Asianet Suvarna News Asianet Suvarna News

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುಣಮುಖ; ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ!

ಅನಾರೋಗ್ಯ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಪೂರ್ಣ ಗುಣಮುಖರಾಗಿದ್ದಾರೆ. 20 ದಿನಗಳ ಚಿಕಿತ್ಸೆ ಬಳಿಕ ಇದೀಗ ಕೋವಿಂದ್ ಆಸ್ಪತ್ರೆಯಿಂದ ಬಿಡುಡೆಯಾಗಿದ್ದಾರೆ.

President Ram Nath Kovind  Discharged From AIIMS hospital After bypass Surgery ckm
Author
Bengaluru, First Published Apr 12, 2021, 6:19 PM IST

ನವದೆಹಲಿ(ಏ.12): ಎದೆನೋವು ಕಾಣಿಸಿಕೊಂಡು ಆಸ್ಪತ್ರೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಮಾರ್ಚ್ 26 ರಂದು ಆಸ್ಪತ್ರೆ ದಾಖಲಾಗಿದ್ದ ರಾಮನಾಥ್ ಕೋವಿಂದ್, ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಗುಣಮುಖರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

 

ಸೇನಾಪಡೆ ಆಸ್ಪತ್ರೆಗೆ 20 ಲಕ್ಷ ರೂ. ದೇಣಿಗೆ ಕೊಟ್ಟ ರಾಷ್ಟ್ರಪತಿ!

ಚಿಕಿತ್ಸೆ ನೀಡಿದ ಆಸ್ಪತ್ರೆ ವೈದ್ಯರು, ಸಿಬ್ಬಂಧಿ ವರ್ಗ ಹಾಗೂ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ರಾಮನಾಥ್ ಕೋವಿಂದ್ ಧನ್ಯವಾದ ಹೇಳಿದ್ದಾರೆ. ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಯಿಂದ ಗುಣಮುಖರಾಗಿ ರಾಷ್ಟ್ರಪತಿ ಭವನಕ್ಕೆ ಮರಳಿದ್ದೇನೆ. ನನ್ನ ಚೇತರಿಕೆಗೆ ಹಾರೈಸಿದ, ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. ಏಮ್ಸ್ ಆಸ್ಪತ್ರೆ ಹಾಗೂ ಸೇನಾ ಆರ್‌ಆರ್ ಆಸ್ಪತ್ರೆ ವೈದ್ಯರು, ಶುಶ್ರೂಷಾ ಸಿಬ್ಬಂದಿ ನೀಡಿದ ಆರೈಕೆ ಆಸಾಧಾರಣ. ಎಲ್ಲರಿಗೂ ಕೃತಕ್ಷನಾಗಿದ್ದೇನೆ. ಸಂತೋಷದಿಂದ ಮನೆಗೆ ತೆರಳುತ್ತಿದ್ದೇನೆ ಎಂದು ರಾಮನಾಥ್ ಕೋವಿಂದ್ ತಮ್ಮ ಅಧೀಕೃತ ರಾಷ್ಟ್ರಪತಿ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. 

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್‌ಗೆ ಶೀಘ್ರದಲ್ಲೇ ಬೈಪಾಸ್ ಸರ್ಜರಿ!

ಎದೆನೋವು ಕಾಣಿಸಿಕೊಂಡ ಕಾರಣ ಮಾರ್ಚ್ 26 ರಂದು ರಾಮನಾಥ್ ಕೋವಿಂದ್ ಅವರನ್ನು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಂದ್ ಅವರಿಗೆ ಬೈ ಪಾಸ್ ಸರ್ಜರಿ ಅವಶ್ಯಕತೆ ಇದ್ದ ಕಾರಣ ಸೇನಾ ಆಸ್ಪತ್ರೆಯಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆದ ರಾಮನಾಥ್ ಕೋವಿಂದ್ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Follow Us:
Download App:
  • android
  • ios