Asianet Suvarna News Asianet Suvarna News

ನನ್ನ ಹೃದಯಕ್ಕೆ ಹತ್ತಿರವಾದ ಕನಸು ಈಗ ನನಸು: ಅಡ್ವಾಣಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ| ನನ್ನ ಹೃದಯಕ್ಕೆ ಹತ್ತಿರವಾದ ಕನಸು ಈಗ ನನಸು: ಅಡ್ವಾಣಿ| 

Ram Mandir Bhoomi Pujan A dream close to my heart is getting fulfilled says LK Advani
Author
Bangalore, First Published Aug 5, 2020, 8:25 AM IST

ನವದೆಹಲಿ(ಆ.05): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸದ ದಿನವು ಕೇವಲ ನನಗಷ್ಟೇ ಅಲ್ಲದೆ, ಇಡೀ ದೇಶಕ್ಕೆ ಭಾವನಾತ್ಮಕ ಹಾಗೂ ಐತಿಹಾಸಿಕ ದಿನವಾಗಿದೆ ಎಂದು ರಾಮಮಂದಿರ ಹೋರಾಟದ ಮುಂಚೂಣಿಯಲ್ಲಿದ್ದ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಲ್‌.ಕೆ ಅಡ್ವಾಣಿ ಅವರು ಹೇಳಿದ್ದಾರೆ.

ಪಂಚ ಶತಮಾನದ ಶಂಕು:ರಂಗೇರಿದ ಅಯೋಧ್ಯೆ, ಬೆಳಗಲಿದೆ 1.5 ಲಕ್ಷ ದೀಪ!

ಅಲ್ಲದೆ, ಶ್ರೀ ರಾಮ ಜನ್ಮಭೂಮಿಯಲ್ಲಿ ವಿಜೃಂಭಣೆಯ ಮತ್ತು ವೈಭವೋತೇತ ದೇವಸ್ಥಾನ ನಿರ್ಮಾಣವಾಗಬೇಕು ಎಂಬುದು ಬಿಜೆಪಿಯ ಆಕಾಂಕ್ಷೆ ಮತ್ತು ಗುರಿಯಾಗಿತ್ತು. ಅಲ್ಲದೆ, ರಾಮ ಮಂದಿರವು ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವ ಬಲಿಷ್ಠ, ಸಮೃದ್ಧ ಹಾಗೂ ಸಾಮರಸ್ಯದ ಭಾರತವನ್ನು ಪ್ರತಿಬಿಂಬಿಸಲಿದೆ ಎಂದಿದ್ದಾರೆ.

Ram Mandir Bhoomi Pujan A dream close to my heart is getting fulfilled says LK Advani

ಕೆಲವು ಬಾರಿ ಮಹತ್ವದ ಕನಸುಗಳು ನನಸಾಗಲು ದೀರ್ಘಕಾಲವೇ ತೆಗೆದುಕೊಳ್ಳುತ್ತವೆ. ಆದರೆ, ಆ ಕನಸುಗಳು ನೆರವೇರಿದಾಗ ನಿಜಕ್ಕೂ ಜೀವನ ಸಾರ್ಥಕವಾಗುತ್ತದೆ. ನನ್ನ ಹೃದಯಕ್ಕೆ ತೀರಾ ಹತ್ತಿರವಾದ ಅಂಥ ಕನಸು ಈಗ ನೆರವೇರುತ್ತಿದೆ ಎಂದು ಅಡ್ವಾಣಿ ಅವರು ಹೇಳಿದ್ದಾರೆ.

Follow Us:
Download App:
  • android
  • ios