ಈ ಬಾರಿ ಶಬರಿಮಲೆ ಯಾತ್ರೆ ಶಾಂತಿಯುತ: 156 ಕೋಟಿ ಆದಾಯ| ವಾರ್ಷಿಕ ಯಾತ್ರೆಯ 41 ದಿನಗಳ ಮೊದಲ ಚರಣ ಶುಕ್ರವಾರ ಮಂಡಲ ಪೂಜೆಯೊಂದಿಗೆ ಅಂತ್ಯ

ಶಬರಿಮಲೆ[ಡಿ.27]: ಶಬರಿಮಲೆ ಅಯ್ಯಪ್ಪಸ್ವಾಮಿ ವಾರ್ಷಿಕ ಯಾತ್ರೆಯ 41 ದಿನಗಳ ಮೊದಲ ಚರಣ ಶುಕ್ರವಾರ ಮಂಡಲ ಪೂಜೆಯೊಂದಿಗೆ ಅಂತ್ಯಗೊಳ್ಳಲಿದೆ.

Add Asianetnews Kannada as a Preferred SourcegooglePreferred

ನ.16ರಿಂದ ಶಬರಿಮಲೆ ಯಾತ್ರೆ ಆರಂಭವಾಗಿತ್ತು. ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್‌ ಅವಕಾಶ ಕಲ್ಪಿಸಿದ್ದರಿಂದ ಕಳೆದ ವರ್ಷ ಸಂಪ್ರದಾಯ ವಾದಿಗಳಿಂದ ಭಾರೀ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಶಬರಿಮಲೆಯಲ್ಲಿ ಈ ವರ್ಷ ಯಾವುದೇ ಪ್ರತಿಭಟನೆಗಳು ನಡೆಯದೇ ಯಾತ್ರೆ ಶಾಂತಿಯುತವಾಗಿತ್ತು.

ಶಾಂತಿಯು ವಾತಾವರಣ ನೆಲೆಸಿದ್ದರಿಂದ ಈ ಬಾರಿ ಶಬರಿಮಲೆಗೆ ಭೇಟಿ ನೀಡಿದ ಭಕ್ತರ ಸಂಖ್ಯೆಯೂ ಹೆಚ್ಚಳವಾಗಿದ್ದು, ದೇವಾಲಯಕ್ಕೆ 156 ಕೋಟಿ ರು. ಆದಾಯ ಸಂಗ್ರಹವಾಗಿದೆ.