ಮಾಫಿಯಾ ಚಟುವಟಿಕೆ ವಿರುದ್ಧ ಸಿಎಂ ಚೌಹಾಣ್ ಧ್ವನಿ |  ಖಡಕ್ ಎಚ್ಚರಿಕೆ ಕೊಟ್ಟ ಸಿಎಂ

ಭೋಪಾಲ್‌(ಡಿ.27): ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಮಾಫಿಯಾ ಚಟುವಟಿಕೆಗಳು ನಿಲ್ಲಬೇಕು. ಇಲ್ಲದಿದ್ದರೆ ಇಂಥ ಕೃತ್ಯಗಳಲ್ಲಿ ತೊಡಗಿರುವವರನ್ನು 10 ಅಡಿ ಗುಂಡಿಯಲ್ಲಿ ಹಾಕಿ ಹೂತು ಹಾಕುತ್ತೇನೆ ಎಂದು ಮಾಫಿಯಾ ಗ್ಯಾಂಗ್‌ಗಳ ವಿರುದ್ಧ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್‌ ಚೌಹಾಣ್‌ ಗುಡುಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ರಾಜ್ಯದಲ್ಲಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವವರನ್ನು ಸುಮ್ಮನೆ ಬಿಡಲಾಗದು. ಅಂಥವರು ರಾಜ್ಯವನ್ನು ಬಿಟ್ಟು ತೊಲಗಬೇಕು. ಇಲ್ಲದಿದ್ದರೆ ಅವರನ್ನು 10 ಅಡಿ ಗುಂಡಿಗೆ ಹಾಕುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಒಂದು ದೇಶ, ಒಂದು ಚುನಾವಣೆಗಾಗಿ ಬಿಜೆಪಿ ಶೀಘ್ರದಲ್ಲೇ ವೆಬಿನಾರ್‌

‘ನಮ್ಮ ಸರ್ಕಾರವು ಕಾನೂನು ಪಾಲನೆ ಮಾಡುವ ಜನ ಸಾಮಾನ್ಯರಿಗೆ ಹೂವಿನಷ್ಟೇ ಮೃದುವಾಗಿರುತ್ತದೆ. ಆದರೆ ಅಕ್ರಮ ಚಟುವಟಿಕೆಗಳಲ್ಲಿ ವಿನಾಶಕಾರಿಗಿಂತಲೂ ಭಯಂಕರವಾಗಿರಲಿದೆ’ ಈ ಹಿಂದೆ ಕೂಡ ಚೌಹಾಣ್‌ ಹೇಳಿದ್ದರು.

ರಾಷ್ಟ್ರವ್ಯಾಪಿ ರೈತರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಆನ್‌ಲೈನ್ ಸಂವಾದದ ಮುನ್ನ ಹೋಶಂಗಾಬಾದ್ ಜಿಲ್ಲೆಯ ಬಾಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌಹಾನ್ ಅವರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದರು.