ಇಬ್ಬರು ಕಾಂಗ್ರೆಸ್ ಶಾಸಕರಿಗೆ 1 ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ. 11 ವರ್ಷ ಹಳೇ ಪ್ರಕರಣದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಸುದೀರ್ಘ ವಿಚಾರಣೆ ಬಳಿಕ ಇಬ್ಬರು ಕಾಂಗ್ರೆಸ್ ಶಾಸಕರು 9 ಆರೋಪಿಗಳು ತಪ್ಪಿತಸ್ಥರು ಎಂದು ಕೋರ್ಟ್ ಹೇಳಿದೆ. ಇಷ್ಟೇ ಅಲ್ಲ 1 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ಜೈಪುರ(ಜೂ.18) ಇಬ್ಬರು ಕಾಂಗ್ರೆಸ್‌ನ ಹಾಲಿ ಶಾಸಕರು ಸೇರಿದಂತೆ 9 ಮಂದಿ ತಪ್ಪಸೆಗಿದ್ದು ಸಾಬೀತಾಗಿದೆ. ಸುದೀರ್ಘ ವಿಚಾರಣೆ ಬಳಿಕ ಇದೀಗ ಕೋರ್ಟ್ ಶಿಕ್ಷೆಯನ್ನು ಪ್ರಕಟಿಸಿದೆ. ಕಾಂಗ್ರೆಸ್‌ನ ಇಬ್ಬರು ಶಾಸಕರು ಸೇರಿದಂತೆ 9 ಮಂದಿಗೆ 1 ವರ್ಷ ಜೈಲು ಶಿಕ್ಷೆ ಪ್ರಕಟಿಸಲಾಗಿದೆ. ಬರೋಬ್ಬರಿ 11 ವರ್ಷಗಳ ಹಿಂದಿನ ಪ್ರಕರಣಟ ಇದಾಗಿದ್ದು, ಇದೀಗ ಕೋರ್ಟ್ ಪ್ರಕರಣದ ತೀರ್ಪು ನೀಡಿದೆ. ಈ ತೀರ್ಪು ಇದೀಗ ಕಾಂಗ್ರೆಸ್ ಪಾಳಯದಲ್ಲಿ ಕೋಲಾಹಲ ಸೃಷ್ಟಿಸಿದೆ. ರಾಜಸ್ಥಾನ ಕಾಂಗ್ರೆಸ್‌ ಶಾಸಕರಾದ ಮುಕೇಶ್ ಬಾಕರ್ ಹಾಗೂ ಮನೀಶ್ ಯಾದವ್ ಶಿಕ್ಷೆಗೆ ಗುರಿಯಾಗಿದ್ದಾರೆ. ಶಿಕ್ಷೆ ಪ್ರಮಾಣ ಒಂದು ವರ್ಷವಾಗಿರುವ ಕಾರಣ ಇಬ್ಬರು ಶಾಸಕರು ಅನರ್ಹತೆ ಭೀತಿಯಿಂದ ಪಾರಾಗಿದ್ದಾರೆ.

Add Asianetnews Kannada as a Preferred SourcegooglePreferred

11 ವರ್ಷಗಳ ಹಿಂದಿನ ಕೇಸ್, ಈಗ ತೀರ್ಪು ಪ್ರಕಟ

ಜೈಪುರ ಜಿಲ್ಲಾ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ. 11 ವರ್ಷಗಳ ಹಿಂದೆ ಅಂದರೆ ಆಗಸ್ಟ್ 13, 2014ರಲ್ಲಿ ಈ ಪ್ರಕರಣ ನಡೆದಿತ್ತು. ನಿಯಮ ಬಾಹಿರವಾಗಿ ಪ್ರತಿಭಟನೆ ಆಯೋಜಿಸಿದ್ದ ಈ ಇಬ್ಬರು ಕಾಂಗ್ರೆಸ್ ನಾಯಕರು, ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದರು. ರಾಜಸ್ಥಾನ ವಿಶ್ವವಿದ್ಯಾಲಯದ ಹೊರಭಾರದ ಪ್ರಮುಖ ರಸ್ತೆಯಾದ ಜೆಎಲ್‌ಎನ್ ಮಾರ್ಗ್ ರಸ್ತೆಯನ್ನು ಸುಮಾರು 20 ನಿಮಿಷಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಕಾಂಗ್ರೆಸ್‌ನ ಇಬ್ಬರು ನಾಯಕರು ಯಾವುದೇ ಅನುಮತಿ ಪಡೆದಿರಲಿಲ್ಲ. ಇತ್ತ ರಸ್ತೆ ತಡೆದು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಸಮಸ್ಯೆ ತಂದಿಟ್ಟಿದ್ದರು.

ಕಾಂಗ್ರೆಸ್ ಸರ್ಕಾರದಲ್ಲಿ ಮೆತ್ತಗಾಗಿದ್ದ ಕೇಸ್

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರದಲ್ಲಿ ಈ ಪ್ರಕರಣ ಮೆತ್ತಗಾಗಿತ್ತು. ಈ ಪ್ರಕರಣದ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಹಿಂದೇಟು ಹಾಕಿದ್ದರು. 2016ರಲ್ಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು. 2016ರಿಂದ ಇದುವರೆಗೆ ಸತತವಾಗಿ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಇದೀಗ ತೀರ್ಪು ಪ್ರಕಟಗೊಂಡಿದೆ. ಇಬ್ಬರು ಹಾಲಿ ಶಾಸಕರು, ಹಲವು ಕಾಂಗ್ರೆಸ್ ನಾಯಕರ ವಿರುದ್ದ ಪ್ರಕರಣ ದಾಖಳಾಗಿತ್ತು. ಈ ಪ್ರಕರಣದಲ್ಲಿ 9 ಮಂದಿ ಮೇಲಿನ ಆರೋಪ ಸಾಬೀತಾಗಿದೆ. ಹೀಗಾಗಿ 9 ಮಂದಿಗೆ 1 ವರ್ಷ ಜೈಲು ಶಿಕ್ಷೆಯನ್ನು ಜೈಪುರ ಕೋರ್ಟ್ ಪ್ರಕಟಿಸಿದೆ.

ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಜಾಮೀನು

ರಾಜಸ್ಥಾನ ಕಾಂಗ್ರೆಸ್‌ನ ಶಾಸಕರಾದ ಮುಕೇಶ್ ಬಾಕರ್ ಹಾಗೂ ಮನೀಶ್ ಯಾದವ್ ಮೇಲಿನ ಆರೋಪ ಸಾಬೀತಾಗಿರುವ ಕಾರಣ ಶಿಕ್ಷೆ ಪ್ರಮಾಣ ಕೂಡ ಪ್ರಕಟಗೊಂಡಿದೆ. ಇದರ ಜೊತೆಗೆ ಮಂದಿ 7 ಮಂದಿಗೂ 1 ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ. ಆದರೆ ಶಿಕ್ಷೆ ಪ್ರಕಟಕ್ಕೂ ಮುನ್ನವೇ ಈ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಷ್ಟೇ ಅಲ್ಲ 1 ತಿಂಗಳ ಕಾಲಾವಾಕಾಶ ನೀಡಿದೆ. ಇದರೊಳಗೆ ಹೈಕೋರ್ಟ‌ಗೆ ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಶಾಸಕ ಸ್ಥಾನಕ್ಕೆ ಯಾವುದೇ ಧಕ್ಕೆ ಇಲ್ಲ

ಇಬ್ಬರು ಹಾಲಿ ಶಾಸಕರಿಗೆ 1 ವರ್ಷ ಶಿಕ್ಷೆ ಪ್ರಕಟಗೊಂಡಿದೆ. ಹೀಗಾಗಿ ಇವರ ಶಾಸಕ ಸ್ಥಾನಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ. ಶಾಸಕ ಹಾಗೂ ಸಂಸದರ ನ್ಯಾಯಲಯದ ನಿಯಮದ ಪ್ರಕಾರ ಜನಪ್ರತಿಧಿನಿದಿಯ ಶಿಕ್ಷೆ ಪ್ರಕರಣಾ 2 ವರ್ಷಕ್ಕಿಂದ ಮೇಲ್ಪಟ್ಟಿದ್ದರೆ ಮಾತ್ರ ಶಾಸಕ ಸ್ಥಾನದಿಂದ ಅನರ್ಹರಾಗಲಿದ್ದಾರೆ.