ಜೆಪಿ ನಡ್ಡಾ, ಬಿಎಲ್ ಸಂತೋಷ್ ಭೇಟಿಯಾದ ಪ್ರಧಾನಿ ಮೋದಿ; ಮಹತ್ವದ ಚರ್ಚೆ!
- BJP ರಾಷ್ಟ್ರೀಯ ಅಧ್ಯಕ್ಷ, ರಾಷ್ಟ್ರೀಯ ಕಾರ್ಯದರ್ಶಿ ಜೊತೆ ಮೋದಿ ಸಭೆ
- ಜೆಪಿ ನಡ್ಡಾ ಅಧೀಕೃತ ನಿವಾಸದಲ್ಲಿ ಮಹತ್ವದ ಸಭೆ
- ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕರು ಭಾಗಿ
ನವದೆಹಲಿ(ಜು.11): ಪ್ರಧಾನಿ ನರೇಂದ್ರ ಮೋದಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್ ಸಂತೋಷ್ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನಡ್ಡಾ ಅಧೀಕೃತ ನಿವಾಸದಲ್ಲಿ ಈ ಸಭೆ ನೆಡಸಲಾಗಿದ್ದು, ಮುಂಬರುವ ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ಬಿಜೆಪಿ ತಯಾರಿ ಹಾಗೂ ಸಿದ್ದತೆಗಳ ಕುರಿತು ಮಾತುಕತೆ ನಡೆಸಲಾಗಿದೆ.
#PeoplesPadma ಪ್ರಶಸ್ತಿಗೆ ಹೆಸರು ಸೂಚಿಸುವಂತೆ ಜನತೆಗೆ ಮೋದಿ ಆಹ್ವಾನ
ಬಿಜೆಪಿ ಮೂಲಗಳ ಪ್ರಕಾರ ಮಹಾರಾಷ್ಟ್ರದ ಮಾಜಿ ಮಂತ್ರಿ ವಿನೋದ್ ತಾವ್ಡೆ ಮತ್ತು ಪಂಕಜಾ ಮುಂಡೆ, ಉತ್ತರ ಪ್ರದೇಶದ ಸಂಸದರಾದ ಹರೀಶ್ ದ್ವಿವೇದಿ, ವಿನೋದ್ ಸೋಂಕರ್, ಅನುಪಮ್ ಹಜ್ರಾ ಮತ್ತು ಸತ್ಯ ಕುಮಾರ್ ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಹಾಗೂ ಗೋವಾ ವಿಧಾನ ಸಭಾ ಚುನಾವಣೆ ಎದುರಾಗಲಿದೆ. ಹೀಗಾಗಿ ಈ ಚುನಾವಣೆಗೆ ತಯಾರಿ ಕುರಿತು ಮಹತ್ವದ ಸಭೆ ನಡೆಸಲಾಗಿದೆ. ಕೇಂದ್ರ ಸಂಪುಟ ಪುನಾರಚನೆಯಾದ ಬೆನ್ನಲ್ಲೇ ಈ ಸಭೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಉ.ಪ್ರ: ಮಂಡಲ ಪಂಚಾಯತ್ನಲ್ಲೂ ಕೇಸರಿ ಪತಾಕೆ, ಯೋಗಿಗೆ ಮೋದಿ ಹಾರೈಕೆ
ಸತತ 1 ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೊರೋನಾ ಲಸಿಕಾ ಅಭಿಯಾನ, ಲಸಿಕೆ ಪೂರೈಕೆ ಕುರಿತು ಜೆಪಿ ನಡ್ಡಾ ಮಾತುಕತೆ ನಡೆಸಿದ್ದಾರೆ. ಯಾವುದೇ ರಾಜ್ಯದಲ್ಲಿ ಲಸಿಕೆ ಕೊರತೆಯಾಗದಂತೆ ಕೈಗೊಂಡಿರುವ ಕ್ರಮಗಳ ಕುರಿತು ಮಾತುಕತೆ ನಡೆಸಲಾಗಿದೆ.