userpic
user icon
0 Min read

ಹನುಮಾನ್ ಜಯಂತಿ ಮೆರವಣಿಗೆ ಮಸೀದಿ ಮುಂದೆ ಸಾಗುತ್ತಿದ್ದಂತೆ ಕಲ್ಲು ತೂರಾಟ: 9 ಜನರ ಬಂಧನ

Stone Pelting on Hanuman Jayanti Procession in Guna 9 Held
Stone-Pelting On Hanuman Jayanti Procession

Synopsis

ಮಧ್ಯಪ್ರದೇಶದ ಗುಣದಲ್ಲಿ ಹನುಮಾನ್ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಲಾಗಿದೆ ಮತ್ತು 25 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಗುಣ: ಹನುಮಾನ್ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಧ್ಯಪ್ರದೇಶದ  ಗುಣದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ, 25 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕಿಶೋರ್ ಕನ್ಯಾಳ್ ಹಾಗೂ ಎಸ್‌ಪಿ ಸಂಜೀವ್ ಕುಮಾರ್ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಎರಡು ಸಮುದಾಯಗಳ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ಕೌನ್ಸಿಲರ್ ಗಬ್ಬರ್ ಎಂದೂ ಕರೆಯಲ್ಪಡುವ ಓಂಪ್ರಕಾಶ್ ಕುಶ್ವಾಹ್, ಶನಿವಾರ ಪೊಲೀಸ್ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಸುಮಾರು 25 ಜನರ ಮೇಲೆ ಕೊಲೆ ಯತ್ನ, ಹಲ್ಲೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊರಿಸಲಾಗಿದೆ. ಹನುಮಾನ್ ಜಯಂತಿಯ ಧಾರ್ಮಿಕ ಮೆರವಣಿಗೆ ಸಾಗುವ ವೇಳೆ ಕೆಲವರು ಗುಂಡನ್ನು ಕೂಡ ಹಾರಿಸಿದ್ದಾರೆ ಎಂದು ಅವರು ದೂರಿದ್ದಾರೆ. ವರದಿಗಳ ಪ್ರಕಾರ, ಏಪ್ರಿಲ್ 12 ರಂದು ಅಂದರೆ ನಿನ್ನೆ ಸಂಜೆ 4 ಗಂಟೆಗೆ ಶಿವಾಜಿ ನಗರದ ಮಾತಾ ಮಂದಿರದಿಂದ ಮೆರವಣಿಗೆ ಪ್ರಾರಂಭವಾಯಿತು. ಮೆರವಣಿಗೆಯನ್ನು ಡಿಜೆ ಮುನ್ನಡೆಸಿದರೆ, ಯುವಕರ ಗುಂಪು ಅದರ ಹಿಂದೆ ನೃತ್ಯ ಮಾಡುತ್ತಾ ಸಾಗುತ್ತಿತ್ತು. 

ವಕ್ಫ್‌ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳ ಧಗಧಗ: 3 ಬಲಿ, ತನಿಖೆಗೆ ಬಿಜೆಪಿ ಪಟ್ಟು

ಸಂಜೆ 7:30 ರ ಸುಮಾರಿಗೆ ಮೆರವಣಿಗೆ ಕರ್ನಲ್‌ಗಂಜ್ ಪ್ರದೇಶವನ್ನು ತಲುಪಿ ಮಸೀದಿಯ ಬಳಿ ನಿಂತಿತು. ಇಲ್ಲಿಯೇ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಇದೂ ಎರಡೂ ಕಡೆ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಗುಂಪನ್ನು ಚದುರಿಸಿದರು. ಆ ರಾತ್ರಿ ನಂತರ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಗುನಾ ಎಸ್ಪಿ ಸಂಜೀವ್ ಕುಮಾರ್ ಅವರೊಂದಿಗೆ ಮಾತನಾಡಿ ಘಟನೆಯ ಕುರಿತು ಮಾಹಿತಿ ಪಡೆದರು. ಇತ್ತ ಕಲ್ಲು ತೂರಾಟದ ನಂತರ, ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಹನುಮಾನ್ ಚೌಕ್‌ನಲ್ಲಿ ಜಮಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಅವರನ್ನು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗುವಂತೆ ಮನವೊಲಿಸಿದರು, ನಂತರ ರಸ್ತೆ ತಡೆ ಕೊನೆಗೊಂಡಿತು.

Video | ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು, ಬಾಟಲಿ ತೂರಿದ ಕಿಡಿಗೇಡಿಗಳು!

 


 

Download App

Latest Videos