* ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅನಾರೋಗ್ಯ* ಲಾಲು ಪ್ರಸಾದ್ ಯಾದವ್ ಆರೋಗ್ಯ ಮತ್ತಷ್ಟು ಗಂಭೀರ* ಲಾಲು ಯಾದವ್ AIIMSಗೆ ಏರ್‌ಲಿಫ್ಟ್‌

ಪಾಟ್ನಾ(ಜು.06): ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕುರಿತಾಗಿ ಪ್ರಮುಖ ಸುದ್ದಿ ಹೊರ ಬಿದ್ದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಲಾಲು ಯಾದವ್ ಅವರನ್ನು ಉತ್ತಮ ಚಿಕಿತ್ಸೆಗಾಗಿ ವಿಮಾನದ ಮೂಲಕ ದೆಹಲಿಗೆ ಕರೆದೊಯ್ಯಲಾಗುವುದು. ಅವರನ್ನು ದೆಹಲಿ ಏಮ್ಸ್‌ಗೆ ದಾಖಲಿಸಲು ಸಿದ್ಧತೆ ನಡೆದಿದೆ. ಏರ್ ಆಂಬ್ಯುಲೆನ್ಸ್ ಮೂಲಕ ಆರ್ ಜೆಡಿ ಮುಖ್ಯಸ್ಥರನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಹೇಳಲಾಗುತ್ತಿದೆ. ಲಾಲು ಪ್ರಸಾದ್ ಯಾದವ್ ಅವರು ಈಗಾಗಲೇ ದೆಹಲಿ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಏಮ್ಸ್ ವೈದ್ಯರು ಅವರ ಮೂತ್ರಪಿಂಡ ಸಮಸ್ಯೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರನ್ನು ಪಾಟ್ನಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಲಾಲು ಪ್ರಸಾದ್ ಯಾದವ್ ನಿರಂತರವಾಗಿ ಐಸಿಯುನಲ್ಲಿದ್ದಾರೆ.

Add Asianetnews Kannada as a Preferred SourcegooglePreferred

ಲಾಲು ಪ್ರಸಾದ್ ಯಾದವ್ ಅವರು ತಮ್ಮ ಮನೆಯಲ್ಲಿಯೇ ಅನಾರೋಗ್ಯಕ್ಕೀಡಾಗಿದ್ದರು. ಮೆಟ್ಟಿಲಿನಿಂದ ಜಾರಿ ಬಿದ್ದಿದ್ದ ಅವರು ಭುಜದ ಮೂಳೆ ಮುರಿತವಾಗಿದ್ದರೆ, ಬೆನ್ನುಮೂಳೆಗೂ ಏಟು ಬಿದ್ದಿತ್ತು. ಕೂಡಲೇ ಅವರನ್ನು ಪಾಟ್ನಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಡಿಸ್ಚಾರ್ಜ್‌ ಆಗಿತ್ತಾದರೂ, ಮತ್ತೆ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಲಾಲು ಯಾದವ್ ಪಾಟ್ನಾದ ಪಾರಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂಬುವುದು ಉಲ್ಲೇಖನೀಯ. ಅವರ ಆರೋಗ್ಯವನ್ನು ನೋಡಿದಾಗ, ಈಗ ಅವರನ್ನು ದೆಹಲಿ ಏಮ್ಸ್‌ಗೆ ಸ್ಥಳಾಂತರಿಸಲು ಸಿದ್ಧತೆಗಳು ನಡೆಯುತ್ತಿವೆ. ಈ ಹಿಂದೆ ಲಾಲು ಕುಟುಂಬ ಈ ಬಗ್ಗೆ ಚರ್ಚೆ ನಡೆಸಿತ್ತು. ಲಾಲು ಯಾದವ್ ಅವರ ಆರೋಗ್ಯ ಮೊದಲಿಗಿಂತ ಹದಗೆಟ್ಟಿದೆ, ಆದ್ದರಿಂದ ಅವರನ್ನು ಉತ್ತಮ ಚಿಕಿತ್ಸೆಗಾಗಿ ದೆಹಲಿ ಏಮ್ಸ್‌ಗೆ ದಾಖಲಿಸುವ ಯೋಜನೆ ಇದೆ.

ಭಾವುಕ ಚಿತ್ರ ಹಂಚಿಕೊಂಡ ಮಗಳು 

ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ತಂದೆಯ ಭಾವನಾತ್ಮಕ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರವು ಕಳೆದ ಕೆಲವು ದಿನಗಳಿಂದ ಲಾಲು ಯಾದವ್ ಅವರನ್ನು ದಾಖಲಿಸಿರುವ ಐಸಿಯುನಲ್ಲಿದೆ. ತಂದೆ ಲಾಲು ಯಾದವ್ ಅವರ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ರೋಹಿಣಿ, 'ನನ್ನ ನಾಯಕ, ನನ್ನ ಬೆನ್ನೆಲುಬು ಅಪ್ಪ, ಬೇಗ ಗುಣಮುಖರಾಗಿ. ಎಲ್ಲ ಅಡೆತಡೆಗಳಿಂದ ಮುಕ್ತಿ ಪಡೆದವನಿಗೆ ಕೋಟಿ ಕೋಟಿ ಜನರ ಆಶೀರ್ವಾದವಿದೆ. ಅವನ ಕಣ್ಣುಗಳು ಅವನ ಮೇಲೆ ಸ್ಥಿರವಾಗಿವೆ ಎಂದಿದ್ದಾರೆ.

ಲಾಲುಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರಿಗೆ ಕರೆ ಮಾಡಿ ಲಾಲು ಪ್ರಸಾದ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಲಾಲು ಯಾದವ್ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಮನೆಯಲ್ಲಿ ಬಿದ್ದ ಲಾಲು ಯಾದವ್ ಅವರನ್ನು ನಿರಂತರವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪಾಟ್ನಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.