ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ 8 ತಿಂಗಳು ಕಳೆದರೂ ಸಂಸದನೋರ್ವ ಇನ್ನಾದರೂ ಪ್ರಮಾಣ ವಚನ ಸ್ವೀಕಾರ ಮಾಡಿಲ್ಲ. 

ನವದೆಹಲಿ [ಜ.31]: 2019ರ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ 8 ತಿಂಗಳು ಕಳೆದರೂ, ಉತ್ತರ ಪ್ರದೇಶದ ಘೋಸಿ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಬಿಎಸ್‌ಪಿ ಅಭ್ಯರ್ಥಿಯೊಬ್ಬರು ಇದುವರೆಗೂ ಪ್ರಮಾಣವಚನ ಸ್ವೀಕಾರವನ್ನೇ ಮಾಡಿಲ್ಲ!

Add Asianetnews Kannada as a Preferred SourcegooglePreferred

ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಎಸ್‌ಪಿ ಸಂಸದ ಅತುಲ್‌ ರಾಯ್‌ಗೆ ಕಡೆಗೂ ಪ್ರಮಾಣವಚನ ಸ್ವೀಕರಿಸಲು ಸುಪ್ರೀಂಕೋರ್ಟ್‌ ಪರೋಲ್‌ ನೀಡಿ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಅವರು ಇಂದು ಶಪಥಗ್ರಹಣ ಮಾಡಿ ಜೈಲಿಗೆ ಮರಳಲಿದ್ದಾರೆ.

ಜೆಡಿಯು ಬಿಟ್ಟ ಪ್ರಶಾಂತ್ ಕಿಶೋರ್ ಜೆಡಿಎಸ್‌ಗೆ?: ದೊಡ್ಡ ಗೌಡರ ಪ್ಲ್ಯಾನ್ ಏನು?...

ಜನಪ್ರತಿನಿಧಿಯಾಗಿ ಆಯ್ಕೆಯಾದವರು ಸಂಸತ್ತಿನ ಒಟ್ಟು 60 ದಿನದ ಕಲಾಪದೊಳಗೆ ಪ್ರಮಾಣವಚನ ಸ್ವೀಕರಿಸಬೇಕು. ಇಲ್ಲದಿದ್ದರೆ ಅವರ ಸದಸ್ಯತ್ವ ಅನರ್ಹವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ.

ನಿರುದ್ಯೋಗಿಗಳಿಗೆ 5 ಸಾವಿರ ರೂ. ಮಾಸಿಕ ವೇತನ: ಸರ್ಕಾರದ ಘೋಷಣೆ!

ಅತುಲ್‌ ವಿರುದ್ಧ ಕಳೆದ ವರ್ಷ ಮೇ 1ರಂದು ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಹೀಗಾಗಿ ಅಂದಿನಿಂದ ಅವರು ತಲೆಮರೆಸಿಕೊಂಡಿದ್ದರು. ಅವರ ಅನುಪಸ್ಥಿತಿಯಲ್ಲೇ ಚುನಾವಣಾ ಪ್ರಚಾರ ನಡೆದು, ಅಖಿಲೇಶ್‌- ಮಾಯಾವತಿ ಜಂಟಿ ಪ್ರಚಾರ ನಡೆಸಿದ್ದರು. 1 ಲಕ್ಷಕ್ಕೂ ಅಧಿಕ ಮತಗಳ ಅಂತರದೊಂದಿಗೆ ಅತುಲ್‌ ಜಯಭೇರಿ ಬಾರಿಸಿದ್ದರು. ಆದರೆ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನ್ಯಾಯಾಲಯಗಳು ನಿರೀಕ್ಷಣಾ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಕಳೆದ ಜೂನ್‌ನಿಂದ ಜೈಲಿನಲ್ಲಿದ್ದಾರೆ. ಅವರಿಗೆ ಕಾಯಂ ಜಾಮೀನೂ ಸಿಕ್ಕಿಲ್ಲ.