ಮೋದಿ ಸರ್‌ನೇಮ್‌ ಕೇಸ್‌ ವಿಚಾರವಾಗಿ ಗುಜರಾತ್‌ನ ಸೂರತ್‌ ಕೋರ್ಟ್‌ನಿಂದ ದೋಷಿ ಎಂದು ತೀರ್ಮಾನವಾಗಿರುವ ರಾಹುಲ್ ಗಾಂಧಿ ಈ ಕಾರಣಕ್ಕಾಗಿ ಸಂಸದ ಸ್ಥಾನವನ್ನೂ ಕಳೆದುಕೊಂಡಿದ್ದರು. ಈಗ ಇದೇ ಕೇಸ್‌ನಲ್ಲಿ ಪಾಟ್ನಾ ಕೋರ್ಟ್‌ ರಾಹುಲ್‌ ಗಾಂಧಿಗೆ ಸಮನ್ಸ್‌ ಜಾರಿ ಮಾಡಿದೆ. 

ನವದೆಹಲಿ (ಏ.12): ಬಿಹಾರದ ಪಾಟ್ನಾ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮೋದಿ ಸರ್‌ನೇಮ್‌ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮಾನನಷ್ಟ ಮೊಕದ್ದಮೆಯಲ್ಲಿ ಏಪ್ರಿಲ್ 25 ರಂದು ಕೋರ್ಟ್‌ಗೆ ಖುದ್ದು ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ. ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಇಲ್ಲಿನ ಸಂಸದ/ಶಾಸಕ ನ್ಯಾಯಾಲಯದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದಿ ದೇವ್ ಅವರ ಸಂಸದ/ಶಾಸಕ ನ್ಯಾಯಾಲಯವು ಮಾರ್ಚ್ 18 ರಂದು ಆದೇಶವನ್ನು ನೀಡಿದ್ದು, ಏಪ್ರಿಲ್ 12 ರಂದು ಗಾಂಧಿ ಕೋರ್ಟ್‌ನ ಮುಂದೆ ಹಾಜರಾಗಬೇಕು ಎಂದು ಆದೇಶ ನೀಡಿತ್ತು. ಬುಧವಾರದ ವಿಚಾರಣೆಯ ಸಂದರ್ಭದಲ್ಲಿ, ಪ್ರತಿವಾದಿ ವಕೀಲರು ಇಡೀ ತಂಡವು ಸೂರತ್ ಪ್ರಕರಣದಲ್ಲಿ ನಿರತವಾಗಿದೆ, ಇದರಲ್ಲಿ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ ಎಂದು ತಿಳಿಸುವ ಮತ್ತೊಂದು ದಿನಾಂಕವನ್ನು ಕೋರಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದಕ್ಕೆ, ನ್ಯಾಯಾಧೀಶರು ಏಪ್ರಿಲ್ 25 ರಂದು ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕದಂದು ನ್ಯಾಯಾಲಯದ ಮುಂದೆ ರಾಹುಲ್‌ ಗಾಂಧಿ ಖುದ್ದು ಹಾಜರಿರಬೇಕು ಎಂದು ರಾಹುಲ್‌ ಗಾಂಧಿಯವ ವಕೀಲರಿಗೆ ತಿಳಿಸಿದೆ. ದೂರುದಾರರ ಕಡೆಯಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ಎಲ್ಲಾ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಮತ್ತು ಈಗ ಗಾಂಧಿಯವರ ಹೇಳಿಕೆಯನ್ನು ಮಾತ್ರ ದಾಖಲಿಸಬೇಕಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಪ್ರಿಯಾ ಗುಪ್ತಾ ಮಾಧ್ಯಮದವರಿಗೆ ತಿಳಿಸಿದ್ದಾರೆ.

ರಾಹುಲ್‌ಗೆ ಮತ್ತೆ ಸಂಕಷ್ಟ: ಲಂಡನ್‌ನಲ್ಲಿ ದೂರು ದಾಖಲಿಸುವ ಬೆದರಿಕೆಯೊಡ್ಡಿದ ಲಲಿತ್ ಮೋದಿ

ಸೂರತ್ ನ್ಯಾಯಾಲಯವು ಇತ್ತೀಚೆಗೆ ಇದೇ ಹೇಳಿಕೆಯ ಕುರಿತಾಗಿ ರಾಹುಲ್‌ ಗಾಂಧಿಯನ್ನು ದೋಷಿ ಎಂದು ಘೋಷಣೆ ಮಾಡಿತ್ತು. ಎರಡು ವರ್ಷದ ಶಿಕ್ಷೆ ಪಡೆದುಕೊಂಡ ಹಿನ್ನಲೆಯಲ್ಲಿ ಅವರನ್ನು ಲೋಕಸಭೆಯಿಂದ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿತ್ತು.

'ಮನೆ ಖಾಲಿ ಮಾಡಿ..' ರಾಹುಲ್‌ ಗಾಂಧಿಗೆ ನೋಟಿಸ್‌ ನೀಡಿದ ವಸತಿ ಸಮಿತಿ!