Asianet Suvarna News Asianet Suvarna News

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್; ಇನ್ಮುಂದೆ ವೈಟಿಂಗ್ ಲಿಸ್ಟ್‌ ಇಲ್ಲ, ದಟ್ಟಣೆಯೂ ಇರಲ್ಲ!

ರೈಲು ಪ್ರಯಾಣಿಕರಿಗೆ ಕೇಂದ್ರ ರೈಲ್ವೇ ಸಚಿವರು ಗುಡ್ ನ್ಯೂಸ್ ನೀಡಿದ್ದಾರೆ. ಇನ್ಮುಂದೆ ವೈಟಿಂಗ್ ಲಿಸ್ಟ್ ಇರಲ್ಲ. ಟಿಕೆಟ್ ಬುಕಿಂಗ್ ಮತ್ತಷ್ಟು ಸುಲಭವಾಗುತ್ತಿದೆ.ಇಷ್ಟೇ ಅಲ್ಲ ಭಾರಿ ದಟ್ಟಣೆ ಕೂಡ ಇರಲ್ಲ. 
 

Railway passenger confirms reserved seat without waiting list by 2032 says Minister Ashwini Vaishnaw ckm
Author
First Published Jun 15, 2024, 9:12 PM IST

ನವದೆಹಲಿ(ಜೂ.15)  ರೈಲು ಪ್ರಯಾಣ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಕಾರಣ ಸಂಚಾರ ದಟ್ಟಣೆ, ನಿಲ್ಲಲು ಜಾಗವಿಲ್ಲದಷ್ಟು ಪ್ರಯಾಣಿಕರು, ಬುಕಿಂಗ್ ಮಾಡಿದರೆ ವೈಟಿಂಗ್ ಲಿಸ್ಟ್ ಕಾಯಬೇಕಾದ ಪರಿಸ್ಥಿತಿ. ಈ ಎಲ್ಲಾ ಸಮಸ್ಯೆಗಳು ಇನ್ಮು ಮುಂದೆ ಇರುವುದಿಲ್ಲ. ಕಾರಣ ಭಾರತೀಯ ರೈಲ್ವೇಯಲ್ಲಿ ಮಹತ್ತರ ಬದಲಾವಣೆ ತರಲಾಗುತ್ತಿದೆ. ಬುಕಿಂಗ್ ಮಾಡಿದವರಿಗೆ ತಕ್ಷಣವೇ ಟಿಕೆಟ್ ಕನ್‌ಫರ್ಮ್, ವೈಟಿಂಗ್ ಲಿಸ್ಟ್‌ಗೆ ಕಾಯುವ ಪ್ರಮೇಯವೇ ಇಲ್ಲ. ಇನ್ನು ಪ್ರಯಾಣ ಕೂಡ ಸರಳ ಹಾಗೂ ಆರಾಮದಾಯಕವಾಗುತ್ತಿದೆ. ಹೌದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ.

ರೈಲು ಸೇವೆಗಳನ್ನು ಮತ್ತಷ್ಟು ಉತ್ತಮಪಡಿಸಲಾಗುತ್ತಿದೆ. ಇದಕ್ಕಾಗಿ ಮಹತ್ವದ ರೂಪುರೇಶೆ ತಯಾರಾಗಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಪ್ರಮುಖವಾಗಿ 2032ರ ವೇಳೆಗೆ ಭಾರತೀಯ ರೈಲ್ವೇ ಸಂಪೂರ್ಣ ಬದಲಾಗಲಿದೆ. ಟಿಕೆಟ್ ಬುಕಿಂಗ್, ಟಿಕೆಟ್ ಕನ್‌ಫರ್ಮ್ ಸುಲಭ. ರೈಲು ಪ್ರಯಾಣ ಆರಾಮದಾಯಕವಾಗಲಿದೆ. ಕಿಕ್ಕಿರಿದು ತುಂಬಿದ ರೈಲುಗಳು ಇರುವುದಿಲ್ಲ. ಕಾರಣ ರೈಲು ಸಂಖ್ಯೆ, ಸೇವೆ ಹೆಚ್ಚಿಸಲಾಗುತ್ತಿದೆ. ರೈಲು ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 40 ಮಿಲಿಯನ್ ಪ್ರಯಾಣಿಕರು ಕೇವಲ ಬೇಸಿಗೆಯಲ್ಲಿ ಪ್ರಯಾಣಿಸಿದ್ದಾರೆ ಎಂದು ವೈಷ್ಣವ್ ಹೇಳಿದ್ದಾರೆ.

ರೈಲಿನಲ್ಲಿ ಖುಲ್ಲಂ ಖುಲ್ಲಾ ಸೀನ್, ಜೋಡಿಯ ರೋಮ್ಯಾನ್ಸ್‌ಗೆ ಸುಸ್ತಾದ ಪ್ರಯಾಣಿಕರು!

ಪ್ರಯಾಣಿಕರು ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ರೈಲು ಸಂಖ್ಯೆಯನ್ನೂ ಹೆಚ್ಚಿಸಲಾಗುತ್ತಿದೆ. ಭಾರತದ ಮೂಲೆ ಮೂಲೆಗೆ ರೈಲು ಸೇವೆಗಳನ್ನು ನೀಡಲಾಗುತ್ತದೆ. ಯಾವುದೇ ವೈಟಿಂಗ್ ಲಿಸ್ಟ್‌ಗೆ ಕಾಯದೇ ಸೀಟುಗಳನ್ನು ರಿಸರ್ವ್ ಮಾಡಲು ಸಾಧ್ಯವಿದೆ. 2032ರ ವೇಳೆಗೆ ಭಾರತೀಯ ರೈಲ್ವೇ ಸಂಪೂರ್ಣ ಬದಲಾಗಲಿದೆ. ಆಧುನಿಕತೆ ಪಡೆದುಕೊಳ್ಳಲಿದೆ ಎಂದಿದ್ದಾರೆ.

ರೈಲ್ವೇ ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ರೈಲ್ವೇ ಇಲಾಖೆ ಅಧಿಕಾರಿಗಳ ಜೊತೆ ಉನ್ನತ ಸಭೆ ನಡೆಸಿದ ಸಚಿವರು, ಶಿಸ್ತು, ಸಮಯಕ್ಕೆ ತಕ್ಕನಾಗಿ ಕೆಲಸಕ್ಕೆ ಹಾಜರಾಗುವುದು. ಕೆಲಸ, ಕರ್ತವ್ಯದಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ. ಜನಸಾಮಾನ್ಯರು  ರೈಲು ಪ್ರಯಾಣವನ್ನೇ ನೆಚ್ಚಿಕೊಂಡಿದ್ದಾರೆ.ಹೀಗಾಗಿ ಅತೀವ ಮುನ್ನಚ್ಚೆರಿಕೆ ಅಗತ್ಯವಿದೆ. ಗೊಂದಲಗಳು ಸೃಷ್ಟಿಯಾಗಬಾರದು. ರೈಲು ಪ್ರಯಾಣದಲ್ಲಿ ಯಾವುದೇ ತೊಡಕುಗಳು, ಆತಂಕ ಇರಬಾರದು ಎಂದು ಸಚಿವರು ಖಡಕ್ ಸೂಚನೆ ನೀಡಿದ್ದಾರೆ.

ರೈಲಿನಲ್ಲಿ ನೀಡುವ ಆಹಾರ, ಶುಚಿತ್ವ, ರೈಲಿನ ಶುಚಿತ್ವ, ಶೌಚಾಲಯ, ನೀರು, ಎಸಿ, ಫ್ಯಾನ್ ಎಲ್ಲದರ ಕುರಿತು ಪರಿಶೀಲನೆ ಆಗಬೇಕು. ರೈಲು ಸಮಯದಲ್ಲಿ ವಿಳಂಬತೆ ಇರಬಾರದು. ತಕ್ಕ ಸಮಯಕ್ಕೆ ರೈಲು ಹೊರಡಬೇಕು. ಪ್ರಯಾಣಿಕರ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.

ರಾಂಗ್ ಸಿಗ್ನಲ್ ನೀಡಿದ ಸ್ಟೇಷನ್ ಮಾಸ್ಟರ್: ಎಲ್ಲೋ ಹೋಗ್ಬೇಕಾದ ರೈಲು ಎಲ್ಲೋ ಹೋಯ್ತು
 

Latest Videos
Follow Us:
Download App:
  • android
  • ios