ರಾಯ್‌ಬರೇಲಿಯಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯವಾದ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. 

ರಾಯ್‌ಬರೇಲಿಯ ನಾಸಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಗಂಭೀರ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಮೇಥಿ ಜಿಲ್ಲೆಯ ಗೌರಿಗಂಜ್‌ನ ಅಸಯ್ದಿಹ್ ಗ್ರಾಮದ ನಿವಾಸಿ ಸಯೀದ್ ಆಲಂ ಎಂಬ ಯುವಕನು ಅಪ್ರಾಪ್ತ ಬಾಲಕಿಯೊಬ್ಬಳನ್ನು ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯವಾಗಿ, ಆಮಿಷವೊಡ್ಡಿ ತನ್ನೊಂದಿಗೆ ಕರೆದುಕೊಂಡು ಹೋಗಲು ಯೋಜಿಸಿದ್ದ. ಆದರೆ, ತೋಟದೊಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಕರಣ ವಿವರ:

ಸಾಮಾಜಿಕ ಮಾಧ್ಯಮದ ಮೂಲಕ ಬಾಲಕಿಯೊಂದಿಗೆ ಸಂಪರ್ಕ ಬೆಳೆಸಿದ್ದ ಸಯೀದ್ ಆಲಂ, ಒಂದು ದಿನ ಮೊದಲು ರಾತ್ರಿಯ ವೇಳೆ ಬಾಲಕಿಯ ಮನೆಗೆ ಬಂದು ಆಮಿಷವೊಡ್ಡಿದ್ದಾನೆ. ಸ್ವಲ್ಪ ದೂರ ಕರೆದೊಯ್ದ ನಂತರ, ಒಂದು ತೋಟದ ನಿರ್ಜನ ಪ್ರದೇಶದಲ್ಲಿ ಪರಿಸ್ಥಿತಿಯ ಲಾಭ ಪಡೆದು ಬಾಲಕಿಯ ಮೇಲೆ ದೈಹಿಕ ಕಿರುಕುಳಕ್ಕೆ ಯತ್ನಿಸಿದ್ದಾನೆ. ಬಾಲಕಿಯ ಕೂಗಾಟದಿಂದ ಕುಟುಂಬದವರು ಮತ್ತು ಸುತ್ತಮುತ್ತಲಿನ ಜನರು ಸ್ಥಳಕ್ಕೆ ಧಾವಿಸಿದಾಗ, ಆರೋಪಿ ಸಯೀದ್ ಆಲಂ ಪರಾರಿಯಾಗಿದ್ದಾನೆ.

ಆರೋಪಿ ಬಂಧನ:

ಘಟನೆ ಬಳಿಕ ಕುಟುಂಬವು ನಾಸಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಆದರೆ, ಪೊಲೀಸರು ಆರಂಭದಲ್ಲಿ ವಿಳಂಬ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ. ಎಸ್ಪಿಯವರ ಮಧ್ಯಪ್ರವೇಶದ ನಂತರ, ಪ್ರದೇಶ ಅಧಿಕಾರಿ ಯಾದವೇಂದ್ರ ಪಾಲ್ ಠಾಣೆಗೆ ತಲುಪಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿ ಸಯೀದ್ ಆಲಂನನ್ನು ಬಂಧಿಸಿದ್ದಾರೆ.

ಪ್ರದೇಶ ಅಧಿಕಾರಿ ಯಾದವೇಂದ್ರ ಪಾಲ್ ಪ್ರಕ್ರಿಯಿಸಿದ್ದು, ಸಂತ್ರಸ್ತೆಯ ತಾಯಿ ಗೌರಾ ಅವರು ದೂರು ದಾಖಲಿಸಿದ್ದಾರೆ. ಆರೋಪಿ ಸಯೀದ್ ಆಲಂನನ್ನು ಬಂಧಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆರೋಪಿಯ ವಿರುದ್ಧ ಪೋಕ್ಸೊ ಕಾಯಿದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ' ತಿಳಿಸಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.