ಮತ್ತೆ ಪವಾರ್- ಪ್ರಶಾಂತ್ ಭೇಟಿ: 15 ದಿನದಲ್ಲಿ 3ನೇ ಸಲ ಸಮಾಲೋಚನೆ
- ಮತ್ತೆ ಪವಾರ್- ಪ್ರಶಾಂತ್ ಭೇಟಿ: 15 ದಿನದಲ್ಲಿ 3ನೇ ಸಲ ಸಮಾಲೋಚನೆ
- 2024ರಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ಸಿದ್ಧತೆ
ನವದೆಹಲಿ(ಜೂ.24): 2024ರಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ದೃಷ್ಟಿಯಿಂದ 8 ವಿಪಕ್ಷಗಳ ನಾಯಕರು ಚರ್ಚೆ ನಡೆಸಿದ ಬೆನ್ನಲ್ಲೇ, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಬುಧವಾರ ಮತ್ತೊಮ್ಮೆ ಎನ್ಸಿಪಿ ಪರಮೋಚ್ಚ ನಾಯಕ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ.
ಮೂಲಗಳ ಪ್ರಕಾರ ಪವಾರ್ ನಿವಾಸದಲ್ಲಿ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಪವಾರ್ 15 ದಿನದಲ್ಲಿ ನೇ ಪ್ರಶಾಂತ್ ಕಿಶೋರ್ ಜೊತೆ ಸಭೆ ನಡೆಸಿದಂತಾಗಿದೆ.
ಯೋಗಿ ನೇತೃತ್ವದಲ್ಲೇ ಎಲೆಕ್ಷನ್: ನಾಯಕತ್ವ ಗೊಂದಲಗಳಿಗೆ ತೆರೆ
ಪಶ್ಚಿಮ ಬಂಗಾಳ ಚುನಾವಣಾ ತಂತ್ರಜ್ಞರಾಗಿ ದೀದಿ ಗೆಲುವಿಗೆ ಕಾರಣಕರ್ತರಾದ ಕಿಶೋರ್ ಜೂ.11ರಂದು ಪವಾರ್ ಅವರನ್ನು ಭೇಟಿಯಾಗಿದ್ದರು. ಬಳಿಕ ಸೋಮವಾರ ಮತ್ತೊಮ್ಮೆ ಭೇಟಿಯಾಗಿ ಚರ್ಚೆ ನಡೆಸಿದ್ದರು.