Asianet Suvarna News Asianet Suvarna News

ಶಬರಿಮಲೆ ದೇಗುಲದಿಂದ ಮಹತ್ವದ ಆದೇಶ : ಭಕ್ತರೇ ಗಮನಿಸಿ

ಈಗಾಗಲೇ ಶಬರಿಮಲೆ ಅಯ್ಯಪ್ಪ ದೇಗುಲ ತೆರೆಯಲಾಗಿದ್ದು ಮಹತ್ವದ ಆದೇಶ ಹೊರಡಿಸಲಾಗಿದೆ.

Sabarimala to allow 1,000 devotees per day snr
Author
Bengaluru, First Published Oct 30, 2020, 11:36 AM IST

ಶಬರಿಮಲೆ (ಅ.30): ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವಾರದ ದಿನಗಳಲ್ಲಿ 1000 ಹಾಗೂ ಶನಿವಾರ, ಭಾನುವಾರಗಳಂದು 2000 ಮಂದಿಗೆ ಮಾತ್ರ ಶಬರಿಮಲೆ ಅಯ್ಯಪ್ಪ ದರ್ಶನ ಅವಕಾಶ ನೀಡಬೇಕು ಎಂದು ಕೇರಳ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ. 

ಮಂದಲ- ಮಕರ ಜ್ಯೋತಿ ಯಾತ್ರೆಯ ಸಂದರ್ಭದಲ್ಲಿ ಅಯ್ಯಪ್ಪ ದರ್ಶನಕ್ಕೆ ಬರುವವರಿಗೆ ಕೋವಿಡ್‌-19 ಇಲ್ಲ ಎಂಬ ವರದಿಯನ್ನು ಕಡ್ಡಾಯಗೊಳಿಸಬೇಕು. 

ಶಬರಿಮಲೆ ಪ್ರವೇಶಕ್ಕೆ ಕಂಡೀಶನ್ : ಯಾರಿಗಿಲ್ಲ ಪ್ರವೇಶ

ಅನ್ಯರಾಜ್ಯದಿಂದ ಬರುವವರು ಇಂತಹ ಪ್ರಮಾಣಪತ್ರ ತಂದಿದ್ದರೂ ನೀಲಕ್ಕಲ್‌ನಲ್ಲಿ ಮತ್ತೊಮ್ಮೆ ಅವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಬೇಕು. 60 ವರ್ಷ ಮೇಲ್ಪಟ್ಟವರು ತಮಗೆ ಯಾವುದೇ ಕಾಯಿಲೆ ಇಲ್ಲ ಎಂಬ ವರದಿಯನ್ನೂ ತರುವಂತಿರಬೇಕು ಎಂದು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದೆ.

Follow Us:
Download App:
  • android
  • ios