ಶ್ರೀ ಮುರುಘಾಮಠದ ಮಠಾಧೀಶರ ವಿರುದ್ಧ ಅತ್ಯಾಚಾರ ಆರೋಪದ ಹಿನ್ನೆಲೆ ಪ್ರಸಿದ್ಧ ಪತ್ರಕರ್ತ ಪಿ ಸಾಯಿನಾಥ್ ಅವರು ತಮಗೆ ಚಿತ್ರದುರ್ಗ ಮಠದಿಂದ ನೀಡಲಾಗಿರುವ ಬಸವಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ.
ನವದೆಹಲಿ(ಸೆ.2): ಚಿತ್ರದುರ್ಗದ ಮುರುಘಾ ಮಠದಲ್ಲಿ ಮಕ್ಕಳ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ ವಿರೋಧಿಸಿ ಹೆಸರಾಂತ ಪತ್ರಕರ್ತ ಪಿ. ಸಾಯಿನಾಥ್ ಅವರು 2017ರಲ್ಲಿ ಮುರುಘಾ ಮಠದಿಂದ ಕೊಡಲ್ಪಟ್ಟಿದ್ದ ಬಸವಶ್ರೀ ಪ್ರಶಸ್ತಿಯನ್ನು ಜೊತೆಗೆ 5 ಲಕ್ಷ ರೂ. ನಗದು ಬಹುಮಾನವನ್ನು ಹಿಂತಿರುಗಿಸಿದ್ದಾರೆ.
ಚಿತ್ರದುರ್ಗದ ಶ್ರೀ ಮುರುಘಾಮಠದ ಮಠಾಧೀಶರಾದ ಶ್ರೀ ಶಿವಮೂರ್ತಿ ಮುರುಘಾ ಶರಣರು ಭಾಗಿಯಾಗಿರುವ ಭೀಕರ ಬೆಳವಣಿಗೆಗಳ ಬಗ್ಗೆ ಮಾಧ್ಯಮ ವರದಿಗಳಿಂದ ನನಗೆ ತಿಳಿಯಿತು. ಇದರಿಂದ ನಾನು ಹೆಚ್ಚು ವಿಚಲಿತನಾಗಿದ್ದೇನೆ. ಅವರು ಈಗ ಪೋಕ್ಸೊ ಮತ್ತು ಎಸ್ಸಿ/ಎಸ್ಟಿ ಕಾಯ್ದೆಯಡಿ ಮಕ್ಕಳ ಮೇಲೆ, ವಿಶೇಷವಾಗಿ ಪ್ರೌಢಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ. ಮಕ್ಕಳ ಮೇಲಿನ ಯಾವುದೇ ರೀತಿಯ ಅಪರಾಧಗಳನ್ನು ಖಂಡಿಸಲು ನನಗೆ ಕಠಿಣ ಪದಗಳು ಸಿಗುತ್ತಿಲ್ಲ . 2017ರಲ್ಲಿ ಮಠವು ನನಗೆ ನೀಡಿದ ಬಸವಶ್ರೀ ಪ್ರಶಸ್ತಿಯನ್ನು (ಮತ್ತು ಅದರೊಂದಿಗೆ ಬಂದಿರುವ 5 ಲಕ್ಷ ರೂ. ಬಹುಮಾನದ ಮೊತ್ತವನ್ನು ಚೆಕ್ ಮೂಲಕ) ನಾನು ಈ ಮೂಲಕ ಬದುಕುಳಿದವರಿಗೆ ಮತ್ತು ಈ ಪ್ರಕರಣದಲ್ಲಿ ನ್ಯಾಯದ ಕಾರಣಕ್ಕಾಗಿ ಹಿಂದಿರುಗಿಸುತ್ತೇನೆ. ಈ ರೀತಿಯ ಘೋರ ಘಟನೆಗಳನ್ನು ಬೆಳಕಿಗೆ ತರಲು ಮೈಸೂರು ಮೂಲದ ಎನ್ಜಿಒ "ಒಡನಾಡಿ" ಯ ಪ್ರಯತ್ನಗಳು ಮತ್ತು ಇಂತಹ ಸಾಮಾಜಿಕ ಅನಿಷ್ಟತೆಗಳ ವಿರುದ್ಧ ದಶಕಗಳ ಹೋರಾಟದ ಬಗ್ಗೆ ನನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇನೆ. ಜೊತೆಗೆ ಹಗರಣದ ತನಿಖೆಯನ್ನು ತೀವ್ರವಾಗಿ ಮುಂದುವರಿಬೇಕು. ಮತ್ತು ಯಾವುದೇ ರೀತಿಯಲ್ಲೂ ಪ್ರಕರಣದ ಬಗ್ಗೆ ರಾಜಿ ಮಾಡಿಕೊಳ್ಳಲು ಅವಕಾಶ ನೀಡದಂತೆ ಕರ್ನಾಟಕ ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ ಎಂದು ಪಿ ಸಾಯಿನಾಥ್ ಬರೆದುಕೊಂಡಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಮುರುಘಾ ಶರಣರ ಶಿಷ್ಯ, ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿ ಹೈಡ್ರಾಮಾ
ಮುರುಘಾ ಶ್ರೀ ಕೇಸಲ್ಲಿ ಹೈಕೋರ್ಚ್ ನಿಗಾಕ್ಕೆ ವಕೀಲರ ಮನವಿ
ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಮೇಲೆ ನಿಗಾಯಿಡಲು ಹೈಕೋರ್ಚ್ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಕೋರಿ ಕೆಲ ವಕೀಲರು ರಿಜಿಸ್ಟ್ರಾರ್ ಜನರಲ್ಗೆ ಶುಕ್ರವಾರ ಮನವಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನ ವಕೀಲರಾದ ಸಿದ್ಧಾಥ್ರ್ ಭೂಪತಿ, ಟಿ.ಶ್ರೀರಾಮ್ ನಾಯ್್ಕ, ಬಿ.ಎಸ್. ಗಣೇಶ್ ಪ್ರಸಾದ್, ವಿ.ಗಣೇಶ್, ಮತ್ತು ಕೆ.ಎ. ಪೊನ್ನಣ್ಣ ಅವರು ಹೈಕೋರ್ಚ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮರುಘಾ ಶ್ರೀಗಳಿಗೆ ಮತ್ತೊಂದು ಶಾಕ್, ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್!
ಪ್ರಕರಣದಲ್ಲಿ ಸಂಬಂಧ ಈವರೆಗೂ ಸೂಕ್ತ ರೀತಿಯಲ್ಲಿ ತನಿಖೆ ನಡೆದಿಲ್ಲ. ಆದ್ದರಿಂದ ಮುಕ್ತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ ಕೂಡಲೇ ಹೈಕೋರ್ಚ್ ಮಧ್ಯಪ್ರವೇಶಿಸಬೇಕು. ತನಿಖೆ ಮೇಲೆ ನಿಗಾಯಿಡಬೇಕು ಎಂದು ವಕೀಲರು ಕೋರಿದ್ದಾರೆ.
ತನಿಖೆಗೆ ಸಿಬಿಐಗೆ ವಹಿಸಿ:ಇದಲ್ಲದೆ, ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ. ವೆಂಕಟೇಶ್ ಎಂಬುವರುಹೈಕೋರ್ಚ್ ರಿಜಿಸ್ಟ್ರಾರ್ ಜನರಲ್ ಮೂಲಕ ಸುಪ್ರಿಂ ಕೋರ್ಚ್ಗೆ ಪತ್ರ ಬರೆದಿದ್ದು, ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಸಮಾಜದ ಹಲವು ಗಣ್ಯರು ಪ್ರಕರಣದ ಆರೋಪಿಯಾಗಿರುವ ಮರುಘಾ ಮಠದ ಶರಣರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಇದರಿಂದ ಅವರು ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ತಕ್ಷಣವೇ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ತನಿಖೆಯನ್ನು ಸಿಬಿಐಗೆ ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
