Asianet Suvarna News Asianet Suvarna News

ಲಖೀಂಪುರ: ಮೃತ ರೈತನ ಕುಟುಂಬ​ದ​ವರ ಬಿಗಿ​ದಪ್ಪಿ ಸಂತೈಸಿದ ರಾಹುಲ್, ಪ್ರಿಯಾಂಕಾ!

* ರೈತ ಸಂತ್ರ​ಸ್ತ​ರಿಗೆ ಪ್ರಿಯಾಂಕಾ, ರಾಹುಲ್‌ ಸಂತೈ​ಕೆ

* ಲಖೀಂಪು​ರದ ಪಾಲಿಯಾ ಗ್ರಾಮದ ಮೃತ ರೈತನ ಮನೆಗೆ ಭೇಟಿ

* ರೈತನ ಕುಟುಂಬ​ದ​ವರ ಬಿಗಿ​ದಪ್ಪಿ ಸಂತೈ​ಕೆ

Rahul Gandhi Priyanka Gandhi reach Lakhimpur Kheri meet family members pod
Author
Bangalore, First Published Oct 7, 2021, 9:20 AM IST

ಲಖೀಂಪುರ ಖೇರಿ(ಅ.07): ಉತ್ತರ ಪ್ರದೇ​ಶದ ಲಖೀಂಪುರ ಖೇರಿ​ಯಲ್ಲಿ(Lakhimpur Kheri) ಇತ್ತೀ​ಚೆಗೆ ರೈತರ ಮೇಲೆ ನಡೆದ ಹಿಂಸಾ​ಚಾರ(Violence) ಪ್ರಕ​ರ​ಣದ ಸಂತ್ರಸ್ತ ಕುಟುಂಬ​ಗ​ಳನ್ನು ಬುಧ​ವಾರ ರಾತ್ರಿ ಕಾಂಗ್ರೆಸ್‌ ನಾಯ​ಕ​ರಾದ ರಾಹುಲ್‌ ಗಾಂಧಿ(Rahul gandhi) ಹಾಗೂ ಪ್ರಿಯಾಂಕಾ ಗಾಂಧಿ((Priyanka Gandhi) ಭೇಟಿ​ಯಾಗಿ ಸಂತೈ​ಸಿ​ದರು.

ಪಾಲಿಯಾ ಗ್ರಾಮದ ಲವ್‌​ಪ್ರೀತ್‌ ಸಿಂಗ್‌ ಎಂಬ ಮೃತ ರೈತನ ಮನೆಗೆ ಆಗ​ಮಿ​ಸಿದ ಉಭಯ ನಾಯ​ಕರು ಸಂತಾಪ ಸೂಚಿ​ಸಿ​ದರು ಹಾಗೂ ಉಭಯ ನಾಯ​ಕರು ಕುಟುಂಬ​ಸ್ಥ​ರನ್ನು ಬಿಗಿ​ದಪ್ಪಿ ಸಾಂತ್ವನ ಹೇಳಿ​ದ​ರು ಹಾಗೂ ಕುಟುಂಬಕ್ಕೆ ನ್ಯಾಯ ದೊರ​ಕಿ​ಸಿ​ಕೊ​ಡುವ ಭರ​ವಸೆ ನೀಡಿ​ದ​ರು.

ಈ ವೇಳೆ ಛತ್ತೀ​ಸ್‌​ಗಢ ಮುಖ್ಯ​ಮಂತ್ರಿ ಭೂಪೇಶ್‌ ಬಾಘೇಲ್‌, ಪಂಜಾಬ್‌ ಮುಖ್ಯ​ಮಂತ್ರಿ ಚರ​ಣ್‌​ಜಿತ್‌ ಸಿಂಗ್‌ ಚನ್ನಿ, ಕಾಂಗ್ರೆಸ್‌ ನೇತಾರ ದೀಪೇಂದರ್‌ ಹೂಡಾ ಹಾಜ​ರಿ​ದ್ದ​ರು.

ಭೇಟಿಗೂ ಮುನ್ನ ಹೈಡ್ರಾಮಾ:

ಬುಧವಾರ ಬೆಳ​ಗ್ಗೆಯೇ ರಾಹುಲ್‌ ಗಾಂಧಿ ಅವ​ರು ಪಂಜಾಬ್‌ ಮುಖ್ಯ​ಮಂತ್ರಿ ಚರ​ಣ್‌​ಜಿತ್‌ ಸಿಂಗ್‌ ಚನ್ನಿ ಹಾಗೂ ಉತ್ತ​ರಾ​ಖಂಡ ಮುಖ್ಯ​ಮಂತ್ರಿ ಭೂಪೇಶ್‌ ಬಾಘೇಲ್‌ ಅವರ ಜತೆ ಲಖ​ನೌಗೆ ಆಗ​ಮಿ​ಸಿ​ದರು. ಮೊದಲು ಇವರ ಭೇಟಿ​ಗೆ ಉತ್ತರ ಪ್ರದೇಶ ಸರ್ಕಾರ ಅನು​ಮತಿ ನಿರಾ​ಕ​ರಿ​ಸಿ​ತ್ತಾ​ದರೂ ನಂತರ ಒತ್ತ​ಡಕ್ಕೆ ಮಣಿದು ಅನು​ಮತಿ ನೀಡಿತು. ಆದರೆ ಲಖನೌ ಏರ್‌​ಪೋ​ರ್ಟ್‌​ನಲ್ಲಿ ಸರ್ಕಾರ ವಿಧಿ​ಸಿದ ಷರತ್ತು ವಿವಾ​ದಕ್ಕೆ ಕಾರ​ಣ​ವಾ​ಯಿ​ತು.

ವಿಮಾ​ನ ನಿಲ್ದಾ​ಣ​ದ​ಲ್ಲಿದ್ದ ಪೊಲೀ​ಸರು ರಾಹುಲ್‌ ಅವ​ರಿಗೆ ‘ಪೊ​ಲೀಸ್‌ ವಾಹ​ನ​ದಲ್ಲಿ ಲಖೀಂಪು​ರಕ್ಕೆ ಭೇಟಿ ಕೊಡ​ಬೇಕು. ಖಾಸಗಿ ವಾಹನ ಬಳ​ಸ​ಬೇ​ಡಿ’ ಎಂದ​ರು. ಇದರಿಂದ ಕೋಪಗೊಂಡ ರಾಹು​ಲ್‌, ‘ನನ್ನ ಪ್ರಯಾಣವನ್ನು ನಿರ್ಧರಿಸಲು ನೀವು ಯಾರು? ನಾನು ನನ್ನ ಕಾರಿನಲ್ಲಿಯೇ ಹೋಗಲು ಬಯಸುತ್ತೇನೆ’ ಎಂದು ಹೇಳಿ ಧರಣಿ ಕುಳಿ​ತ​ರು. ‘ಸ್ವಂತ ಕಾರಿನಲ್ಲಿ ಹೋಗಲು 20 ದಿನ​ವಾ​ದರೂ ಸರಿ, ಎಷ್ಟುದಿನವಾದರೂ ಸರಿ.. ವಿಮಾನ ನಿಲ್ದಾಣದಲ್ಲಿಯೇ ಕಾಯುವೆ’ ಎಂದು ಸವಾಲು ಹಾಕಿ​ದರು. ಕೊನೆಗೆ ಸ್ವಂತ ವಾಹ​ನ​ದಲ್ಲಿ ಲಖೀಂಪು​ರಕ್ಕೆ ಭೇಟಿ ನೀಡಲು ರಾಹು​ಲ್‌ಗೆ ಪೊಲೀ​ಸರು ಅನು​ಮ​ತಿ​ಸಿ​ದ​ರು.

ಬಂಧ​ಮುಕ್ತ ಪ್ರಿಯಾಂಕಾ ಜತೆಗೆ ಲಖೀಂಪು​ರ​ಕ್ಕೆ:

ಈ ನಡುವೆ, ಸೀತಾ​ಪು​ರ​ದಲ್ಲಿ ಬಂಧ​ನ​ದ​ಲ್ಲಿದ್ದ ರಾಹುಲ್‌ ಗಾಂಧಿ ಸೋದರಿ ಪ್ರಿಯಾಂಕಾ ಅವ​ರನ್ನು ಪೊಲೀ​ಸರು ಬಂಧ​ಮು​ಕ್ತ​ಗೊ​ಳಿ​ಸಿ​ದರು. ಮಾರ್ಗ​ಮಧ್ಯೆ ರಾಹುಲ್‌ ಅವರು ಪ್ರಿಯಾಂಕಾ ಅವ​ರನ್ನೂ ತಮ್ಮ ಜತೆಗೆ ಲಖೀಂಪು​ರಕ್ಕೆ ಕರೆ​ದೊ​ಯ್ದ​ರು. ​ಬ​ಳಿಕ ಪ್ರಿಯಾಂಕಾ ಹಾಗೂ ರಾಹುಲ್‌ ಅವರು ರಾತ್ರಿ ವೇಳೆ ಕೆಲವು ಸಂತ್ರಸ್ತ ಕುಟುಂಬ​ಗ​ಳನ್ನು ಭೇಟಿ ಮಾಡಿ​ದ​ರು. ಈ ವೇಳೆ ಕಾಂಗ್ರೆಸ್‌ ನಾಯಕ ರಣದೀಪ್‌ ಸುರ್ಜೇವಾಲಾ ಹಾಗೂ ದೀಪೇಂದರ್‌ ಹೂಡಾ ಕೂಡ ಇದ್ದರು. ಇತ್ತೀ​ಚೆಗೆ ನಡೆದ ಲಖೀಂಪುರ ಹಿಂಸೆ​ಯಲ್ಲಿ ಒಬ್ಬ ಪತ್ರ​ಕರ್ತ, 4 ರೈತರು ಸೇರಿ 8 ಮಂದಿ ಸಾವ​ನ್ನ​ಪ್ಪಿ​ದ್ದ​ರು.

 

Follow Us:
Download App:
  • android
  • ios