ಕೇಂದ್ರ ಗೃಹ ಸಚಿವ ಭೇಟಿಯಾದ ನೂತನ ಸಚಿವೆ ಶೋಭಾ ಕರಂದ್ಲಾಜೆ ಶಾ ಭೇಟಿಯಾಗಿ ರೈತರ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸುವ ಭರವಸೆ ಸಂಪುಟ ಪುನಾರಚನೆ ವೇಳೆ ಮೋದಿ ಕ್ಯಾಬಿನೆಟ್ ಸೇರಿಕೊಂಡ ಶೋಭಾ

ನವದೆಹಲಿ(ಜು.15): ಕೇಂದ್ರ ಸಂಪುಟ ಪುನಾರಚನೆಯಲ್ಲಿ ಮೋದಿ ಕ್ಯಾಬಿನೆಟ್ ಸೇರಿಕೊಂಡ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಾರೆ. ಕೃಷಿ ಮತ್ತು ರೈತರ ಅಭಿವೃದ್ಧಿ ಖಾತೆ ರಾಜ್ಯ ಸಚಿವೆಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಶೋಭಾ, ರೈತರ ಕಲ್ಯಾಣಕ್ಕಾಗಿ ಶ್ರಮವಹಿಸುವುದಾಗಿ ಅಮಿತ್ ಶಾ ಜೊತೆಗಿನ ಮಾತುಕತೆಯಲ್ಲಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯದ ನಾಲ್ವರು ನೂತನ ಕೇಂದ್ರ ಸಚಿವರಿಂದ ಅಧಿಕಾರ ಸ್ವೀಕಾರ

ತನ್ನ ಮೇಲೆ ನಂಬಿಕೆ ಇಟ್ಟು ಸಂಪುಟಕ್ಕೆ ಸೇರಿಸಿಕೊಂಡಿರುವ ಪ್ರಧಾನಿ ಮೋದಿ ಹಾಗೂ ಅಮಿತ್ ಶಾಗೆ ಶೋಭಾ ಕೃತಜ್ಞತೆ ಸಲ್ಲಿಸಿದ್ದಾರೆ. ಅಮಿತ್ ಶಾ ಭೇಟಿ ಮಾಹಿತಿಯನ್ನು ಶೋಭಾ ಕರಂದ್ಲಾಜೆ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ.

ಮೋದಿ ಕನಸು ಈಡೇರಿಸಲು ನಾನು ಬದ್ಧ: ರೈತರಿಗೆ ಸಾಲದಿಂದ ಮುಕ್ತಿ ಕೊಡಿಸಲು ಯತ್ನ

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿರುವುದು ಸಂತಸ ತಂದಿದೆ. ನನ್ನ ಮೇಲೆ ನಂಬಿಕೆ ಇಟ್ಟು ದೊಡ್ಡ ಜವಾಬ್ದಾರಿಯನ್ನು ನೀಡಿರುವುದುಕ್ಕೆ ಕೃತಜ್ಞತೆಗಳು. ಕೃಷಿ ಸಮುದಾಯದ ಆಕಾಂಕ್ಷೆ ಈಡೇರಿಸಲು ಬದ್ಧವಾಗಿದ್ದೇನೆ. ಇದಕ್ಕೆ ಅಮಿತ್ ಶಾ ಸೇರಿದಂತೆ ಹಿರಿಯರ ಮಾರ್ಗದರ್ಶನ ಕೋರಿದ್ದೇನೆ ಎಂದು ಶೋಭಾ ಟ್ವೀಟ್ ಮಾಡಿದ್ದಾರೆ.

Scroll to load tweet…

ಅಮಿತ್ ಶಾ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದ ಶೋಭಾ ಕರಂದ್ಲಾಜೆ, ರೈತರ ಅಭಿವೃದ್ಧಿ ಹಾಗೂ ಸಮಸ್ಯೆಗೆ ದ್ವನಿಯಾಗುವುದಾಗಿ ಹೇಳಿದ್ದಾರೆ.