Asianet Suvarna News Asianet Suvarna News

ರಾಷ್ಟ್ರೀಯ ಉದ್ಯಾನ ಸುತ್ತ ಗಣಿ, ಕಟ್ಟಡ ನಿರ್ಮಾಣಕ್ಕೆ ಸುಪ್ರೀಂ ಬ್ರೇಕ್‌

* ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ಬಫರ್‌ ವಲಯ

* ಇಲ್ಲಿ ಗಣಿಗಾರಿಕೆ ನಡೆಯುವಂತಿಲ್ಲ

* ಕಾರ್ಖಾನೆ, ಕಟ್ಟಡ ತಲೆಯೆತ್ತುವಂತಿಲ್ಲ

* ಸುಪ್ರೀಂ ಕೋರ್ಚ್‌ ಮಹತ್ವದ ಆದೇಶ

* ಈ ಚಟುವಟಿಕೆಗಳ ಬಗ್ಗೆ 3 ತಿಂಗಳಲ್ಲಿ ವರದಿಗೆ ಸೂಚನೆ

SC bans mining within 1 km radius of national parks wildlife sanctuaries pod
Author
Bangalore, First Published Jun 4, 2022, 12:30 PM IST | Last Updated Jun 4, 2022, 12:30 PM IST

ನವದೆಹಲಿ(ಜೂ.04): ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ‘ಬಫರ್‌ ವಲಯ’ ಎಂದು ಪರಿಗಣಿಸಬೇಕು ಎಂದು ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯ, ಈ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯಬಾರದು ಹಾಗೂ ಕಾರ್ಖಾನೆಗಳು, ಕಾಯಂ ಕಟ್ಟಡಗಳು ತಲೆಯೆತ್ತಕೂಡದು ಎಂಬ ಮಹತ್ವದ ಸೂಚನೆ ನೀಡಿದೆ.

ಅರಣ್ಯ ರಕ್ಷಣೆ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಲ್‌. ನಾಗೇಶ್ವರರಾವ್‌ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

‘ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ (ಇಎಸ್‌ಝಡ್‌) ಎಂದು ಪರಿಗಣಿಸಬೇಕು. ಇಲ್ಲಿ ಗಣಿಗಾರಿಕೆಗೆ ಅನುಮತಿಸಕೂಡದು. ಕಾರ್ಖಾನೆ ಹಾಗೂ ಕಾಯಂ ಕಟ್ಟಡಗಳ ನಿರ್ಮಾಣ ನಡೆಯಬಾರದು. ಈ ವ್ಯಾಪ್ತಿಯಲ್ಲಿ ಈಗಾಗಲೇ ಕಟ್ಟಡಗಳು ತಲೆಯೆತ್ತಿದ್ದರೆ ಅಂಥ ಕಟ್ಟಡಗಳ ಪಟ್ಟಿಯನ್ನು ಎಲ್ಲ ರಾಜ್ಯಗಳ ಅರಣ್ಯ ಸಂರಕ್ಷಣಾಧಿಕಾರಿಗಳು ಸಿದ್ಧಪಡಿಸಬೇಕು ಹಾಗೂ ಇನ್ನು 3 ತಿಂಗಳ ಒಳಗೆ ನಮಗೆ ವರದಿ ಸಲ್ಲಿಸಬೇಕು’ ಎಂದು ನಿರ್ದೇಶಿಸಿತು.

‘ಸರ್ಕಾರದ ಸಹಾಯ ಪಡೆದು ಉಪಗ್ರಹ ಚಿತ್ರಗಳನ್ನು ಆಧರಿಸಿ ಅಥವಾ ಡ್ರೋನ್‌ ಮೂಲಕ ಚಿತ್ರೀಕರಣ ನಡೆಸಿ ಈ ಸಮೀಕ್ಷೆಯನ್ನು ಅರಣ್ಯ ಸಂರಕ್ಷಕರು ನಡೆಸಬಹುದು’ ಎಂದು ಕೋರ್ಚ್‌ ಸಲಹೆ ನೀಡಿತು.

Latest Videos
Follow Us:
Download App:
  • android
  • ios