ರಾಹುಲ್‌ ಗಾಂಧಿ ವಿರುದ್ಧ ಮೋದಿ ಉಪನಾಮ ಟೀಕೆ ಪ್ರಕರಣ ದಾಖಲಿಸಿ, ಅವರು ಸಂಸತ್‌ ಸದಸ್ಯತ್ವ ಕಳೆದುಕೊಳ್ಳುವಂತೆ ಮಾಡಿದ ಗುಜರಾತ್‌ ಬಿಜೆಪಿಯ ಮಾಜಿ ಶಾಸಕ ಪೂರ್ಣೇಶ್‌ ಮೋದಿ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್‌ ಅರ್ಜಿ ಸಲ್ಲಿಸಿದ್ದಾರೆ. 

ನವದೆಹಲಿ: ರಾಹುಲ್‌ ಗಾಂಧಿ ವಿರುದ್ಧ ಮೋದಿ ಉಪನಾಮ ಟೀಕೆ ಪ್ರಕರಣ ದಾಖಲಿಸಿ, ಅವರು ಸಂಸತ್‌ ಸದಸ್ಯತ್ವ ಕಳೆದುಕೊಳ್ಳುವಂತೆ ಮಾಡಿದ ಗುಜರಾತ್‌ ಬಿಜೆಪಿಯ ಮಾಜಿ ಶಾಸಕ ಪೂರ್ಣೇಶ್‌ ಮೋದಿ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್‌ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಗುಜರಾತ್‌ ಹೈಕೋರ್ಟ್‌, ರಾಹುಲ್‌ಗೆ ವಿಧಿಸಿದ್ದ 2 ವರ್ಷ ಜೈಲು ಶಿಕ್ಷೆಗೆ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ಶೀಘ್ರವೇ ರಾಹುಲ್‌ ಗಾಂಧಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್‌ ಹೇಳಿತ್ತು. ಈ ಹಿನ್ನೆಲೆಯಲ್ಲಿ ಒಂದು ವೇಳೆ ರಾಹುಲ್‌ ಗಾಂಧಿ ಮೇಲ್ಮನವಿ ಸಲ್ಲಿಸಿ ಆ ಕುರಿತು ನ್ಯಾಯಾಲಯದ ಆದೇಶ ಹೊರಡಿಸುವುದಾದಲ್ಲಿ ಈ ವೇಳೆ ತಮ್ಮ ಅಹವಾಲವನ್ನೂ ಆಲಿಸಬೇಕು ಎಂದು ಕೋರಿ ಪೂರ್ಣೇಶ್‌ ಕೇವಿಯಟ್‌ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಾಹುಲ್‌ ಅರ್ಜಿಯನ್ನು ವಜಾಗೊಳಿಸಿದ ಜು.7ರಂದೇ ಪೂರ್ಣೇಶ್‌ ಕೇವಿಯಟ್‌ ಸಲ್ಲಿಸಿದ್ದು, ಅದು ತಡವಾಗಿ ಬೆಳಕಿಗೆ ಬಂದಿದೆ.

ರಾಹುಲ್‌ ಗಾಂಧಿಗೆ ಶಿಕ್ಷೆ ತಗ್ಗಿಸದ ಹೈಕೋರ್ಟ್‌: ಅನರ್ಹತೆ ತಡೆಯಾಜ್ಞೆ ಅರ್ಜಿ ತಿರಸ್ಕಾರ

'ಮೋದಿ ಸರ್‌ನೇಮ್‌ ಹೊಂದಿರುವವರೆಲ್ಲಾ ಏಕೆ ಕಳ್ಳರಾಗಿರ್ತಾರೆ' ಎಂದು ಹೇಳಿದ್ದಕ್ಕೆ ಶಿಕ್ಷೆಗೆ ಒಳಗಾಗಿ ಸಂಸತ್‌ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು, ತಮ್ಮ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಜುಲೈ 7 ರಂದು ಗುಜರಾತ್‌ ಹೈಕೋರ್ಟ್‌ ತಿರಸ್ಕರಿಸಿತ್ತು. ಈ ಮೂಲಕ ರಾಹುಲ್‌ ಗಾಂಧಿ ಅವರಿಗೆ ಸಂಸತ್‌ ಸದಸ್ಯನ ಅನರ್ಹತೆಯನ್ನು ಮುಂದುರೆಸಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ 'ಮೋದಿ ಸರ್‌ನೇಮ್‌ ಹೊಂದಿರುವವರೆಲ್ಲಾ ಏಕೆ ಕಳ್ಳರಾಗಿರ್ತಾರೆ' ಎಂದು ರಾಹುಲ್‌ಗಾಂಧಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾನನಷ್ಟ ಮೊಕದ್ದಮೆ ಹಾಗೂ ಒಂದು ಸಮುದಾಯದ ವಿರುದ್ಧ ಅವಹೇಳನ ಮಾಡಿದ್ದಕ್ಕೆ ದೂರು ದಾಖಲಿಸಲಾಗಿತ್ತು. ಈ ಕುರಿತು ವಿಚಾರಣೆ ಮಾಡಿದ್ದ ಸೂರತ್‌ ಜಿಲ್ಲಾ ನ್ಯಾಯಾಧೀಶರು ಮಾ.23ರಂದು ರಾಹುಲ್‌ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದರು. ಇದರಿಂದ ರಾಹುಲ್ ಸಂಸತ್‌ ಸದಸ್ಯ ಸ್ಥಾನ ರದ್ದಾಗಿತ್ತು. ಈಗ ಹೈಕೋರ್ಟ್‌ನಲ್ಲಿ ಶಿಕ್ಷೆಗೆ ತಡೆ ನೀಡಲು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ, ರಾಹುಲ್‌ ಗಾಂಧಿ ವಿಸ್ತೃತ ಪೀಠಕ್ಕೆ ಅರ್ಜಿ ಸಲ್ಲಿಸುವ ಅವಕಾಶ ಇದೆ.

ರಾಹುಲ್‌ ಸಂಸತ್‌ ಸದಸ್ಯತ್ವ ರದ್ದು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರಕರಣದ ಹಿನ್ನೆಲೆಯೇನು? :

ಕೋಲಾರದಲ್ಲಿ 2019ರಲ್ಲಿ ಚುನಾವಣಾ ಭಾಷಣ ಮಾಡುವ ವೇಳೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು. ಹೇಳಿಕೆ ವಿರುದ್ಧ ಗುಜರಾತ್‌ನ ಸೂರತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅಲ್ಲಿನ ಕೋರ್ಟ್‌ನಲ್ಲಿ ರಾಹುಲ್ ವಿರುದ್ಧ ಕೇಸ್ ಹಾಕಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರ ಸಂಸತ್ ಸದಸ್ಯತ್ವ ಅನರ್ಹಗೊಂಡಿತ್ತು. ಅಲ್ಲದೇ ಸಂಸತ್ ಸದಸ್ಯರಿಗೆ ನೀಡಲಾಗುವ ಬಂಗಲೆ ಖಾಲಿ ಮಾಡುವಂತೆ ಸಂಸತ್ ಕಾರ್ಯದರ್ಶಿ ಅವರಿಗೆ ನೋಟಿಸ್ ಕಳುಹಿಸಿದ್ದರು. ಹೀಗಾಗಿ ಅವರು ಮನೆ ಖಾಲಿ ಮಾಡಿ ತಾಯಿ ಸೋನಿಯಾ ಗಾಂಧಿ ಇದ್ದ ನಿವಾಸಕ್ಕೆ ಬಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಣೆ ಮಾಡಿದೆ.

ಮದುವೆ ಆಗದೇ ಯಾರೂ ಪ್ರಧಾನಿಯಾಗಿಲ್ಲ.. ರಾಹುಲ್‌ ಗಾಂಧಿಗೆ ಸಲಹೆ ನೀಡಿದ ಲಾಲು ಪ್ರಸಾದ್‌!

ಇಂದು ಪ್ರಜಾಪ್ರಭುತ್ವದ ಬ್ಲಾಕ್ ಡೇ: 
ರಾಹುಲ್ ಗಾಂಧಿ ಕುರಿತ ನ್ಯಾಯಾಲಯ ವಿಚಾರಣೆ ಕುರಿತು ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ರಾಹುಲ್ ಅನರ್ಹತೆ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಅರ್ಜಿಯನ್ನ ವಜಾ ಮಾಡಲಾಗಿದೆ. ಆದ್ದರಿಂದ ಇಂದು ಪ್ರಜಾಪ್ರಭುತ್ವದ ಬ್ಲಾಕ್‌ ಡೇ ಆಗಿದೆ ಎಂದು ಹೇಳಿದರು. ರಾಹುಲ್ ಅವರ ರಾಜಕೀಯ ಬೆಳವಣಿಗೆ ತಡೆಯದೇ ಬಿಜೆಪಿ ಈ ಕುತಂತ್ರ ಮಾಡಿದ್ದಾರೆ. ನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಅದನ್ನು ಮೊಟಕುಗೊಳಿಸುವ ಹುನ್ನಾರ ಮಾಡ್ತಿದ್ದಾರೆ. ಇಡೀ ದೇಶದಲ್ಲಿ ವಿರೋಧ ಪಕ್ಷಗಳು ರಾಹುಲ್ ಜೊತೆಗಿದೆ ಎಂದರು.