ರಜೌರಿಯಲ್ಲಿ ಸಾವನ್ನಪ್ಪಿದ ಸೇನಾ ಕ್ಯಾಪ್ಟನ್ ಶುಭಂ ಗುಪ್ತಾ ಅವರ ತಾಯಿ ದುಃಖತಪ್ತಳಾಗಿ ಅಳುತ್ತಿದ್ದರೂ, ಉತ್ತರಪ್ರದೇಶದ ಸಚಿವ ಯೋಗೇಂದ್ರ ಉಪಾಧ್ಯಾಯ ಅವರು, ಆಕೆಗೆ ಪರಿಹಾರದ ಚೆಕ್‌ ನೀಡಿ ಬಲವಂತವಾಗಿ ಫೋಟೋ ತೆಗೆಸಿಕೊಂಡಿದ್ದಾರೆ. ಇದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ಆಗ್ರಾ: ರಜೌರಿಯಲ್ಲಿ ಸಾವನ್ನಪ್ಪಿದ ಸೇನಾ ಕ್ಯಾಪ್ಟನ್ ಶುಭಂ ಗುಪ್ತಾ ಅವರ ತಾಯಿ ದುಃಖತಪ್ತಳಾಗಿ ಅಳುತ್ತಿದ್ದರೂ, ಉತ್ತರಪ್ರದೇಶದ ಸಚಿವ ಯೋಗೇಂದ್ರ ಉಪಾಧ್ಯಾಯ ಅವರು, ಆಕೆಗೆ ಪರಿಹಾರದ ಚೆಕ್‌ ನೀಡಿ ಬಲವಂತವಾಗಿ ಫೋಟೋ ತೆಗೆಸಿಕೊಂಡಿದ್ದಾರೆ. ಇದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

Add Asianetnews Kannada as a Preferred SourcegooglePreferred

ಸಚಿವ ಯೋಗೇಂದ್ರ ಉಪಾಧ್ಯಾಯ (Yogendra Upadyaya) ಮತ್ತು ಶಾಸಕ ಜಿ.ಎಸ್ ಧರ್ಮೇಶ್ ಅವರು ಶುಭಂ ಗುಪ್ತಾ ಮನೆಗೆ ಭೇಟಿ ನೀಡಿದಾಗ ತಾಯಿ ರೋದಿಸುತ್ತಿದ್ದರು. ಈ ವೇಳೆ ಸರ್ಕಾರದ ಪರಿಹಾರ ತಮಗೆ ಬೇಡ ಎಂದೂ ಹೇಳಿದರು. ಆದರೂ ಸಚಿವರು ಬಲವಂತವಾಗಿ ಪರಿಹಾರದ ಚೆಕ್ ವಿತರಿಸಿ ಅದರ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಪಾಕ್‌ ಮಾಜಿ ಯೋಧರು ಈಗ ಉಗ್ರರು: ಐವರ ಬಲಿ ಪಡೆದ ರಜೌರಿ ದಾಳಿ ಹಿಂದೆ ಪಾಕ್ ಸೈನಿಕರು

ಇದನ್ನು ವ್ಯಾಪಕವಾಗಿ ಟೀಕಿಸಿರುವ ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳು, ಬಿಜೆಪಿಯ (BJP) ಈ ನಡೆ ರಣಹದ್ದುಗಳಿಗೆ ಸಮಾನ ಮತ್ತು ಬಿಜೆಪಿಯೆಂದರೆ ಬೇಷರಮ್ (ಅಸಹ್ಯಕರವಾದ) ಪ್ರಚಾರಕ ಪಕ್ಷ ಎಂದು ಜರಿದಿದೆ.

ಮದುವೆಗೆ ಬರಬೇಕಿದ್ದ ಮಗ, ಹೆಣವಾಗಿ ಬಂದ; ಸಂಭ್ರಮದ ಊರಲ್ಲಿ ಈಗ ಬರೀ ಸೂತಕ!

Scroll to load tweet…