Budget2022: ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಪುನಾರಂಭ
ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗವು ಸೋಮವಾರದಿಂದ ಆರಂಭವಾಗಲಿದ್ದು, ಭವಿಷ್ಯ ನಿಧಿ ಬಡ್ಡಿ ದರ ಇಳಿಕೆ ಸೇರಿದಂತೆ ನಾನಾ ವಿಷಯಗಳಲ್ಲಿ ಸರ್ಕಾರದ ವಿರುದ್ಧ ಸಮರ ಸಾರಲು ವಿಪಕ್ಷಗಳು ಸಜ್ಜಾಗಿವೆ.
ನವದೆಹಲಿ (ಮಾ.14): ಸಂಸತ್ತಿನ ಬಜೆಟ್ ಅಧಿವೇಶನದ (Budget Session of Parliament) ಎರಡನೇ ಭಾಗವು ಸೋಮವಾರದಿಂದ ಆರಂಭವಾಗಲಿದ್ದು, ಭವಿಷ್ಯ ನಿಧಿ ಬಡ್ಡಿ ದರ ಇಳಿಕೆ ಸೇರಿದಂತೆ ನಾನಾ ವಿಷಯಗಳಲ್ಲಿ ಸರ್ಕಾರದ ವಿರುದ್ಧ ಸಮರ ಸಾರಲು ವಿಪಕ್ಷಗಳು ಸಜ್ಜಾಗಿವೆ. ಮತ್ತೊಂದೆಡೆ ಈಗಾಗಲೇ ಮಂಡಿಸಿರುವ ಕೇಂದ್ರ ಬಜೆಟ್ಗೆ (Budget 2022) ಅನುಮೋದನೆ ಪಡೆದುಕೊಳ್ಳುವುದು ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಮಂಡನೆ ಸರ್ಕಾರದ ಪ್ರಮುಖ ಗುರಿಯಾಗಿದೆ.
ಉಕ್ರೇನಿನಲ್ಲಿ ಸಿಲುಕಿದ ಭಾರತೀಯರ ಸಂರಕ್ಷಣೆಯಲ್ಲಿ ವಿಳಂಬ ಮಾಡಿದ್ದಕ್ಕೆ ಕಾರಣಗಳು, ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ ಸಮಸ್ಯೆ, ಉದ್ಯೋಗಿಗಳ ಭವಿಷ್ಯ ನಿಧಿಯ ಬಡ್ಡಿದರ ಕಡಿತ ಮೊದಲಾದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲು ವಿರೋಧ ಪಕ್ಷಗಳು ಭರದಿಂದ ಸಿದ್ಧತೆ ನಡೆಸುತ್ತಿವೆ ಎನ್ನಲಾಗಿದೆ.
ಏಕ ದೇಶ, ಏಕ ಚುನಾವಣೆಗೆ ಗದ್ದಲ: ಕಲಾಪ ಬಲಿ
ಬಜೆಟ್ ಅಧಿವೇಶನ ಶುರು: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ (Budget Session) ಸೋಮವಾರ ಚಾಲನೆ ಸಿಗಲಿದೆ. ಮೊದಲ ದಿನವಾದ ಜ.31ರಂದು ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ramnath Kovind) ಅವರು ಭಾಷಣ ಮಾಡಲಿದ್ದಾರೆ. ಇವತ್ತೇ ಆರ್ಥಿಕ ಸಮೀಕ್ಷೆ ಮಂಡನೆಯಾಗಲಿದೆ.
ಫೆ.1ರಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2022-23ನೇ ಸಾಲಿನ ಬಜೆಟ್ ಅಧಿವೇಶನ ಮಂಡನೆ ಮಾಡಲಿದ್ದಾರೆ. ಹೀಗಾಗಿ ಈ ಎರಡೂ ದಿನಗಳ ಕಾಲ ಪ್ರಶ್ನೋತ್ತರ ಮತ್ತು ಶೂನ್ಯ ಅವಧಿ ಇರುವುದಿಲ್ಲ. ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಮೋದಿ ಅವರು ಫೆ.7ರಂದು ಉತ್ತರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ವಿಪಕ್ಷಗಳಿಗೆ ಪೆಗಾಸಸ್ ಅಸ್ತ್ರ: ಬಜೆಟ್ ಅಧಿವೇಶನ ಆರಂಭವಾಗಲಿರುವ ಬೆನ್ನಲ್ಲೇ, ಪೆಗಾಸಸ್ ಸ್ಪೈವೇರ್ ಅನ್ನು ಇಸ್ರೇಲ್ನಿಂದ ಭಾರತದ ಖರೀದಿಸಿದೆ ಎಂಬ ವರದಿಯು ವಿಪಕ್ಷಗಳಿಗೆ ವರದಾನವಾಗಿ ಪರಿಣಮಿಸಿದೆ. ಈಗಾಗಲೇ ರೈತರ ಸಮಸ್ಯೆಗಳು, ಗಡಿಬಿಕ್ಕಟ್ಟು, ಬೆಲೆ ಏರಿಕೆ ಮತ್ತು ಹಣದುಬ್ಬರ ವಿಚಾರಗಳನ್ನು ಬಳಸಿಕೊಂಡು ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದ ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳಿಗೆ ಪೆಗಾಸಸ್ ವಿಚಾರವು ಹೊಸ ಅಸ್ತ್ರವಾಗಿದೆ ಎನ್ನಲಾಗಿದೆ.
ಕರೆದರೂ ಎನ್ಡಿಎ ಸಭೆಗೆ ಚಿರಾಗ್ ಪಾಸ್ವಾನ್ ಗೈರು!
ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗ್ರತೆ: ಬಜೆಟ್ ಅಧಿವೇಶನದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಂಸತ್ತಿನ ಉಭಯ ಕಲಾಪವನ್ನು 2 ಹಂತಗಳಲ್ಲಿ ವಿಭಜಿಸಲಾಗಿದೆ. ಈ ಪೈಕಿ ಜ.31ರಿಂದ ಪೆ.11ರವರೆಗೆ 10 ಕಲಾಪಗಳು ಮತ್ತು ಉಳಿದ 19 ಕಲಾಪಗಳು ಮಾ.14ರಿಂದ ಏ.8ರವರೆಗೆ ನಡೆಯಲಿದೆ. ಸಾಮಾಜಿಕ ಅಂತರ ಪಾಲನೆಗಾಗಿ ರಾಜ್ಯಸಭೆ ಮತ್ತು ಲೋಕಸಭೆ ಕಲಾಪಗಳು ಪ್ರತ್ಯೇಕವಾಗಿ ನಡೆಯಲಿವೆ.
ಪ್ರತಿಪಕ್ಷಗಳ ಗದ್ದಲ ಸಂಭವ: ಸಂಸತ್ತಿನ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಮೊದಲ ದಿನ ರಾಷ್ಟ್ರಪತಿಗಳು ಜಂಟಿ ಕಲಾಪವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇಸ್ರೇಲ್ನಿಂದ ಪೆಗಾಸಸ್ ಗೂಢಚರ್ಯೆ ಸಾಫ್ಟ್ವೇರನ್ನು ಭಾರತ ಖರೀದಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಈ ವಿಚಾರವೂ ಸೇರಿದಂತೆ ರೈತರ ಸಮಸ್ಯೆಗಳು, ಗಡಿ ಬಿಕ್ಕಟ್ಟು, ಬೆಲೆ ಏರಿಕೆ ಮುಂತಾದ ವಿಚಾರದಲ್ಲಿ ಸರ್ಕಾರ-ಪ್ರತಿಪಕ್ಷಗಳ ನಡುವೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆಯಿದೆ.