನವದೆಹಲಿ (ಸೆ.29): ಕರ್ನಾಟಕ ಸೇರಿ ದೇಶದ 5ಕ್ಕೂ ಹೆಚ್ಚು ರಾಜ್ಯಗಳಲ್ಲಿ ವ್ಯಾಪಿಸಿರುವ ‘ಐ ಲವ್‌ ಮೊಹಮ್ಮದ್‌’ ಅಭಿಯಾನವನ್ನು ಕಾಂಗ್ರೆಸ್‌ ಸಮರ್ಥಿಸಿಕೊಂಡಿದೆ. ಜನರು ‘ತಮ್ಮ ದೇವರಾದ ಮೊಹಮದ್‌ರ ಪ್ರತಿ ಪ್ರೀತಿ ತೋರಿಸಿಕೊಳ್ಳುವುದರಲ್ಲಿ ತಪ್ಪೇನು?’ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

Add Asianetnews Kannada as a Preferred SourcegooglePreferred

ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್‌ ಖೆರಾ ಮಾತನಾಡಿ, ‘ಮೀರಾ ಬಾಯಿ, ಸೂಫಿ ಸಂತರು ಬಾಳಿದ ಸಾಮರಸ್ಯದ ನಾಡಿನಲ್ಲಿ, ಅನ್ಯಕೋಮಿಗೆ ಸೇರಿದ(ಮುಸಲ್ಮಾನ) 7 ವರ್ಷದ ಹುಡುಗನನ್ನು ಹಿಂದೂಗಳು ಬಲಿ ಕೊಟ್ಟಿದ್ದಾರೆ. ಆತನಿಂದ ತೊಂದರೆಯೇನಾಗಿತ್ತು? ಅತ್ತ ಯಾರಾದರೂ ತಮಗೆ ದೇವರ ಮೇಲೆ ಪ್ರೀತಿಯಿದೆ ಎಂದರೂ ನಿಮಗೆ ತೊಂದರೆಯಾಗುತ್ತದೆ’ ಎಂದು ತಿವಿದಿದ್ದಾರೆ.

ಇದನ್ನೂ ಓದಿ: ಯಾರು ಅಧಿಕಾರದಲ್ಲಿದ್ದಾರೆ ಅನ್ನೋದು ಮೌಲಾನಾ ಮರೆತಿದ್ದಾನೆ: ಸಿಎಂ ಯೋಗಿ ವಾರ್ನ್

ನೀವು ಇಂದೋರ್‌ನ ಮಾರುಕಟ್ಟೆಯಲ್ಲಿ ಮುಸ್ಲಿಮರನ್ನು ಹೊರಗೆ ಹಾಕಬೇಕೆಂದು ಹೇಳುತ್ತೀರಿ. ನಮ್ಮ ಸಂಸ್ಕೃತಿ ತುಂಬಾ ವಿಶಾಲವಾಗಿದೆ. ಈ ಕಾರ್ಮಿಕ ವರ್ಗದ ಮುಸ್ಲಿಮರು ಅಪಾಯಕಾರಿ ಎಂದು ನೀವು ಭಾವಿಸುತ್ತೀರಿ. ಯಾರಾದರೂ ನಾನು ಮುಹಮ್ಮದ್ ಅವರನ್ನು ಪ್ರೀತಿಸುತ್ತೇನೆ ಎಂದು ಹೇಳಿದರೆ, ಅದರಲ್ಲೇನು ಸಮಸ್ಯೆ ಇದೆ. ಆ ವ್ಯಕ್ತಿ ತನ್ನ ಪ್ರವಾದಿಯನ್ನು ಪ್ರೀತಿಸುತ್ತಿದ್ದರೆ, ನೀವು ಆ ವ್ಯಕ್ತಿಯನ್ನು ಪ್ರೀತಿಸಬೇಕು ಎಂದು ಖೇರಾ ಹೇಳಿದರು.

ಜನರು ತಮ್ಮ ದೇವರುಗಳು ಮತ್ತು ಪ್ರವಾದಿಗಳನ್ನು ಪ್ರೀತಿಸುತ್ತಾರೆ ಇದರಲ್ಲಿ ತಪ್ಪೇನಿದೆ? ಬಿಜೆಪಿ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ.