ಗಂಟ್ಮುಲ್ಲಾ ಬಾರಾಮುಲ್ಲಾ ಪ್ರದೇಶದ ಮಸೀದಿಯಲ್ಲಿ ನಿವೃತ್ತ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮೊಹಮ್ಮದ್ ಶಫಿ ಪ್ರಾರ್ಥನೆ ಮಾಡುತ್ತಿದ್ದಾಗ ಅವರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. 

ಶ್ರೀನಗರ (ಡಿಸೆಂಬರ್ 24, 2023): ಕಣಿವೆ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ ಮತ್ತೆ ಮುಂದುವರಿದಿದೆ. ಭಾನುವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಗಂಟ್ಮುಲ್ಲಾ ಬಾರಾಮುಲ್ಲಾ ಪ್ರದೇಶದ ಮಸೀದಿಯಲ್ಲಿ ನಿವೃತ್ತ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮೊಹಮ್ಮದ್ ಶಫಿ ಪ್ರಾರ್ಥನೆ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

Add Asianetnews Kannada as a Preferred SourcegooglePreferred

ಘಟನೆ ಬಳಿಕ ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದರು. ಈ ಸಂಬಂಧ ಮಾಹಿತಿ ನೀಡಿದ ಕಾಶ್ಮೀರ ವಲಯ ಪೊಲೀಸರು, ಮಸೀದಿಯಲ್ಲಿ ಅಜಾನ್ ಪ್ರಾರ್ಥನೆ ಮಾಡುತ್ತಿದ್ದಾಗ ಗಂಟ್ಮುಲ್ಲಾ, ಶೀರಿ ಬಾರಾಮುಲ್ಲಾದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಶ್ರೀ ಮೊಹಮ್ಮದ್ ಶಫಿ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ ಗಾಯಗೊಂಡರು. ಪ್ರದೇಶವನ್ನು ಸುತ್ತುವರಿಯಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Scroll to load tweet…

ಇದನ್ನು ಓದಿ: ಪೂಂಚ್ ಸೆಕ್ಟರ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ, ಭಾರತೀಯ ಸೇನಾ ಮೇಲೆ ಗುಂಡಿನ ಸುರಿಮಳೆ!

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವಾರು ಉದ್ದೇಶಿತ ಹತ್ಯೆಗಳು ನಡೆದಿವೆ. ಈ ತಿಂಗಳ ಆರಂಭದಲ್ಲಿ ಶ್ರೀನಗರದಲ್ಲಿ ಪೊಲೀಸ್ ಪೇದೆಯೊಬ್ಬರಿಗೆ ಭಯೋತ್ಪಾದಕರು ಗುಂಡು ಹಾರಿಸಿ ಗಾಯಗೊಂಡಿದ್ದರು. ಮೊಹಮ್ಮದ್ ಹಫೀಜ್ ಚಾದ್ ಎಂದು ಗುರುತಿಸಲಾದ ಕಾನ್‌ಸ್ಟೆಬಲ್ ಹಮ್ದನಿಯಾ ಕಾಲೋನಿ ಬೆಮಿನಾದಲ್ಲಿರುವ ಅವರ ಮನೆಯ ಬಳಿ ದಾಳಿ ನಡೆಸಲಾಗಿತ್ತು.

ಇದಕ್ಕೂ ಮೊದಲು ಅಕ್ಟೋಬರ್‌ನಲ್ಲಿ, ಮಸ್ರೂರ್ ಅಹ್ಮದ್ ವಾನಿ ಎಂದು ಗುರುತಿಸಲಾದ ಪೊಲೀಸ್ ಇನ್ಸ್‌ಪೆಕ್ಟರ್ ಕ್ರಿಕೆಟ್ ಆಡುತ್ತಿದ್ದಾಗ ಈದ್ಗಾದಲ್ಲಿ ಅವರ ಮನೆಯ ಹೊರಗೆ ದಾಳಿ ನಡೆಸಲಾಗಿತ್ತು. ಆ ಅಧಿಕಾರಿ ಶ್ರೀನಗರದ ಪಾರಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ನಂತರ ಅವರನ್ನು ರಾಷ್ಟ್ರ ರಾಜಧಾನಿಯ ಏಮ್ಸ್‌ಗೆ ಸ್ಥಳಾಂತರಿಸಲಾಯಿತು. ಆದರೂ, ಅವರನ್ನು ಬದುಕಿಸಿಕೊಳ್ಳಲು ವೈದ್ಯರಿಗೆ ಸಾಧ್ಯವಾಗಲಿಲ್ಲ.

Article 370: ಸುಪ್ರೀಂಕೋರ್ಟ್‌ ತೀರ್ಪು ಐತಿಹಾಸಿಕವೆಂದ ಬಿಜೆಪಿ; ತಕ್ಷಣ ಎಲೆಕ್ಷನ್‌ಗೆ ‘ಕೈ’ ಆಗ್ರಹ

ಈ ಮಧ್ಯೆ, ರಾಜೌರಿ ಸೆಕ್ಟರ್‌ನ ಡೇರಾ ಕಿ ಗಲಿ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರನ್ನು ವಶಕ್ಕೆ ಪಡೆಯಲು ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಸೇನಾ ಯೋಧರನ್ನು ಭಯೋತ್ಪಾದಕರು ಹತ್ಯೆ ಮಾಡಿದ ನಂತರ ಈ ಘಟನೆ ಸಂಭವಿಸಿದೆ. 

ಕಾಶ್ಮೀರ ವಿಮೋಚನೆಯ ಮೋದಿ ಕನಸು ನನಸು: ಏಕತಾ ಯಾತ್ರೆಯಿಂದ ಆರಂಭಿಸಿ ಮೂರೂವರೆ ದಶಕಗಳ ಹೋರಾಟ